2:19 AM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ರಾಜ್ಯ ಬಜೆಟ್ | ದಕ್ಷಿಣ ಕನ್ನಡದ ಮಾಣಿ ಹಾಗೂ ಸಜಿಪನಡು ಸೇರಿದಂತೆ ರಾಜ್ಯದ 11 ಜಿಲ್ಲೆಗಳಲ್ಲಿ 12 ಹೊಸ ಪೊಲೀಸ್‌ ಠಾಣೆ

06/03/2026, 11:50

ಬೆಂಗಳೂರು(reporterkarnataka.com): ಕರ್ನಾಟಕ ಬಜೆಟ್‌ನಲ್ಲಿ ರಾಜ್ಯದ 11 ಜಿಲ್ಲೆಗಳಲ್ಲಿ 12 ಹೊಸ ಪೊಲೀಸ್‌ ಠಾಣೆಗಳನ್ನು ನಿರ್ಮಾಣ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
ಈ ಮೂಲಕ ಕಾನೂನು ಸುವ್ಯವಸ್ಥೆಗೆ ಮುಂದಾಗಿದ್ದಾರೆ. ಶುಕ್ರವಾರ ವಿಧಾನಸೌಧದಲ್ಲಿ ಮಂಡಿಸಿದ ಬಜೆಟ್‌ನಲ್ಲಿ ಹೊಸ ಪೊಲೀಸ್‌ ಠಾಣೆ ಆರಂಭ ಮಾಹಿತಿ ನೀಡಲಾಗಿದೆ. 12 ಜಿಲ್ಲೆಗಳಲ್ಲಿ ಪ್ರಮುಖ ಪ್ರದೇಶಗಳಲ್ಲಿ ಈ ಪೊಲೀಸ್‌ ಠಾಣೆಗಳು ನಿರ್ಮಾಣವಾಗಲಿವೆ.

ಕ್ರ.ಸಂ. ಜಿಲ್ಲೆ ಪೊಲೀಸ್ ಠಾಣೆ
1 ದಕ್ಷಿಣ ಕನ್ನಡ: ಮಾಣಿ ಪೊಲೀಸ್ ಠಾಣೆ
2 ದಕ್ಷಿಣ ಕನ್ನಡ: ಸಜಿಪನಡು ಪೊಲೀಸ್ ಠಾಣೆ
3 ಬೆಂಗಳೂರು ಗ್ರಾಮಾಂತರ: ದೊಡ್ಡಬಳ್ಳಾಪುರ ಸಂಚಾರ ಪೊಲೀಸ್ ಠಾಣೆ
4 ಬೆಳಗಾವಿ: ಯರಗಟ್ಟಿ ಪೊಲೀಸ್ ಠಾಣೆ
5 ಯಾದಗಿರಿ : ಕಕ್ಕೇರಾ ಪೊಲೀಸ್ ಠಾಣೆ
6 ಚಿತ್ರದುರ್ಗ: ಹಿರಿಯೂರು ಸಂಚಾರ ಪೊಲೀಸ್ ಠಾಣೆ
7 ದಾವಣಗೆರೆ: ಆನಗೋಡು ಪೊಲೀಸ್ ಠಾಣೆ
8 ಹಾವೇರಿ: ತಿಳುವಳ್ಳಿ ಪೊಲೀಸ್ ಠಾಣೆ
9 ಮೈಸೂರು: ಉದಯಗಿರಿ ದಕ್ಷಿಣ ಪೊಲೀಸ್ ಠಾಣೆ
10 ವಿಜಯಪುರ: ಮುದ್ದೇಬಿಹಾಳ ಗ್ರಾಮಾಂತರ ಪೊಲೀಸ್ ಠಾಣೆ
11 ಕೋಲಾರ: ನರಸಾಪುರ ಕೈಗಾರಿಕಾ ವಲಯ ಪೊಲೀಸ್ ಠಾಣೆ
12 ಚಾಮರಾಜನಗರ: ಗುಂಡ್ಲುಪೇಟೆ ಸಂಚಾರ ಪೊಲೀಸ್ ಠಾಣೆ

*ಬಜೆಟ್‌ 2026ರಲ್ಲಿ ಗೃಹ ಹಾಗೂ ಒಳ ಆಡಳಿತ ಇಲಾಖೆಗೆ ಸಿಕ್ಕಿದ್ದೇನು:?*

ಗೃಹ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 8,000 ವಿವಿಧ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ.
ಸಿಬ್ಬಂದಿಗಳ ವಸತಿಗಾಗಿ ಪ್ರಸಕ್ತ ಸಾಲಿನಲ್ಲಿ 250 ಕೋಟಿ ರೂ. ವೆಚ್ಚದಲ್ಲಿ ವಸತಿಗೃಹಗಳ ನಿರ್ಮಾಣ ಕಾಮಗಾರಿ ಆರಂಭ. ಸುವರ್ಣ ಸೌಧದ ಬಂದೋಬಸ್ತ್ ಸಿಬ್ಬಂದಿಗಾಗಿ 20 ಕೋಟಿ ರೂ. ವೆಚ್ಚದಲ್ಲಿ 1,000 ಸಿಬ್ಬಂದಿಗೆ ವಸತಿ ಸೌಲಭ್ಯ ಕಲ್ಪಿಸಲು ಶಾಶ್ವತ ಬ್ಯಾರಕ್‌ಗಳ ನಿರ್ಮಾಣ.
ಸಂಚಾರ ದಟ್ಟಣೆ ನಿಯಂತ್ರಿಸಲು 25 ಕೋಟಿ ರೂ. ವೆಚ್ಚದಲ್ಲಿ ‘ಸಂಯೋಜಿತ ಡಿಜಿಟಲ್ ವೇದಿಕೆ’ಯನ್ನು ರೂಪಿಸಲಾಗುತ್ತದೆ.
ನಗರ ಪೊಲೀಸಿಂಗ್ ಸವಾಲುಗಳನ್ನು ಎದುರಿಸಲು ಬೆಂಗಳೂರಿನಲ್ಲಿ ಈ ನಾವೀನ್ಯತೆ ಕೇಂದ್ರವನ್ನು ಸ್ಥಾಪನೆ.
ಪೊಲೀಸ್ ಆಧುನೀಕರಣ ಯೋಜನೆಯಡಿ ಸಿಸಿಟಿವಿ, ಬಾಡಿ ವರ್ನ್ ಕ್ಯಾಮೆರಾ, ಡ್ರೋನ್ ಮುಂತಾದವುಗಳಿಗಾಗಿ ಒಟ್ಟು 354 ಕೋಟಿ ರೂ.ಗಳ ಕ್ರಿಯಾಯೋಜನೆ ರೂಪಿಸಲಾಗಿದೆ.
ಗೃಹ ಇಲಾಖೆಯ ಚಲನಶೀಲತೆ ಹೆಚ್ಚಿಸಲು 75 ಕೋಟಿ ರೂ. ವೆಚ್ಚದಲ್ಲಿ ಹೊಸ ವಾಹನಗಳನ್ನು ಒದಗಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು