4:46 PM Saturday7 - February 2026
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,…

ಇತ್ತೀಚಿನ ಸುದ್ದಿ

ದಕ್ಷಿಣ ಕಾಶಿಯ ನಂಜುಂಡೇಶ್ವರ ಮತ್ತೆ ಕೋಟ್ಯಾಧೀಶ: 35 ಹುಂಡಿ ಎಣಿಕೆ; ನಂಜುಂಡನಿಗೆ 1.72 ಕೋಟಿ ಕಾಣಿಕೆ

15/05/2024, 11:00

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಕರ್ನಾಟಕದ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ದಕ್ಷಿಣ ಕಾಶಿ ನಂಜನಗೂಡು ಶ್ರೀ ನಂಜುಂಡೇಶ್ವರ ಸ್ವಾಮಿ ಮತ್ತೆ ಕೋಟ್ಯಾಧೀಶ ನಾಗಿದ್ದಾನೆ. ನಂಜುಂಡೇಶ್ವರನ ದೇಗುಲಕ್ಕೆ ಭಕ್ತರಿಂದ ದೇಣಿಗೆ ಹರಿದುಬಂದಿದ್ದು ಹುಂಡಿ ಎಣಿಕೆ ಕಾರ್ಯದಲ್ಲಿ ಇದು ಸಾಬೀತಾಗಿದೆ. ಶ್ರೀ ನಂಜುಂಡೇಶ್ವರಸ್ವಾಮಿ ದೇವಾಲಯದಲ್ಲಿ ನಡೆದ ಹುಂಡಿ ಎಣಿಕೆ ಕಾರ್ಯದಲ್ಲಿ 1.72 ಕೋಟಿ ರೂ. ನಗದು , 92 ಗ್ರಾಂ 50 ಮಿಲಿಗ್ರಾo ಚಿನ್ನ ಹಾಗೂ 3 ಕೆಜಿ 500 ಗ್ರಾಂ ಬೆಳ್ಳಿ ಲಭ್ಯವಾಗಿದೆ.
ಮಂಗಳವಾರ ದೇವಾಲಯದ ದಾಸೋಹ ಭವನದ ಆವರಣದಲ್ಲಿ ನಡೆದ ಹುಂಡಿ ಹಣ ಎಣಿಕೆಯಲ್ಲಿ ಒಟ್ಟು 35 ಹುಂಡಿಗಳನ್ನ ತೆಗೆದು ಎಣಿಕೆ ಮಾಡಲಾಯಿತು. ಈ ವೇಳೆ 1.72, 85, 296 ರೂ. ಲಭ್ಯವಾಗಿದ್ದು, ಇದರೊಂದಿಗೆ 92 ಗ್ರಾo 50 ಮಿಲಿ ಗ್ರಾಂ ಚಿನ್ನ , 3 ಕೆಜಿ 500 ಗ್ರಾಂ ಬೆಳ್ಳಿ, ಹಾಗೂ 33 ವಿದೇಶಿ ಕರೆನ್ಸಿ ಲಭ್ಯವಾಗಿದೆ. ಹುಣ್ಣಿಮೆ ಸೇರಿದಂತೆ ವಿಶೇಷ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತರು ದೇಗುಲಕ್ಕೆ ಭೇಟಿ ನೀಡಿದ್ದರಿಂದ ಹುಂಡಿಯಲ್ಲಿ ಈ ಪ್ರಮಾಣದ ಹಣದ ಮೊತ್ತ ಸಂಗ್ರಹವಾಗಿದೆ.


ಎಣಿಕೆ ಕಾರ್ಯದಲ್ಲಿ ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಜಗದೀಶ್ ಕುಮಾರ್, ಸಹಾಯಕ ಕಾರ್ಯನಿರ್ವಾಹಕ ಅಧಿಕಾರಿಗಳಾದ ಸತೀಶ್, ವೆಂಕಟೇಶ್ ಪ್ರಸಾದ್, ಧಾರ್ಮಿಕ ದತ್ತಿ ಇಲಾಖೆಯ ತಹಶೀಲ್ದಾರ್ ವಿದುಲತಾ, ಬ್ಯಾಂಕ್ ಆಫ್ ಬರೋಡಾ ಮ್ಯಾನೇಜರ್ ಕಾರ್ತಿಕ್ ಸೇರಿದಂತೆ ಸ್ವಸಹಾಯ ಸಂಘದ ಮಹಿಳೆಯರು ಎಣಿಕೆ ಕಾರ್ಯದಲ್ಲಿ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು