3:39 AM Wednesday4 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ದಕ್ಷಿಣ ಕನ್ನಡ ಅನುದಾನಿತ ಪ.ಪೂ. ಕಾಲೇಜುಗಳ ಬೋಧಕ-ಬೋಧಕೇತರ ಸಂಘದಿಂದ ಬಂಟ್ವಾಳ ಶಾಸಕರ ಭೇಟಿ

09/12/2024, 21:05

ಬಂಟ್ವಾಳ(reporterkarnataka.com): ದಕ್ಷಿಣ ಕನ್ನಡ ಜಿಲ್ಲಾ ಅನುದಾನಿತ ಪ.ಪೂ.ಕಾಲೇಜುಗಳ ಬೋಧಕ-ಬೋಧಕೇತರ ಸಂಘದ ವತಿಯಿಂದ ಬಂಟ್ವಾಳ ಶಾಸಕ ಉಳಿಪಾಡಿಗುತ್ತು ರಾಜೇಶ್ ನಾಯಕ್ ಅವರನ್ನು ಅವರ ಒಡ್ಡೂರು ಫಾರ್ಮ್ಸ್ ನಿವಾಸದಲ್ಲಿ ಭೇಟಿ ಮಾಡಿ ಅನುದಾನಿತ ಪದವಿ ಪೂರ್ವ ಕಾಲೇಜು ನೌಕರರ ಸಮಸ್ಯೆಗಳನ್ನು ಮುಂಬರುವ ಅಧಿವೇಶನದಲ್ಲಿ ಸರಕಾರದ ಗಮನಕ್ಕೆ ತಂದು ಬಗೆಹರಿಸಲು ಮನವಿ ಸಲ್ಲಿಸಲಾಯಿತು.

ಈ ಕುರಿತು ಕಿಟ್ಟೆಲ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವಿಠಲ್ , ಪೆರ್ನೆ ಶ್ರೀ ರಾಮಚಂದ್ರ ಪ.ಪೂ.ಕಾಲೇಜಿನ ಪ್ರಾಂಶುಪಾಲರಾದ ಶೇಖರ್ ರೈ, ತುಂಬೆ ಪ.ಪೂ.ಕಾಲೇಜಿನ ಪ್ರಾಂಶುಪಾಲರಾದ ವಿ.ಎಸ್. ಭಟ್, ವಿಠಲ ಪ.ಪೂ.ಕಾಲೇಜಿನ ಪ್ರಾಂಶುಪಾಲರಾದ ಆದರ್ಶ , ಬಜಪೆ ಸೈಂಟ್ ಜೋಸೆಫ್ ಪ.ಪೂ.ಕಾಲೇಜಿನ ಪ್ರಾಂಶುಪಾಲರಾದ ರಾಮಚಂದ್ರ ಉಡುಪ ಹಾಗೂ ಕಾಲೇಜುಗಳ ಎಲ್ಲಾ ಉಪನ್ಯಾಸಕರು,ಅಲ ನಿರಂಜನಸ್ವಾಮಿ ಕಾಲೇಜು ಸುಂಕದಕಟ್ಟೆ,ಶ್ರೀ ಸತ್ಯಸಾಯಿ ಕಾಲೇಜು ಅಳಿಕೆ ಇಲ್ಲಿನ ಹಾಗೂ ಎಡಪದವು ಪ.ಪೂ.ಕಾಲೇಜಿನ ಎಲ್ಲಾ ಸಿಬ್ಬಂದಿಗಳು ತಮ್ಮ ಸಮಸ್ಯೆಗಳ ಅಹವಾಲನ್ನು ತೋಡಿಕೊಂಡರು.
ಶಾಸಕರು ತಮ್ಮೆಲ್ಲಾ ಸಮಸ್ಯೆಗಳಿಗೆ ಪರಿಹಾರ ಒದಗಿಸುವಲ್ಲಿ ತಾನು ಪ್ರಾಮಾಣಿಕವಾಗಿ ಸ್ಪಂದಿಸುತ್ತೇನೆ ಎಂದು ಭರವಸೆ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು