9:13 PM Thursday27 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಗಿರಿಜಾ ಶಂಕರರ ಅದ್ದೂರಿ ಕಲ್ಯಾಣೋತ್ಸವ: ನಂಜುಂಡೇಶ್ವರನ ಕಾಶಿಯಾತ್ರೆ ಸಂಪನ್ನ

11/07/2024, 16:33

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ದಕ್ಷಿಣ ಕಾಶಿ ನಂಜನಗೂಡಿನ ಶ್ರೀ ಶ್ರೀಕಂಠೇಶ್ವರ ಸ್ವಾಮಿ ದೇವಾಲಯದಲ್ಲಿ 2024ರ ಶ್ರೀ ಗಿರಿಜಾ ಕಲ್ಯಾಣ ಮಹೋತ್ಸವವು ದೇವಾಲಯದ ಪ್ರಧಾನ ಆಗಮಿಕರಾದ ನಾಗಚಂದ್ರ ದೀಕ್ಷಿತ್ ಅವರ ಪೌರೋಹಿತ್ಯದಲ್ಲಿ ಸಡಗರ ಸಂಭ್ರಮ ಹಾಗೂ ಶ್ರದ್ಧಾಭಕ್ತಿಯಿಂದ ನೆರವೇರಿತು.


ಮಂಗಳವಾರ ಬೆಳಿಗ್ಗೆಯಿಂದಲೇ ಹಲವು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಪ್ರಾರಂಭವಾದ ಕಲ್ಯಾಣೋತ್ಸವದಲ್ಲಿ ಬುಧವಾರ ಸಂಜೆ 5:00 ಗಂಟೆಗೆ ಶ್ರೀ ನಂಜುಂಡೇಶ್ವರರ ಕಾಶಿಯಾತ್ರೆ ನಡೆಯಿತು. ಕಾಶಿಯಾತ್ರೆಯಲ್ಲಿ ಬಣ್ಣ ಬಣ್ಣದ ಹೂವು ಹಾಗೂ ವಜ್ರ ವೈಡೂರ್ಯಗಳಿಂದ ಅಲಂಕರಿಸಲಾದ ಶ್ರೀ ನಂಜುಂಡೇಶ್ವರರ ಉತ್ಸವ ಮೂರ್ತಿಯನ್ನು ಹಲವು ಜಾನಪದ ಕಲಾ ತಂಡಗಳೊಂದಿಗೆ ದೇವಾಲಯದ ಸುತ್ತ ಮೆರವಣಿಗೆ ನಡೆಸಲಾಯಿತು.
ನಂದಿಧ್ವಜ, ನಂದಿ ಕಂಬ ಕುಣಿತ, ಹುಲಿ ವೇಷ, ವೀರಗಾಸೆ, ಪೂಜಾ ಕುಣಿತ, ಒನಕೆ ನೃತ್ಯ, ಗಾಡಿ ಗೊಂಬೆ ಸೇರಿದಂತೆ ವಿವಿಧ ಜಾನಪದ ಕಲಾತಂಡಗಳು ಕಾಶಿಯಾತ್ರೆಗೆ ಮೆರಗು ನೀಡಿದವು.
ಕಾಶಿಯಾತ್ರೆ ಮುಗಿಸಿ ಬಂದ ಶ್ರೀ ಯವರ ಉತ್ಸವ ಮೂರ್ತಿಯನ್ನು ದೇವಾಲಯದ ಮುಂಭಾಗ ಇರಿಸಿ ಪೂಜೆ ಸಲ್ಲಿಸಲಾಯಿತು. ನಂತರ ಅಲಂಕೃತ ಶ್ರೀ ಪಾರ್ವತಿ ಅಮ್ಮನವರ ಉತ್ಸವ ಮೂರ್ತಿಯನ್ನು ದೇವಾಲಯದಿಂದ ಹೊರ ತಂದು ಶ್ರೀ ಯವರ ಉತ್ಸವ ಮೂರ್ತಿ ಎದುರಿಗೆ ಇರಿಸಿ ಸಂಬಂಧ ಮಾಲೆ ಕಾರ್ಯಕ್ರಮ ನಡೆಸಲಾಯಿತು.
ಸಂಬಂಧ ಮಾಲೆ ನಂತರ ಶಿವ ಪಾರ್ವತಿ ಯವರ ಉತ್ಸವ ಮೂರ್ತಿಗಳನ್ನು ದೇವಾಲಯದ ಕಲ್ಯಾಣ ಮಂಟಪದಲ್ಲಿರಿಸಿ ಶಾಸ್ತ್ರೋಕ್ತವಾಗಿ ಶುಭ ಮಕರ ಲಗ್ನದಲ್ಲಿ ಧಾರಾ ಮಹೋತ್ಸವ ನಡೆಸಲಾಯಿತು .
ಗಿರಿಜಾ ಕಲ್ಯಾಣ ಮಹೋತ್ಸವಕ್ಕೆ ರಾಜ್ಯದ ನಾನಾ ಮೂಲೆಗಳಿಂದ ಸಾವಿರಾರು ಭಕ್ತರು ಪಾಲ್ಗೊಂಡು ಸೇವೆ ಸಲ್ಲಿಸಿದರು.
ಇದೇ ಸಂದರ್ಭ ಸೇವಾರ್ಥದಾರರಿಗೆ ಸುಮಂಗಲಿಯರು ಪರಸ್ಪರ ಅರಿಶಿನ ಕುಂಕುಮ, ಬಳೆ, ಹೂ ನೀಡಿ ತಮ್ಮ ಭಕ್ತಿ ಭಾವ ಮೆರೆದರು. ದೇವಾಲಯದ ಆಗಮಿಕರಾದ ಈ ನಾಗಚಂದ್ರ ದೀಕ್ಷಿತ್ ಮಾತನಾಡಿ ಗಿರಿಜಾ ಕಲ್ಯಾಣ ಮಹೋತ್ಸವದ ಬಗ್ಗೆ ವಿವರಿಸಿದರು.
ಕಾರ್ಯಕ್ರಮಕ್ಕೆ ಬಂದ ಭಕ್ತರೊಬ್ಬರು ಮಾತನಾಡಿ ಗಿರಿಜಾ ಕಲ್ಯಾಣೋತ್ಸವದ ಬಗ್ಗೆ ಸಂತಸ ವ್ಯಕ್ತಪಡಿಸಿದರು.
ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಜಗದೀಶ್ ಕುಮಾರ್, ಸಹಾಯಕ ಅಧಿಕಾರಿ ಸತೀಶ್ ದಂಪತಿಗಳು ಸೇರಿದಂತೆ ದೇವಾಲಯದ ಅರ್ಚಕ ವೃಂದ ದವರು ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು