11:31 PM Saturday14 - February 2026
ಬ್ರೇಕಿಂಗ್ ನ್ಯೂಸ್
ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,… ನಟ ದರ್ಶನ್ ಬಿಡುಗಡೆಗೆ ಪ್ರಾರ್ಥಿಸಿ ಅಭಿಮಾನಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ: 100 ಕಿಮೀ. ನಡಿಗೆ Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ

ಇತ್ತೀಚಿನ ಸುದ್ದಿ

ದಕ್ಷಿಣಕನ್ನಡ ಜಿಲ್ಲಾದ್ಯಂತ ಪಿಎಫ್ ಐ ನಾಯಕರ ಮನೆಗಳಿಗೆ ಎನ್ ಐಎ ದಾಳಿ: ಭಾರಿ ಪ್ರತಿಭಟನೆ

22/09/2022, 10:51

ಮಂಗಳೂರು(reporterkarnataka.com): ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯ ದ.ಕ. ಜಿಲ್ಲಾ ಕಚೇರಿ ಸೇರಿದಂತೆ ಪಿಎಫ್ಐ ನಾಯಕರ ಮನೆ ಮೇಲೆ ಇಂದು ಬೆಳ್ಳಂಬೆಳಗ್ಗೆ ಎನ್ಐಎ ಅಧಿಕಾರಿಗಳು
ದಾಳಿ ನಡೆಸಿದ್ದಾರೆ.
ರಾಜ್ಯ ಪಿಎಫ್ ಐ ನಾಯಕರ ಮನೆ ಮೇಲೆ ಕೆಲವು ದಿನಗಳಿಂದ ದಾಳಿ ನಡೆಸುತ್ತಿರುವ ಎನ್ಐಎ ಗುರುವಾರ ಬೆಳಗ್ಗೆ ಮಂಗಳೂರು ಹೊರವಲಯದ ಕಾವೂರು, ಬಜ್ಪೆ, ಜೋಕಟ್ಟೆ, ಸ್ಟೇಟ್ ಬ್ಯಾಂಕ್, ಕುಳಾಯಿ ಸೇರಿದಂತೆ ಕೆಲವೆಡೆ ರಾಜ್ಯ ಪಿಎಫ್ಐ ನಾಯಕರ ಮನೆ ಮೇಲೆ ದಾಳಿ ನಡೆಸಿದೆ.
ನಾಯಕರ ಮನೆ ಮೇಲೆ ಎನ್ಐಎ ಅಧಿಕಾರಿಗಳು ದಾಳಿ ನಡೆಸುತ್ತಿರುವ ಸುದ್ದಿ ತಿಳಿಯುತ್ತಿದ್ದಂತೆ ಮನೆ ಮುಂಭಾಗ ಪಿಎಫ್ಐ ಕಾರ್ಯಕರ್ತರು ಜಮಾಯಿಸಿದ್ದು, ಗೋ ಬ್ಯಾಕ್ ಎನ್ಐಎ ಘೋಷಣೆ ಕೂಗಿ, ಇದು ಸರಕಾರಿ ದಾಳಿ ಎಂದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಉಪ್ಪಿನಂಗಡಿ, ಬೋಳಂತೂರುನಲ್ಲಿಯೂ ದಾಳಿ ನಡೆದ ಬಗ್ಗೆ ವರದಿಯಾಗಿದ್ದು, ಪಿಎಫ್ಐ ನಾಯಕರ ಮನೆ ಮತ್ತು ಕಚೇರಿ ಮೇಲೆ ದಾಳಿ ನಡೆಸಲಾಗಿದೆ. ಏಕಕಾಲಕ್ಕೆ ವಿವಿಧ ವಾಹನಗಳಲ್ಲಿ ಆಗಮಿಸಿ ಅಧಿಕಾರಿಗಳು ಶೋಧ ಕಾರ್ಯ ನಡೆಸುತ್ತಿದ್ದು, ವಿಷಯ ತಿಳಿಯುತ್ತಿದ್ದಂತೆ ಪಕ್ಷದ ಕಾರ್ಯಕರ್ತರು ಜಮಾಯಿಸಿ ಎನ್ ಐಎ ವಿರುದ್ಧ ಗೋ ಬ್ಯಾಕ್ ಘೋಷಣೆ ಕೂಗುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು