10:30 PM Friday21 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ದಕ್ಷಿಣಕನ್ನಡ ಜಿಲ್ಲಾದ್ಯಂತ ಪಿಎಫ್ ಐ ನಾಯಕರ ಮನೆಗಳಿಗೆ ಎನ್ ಐಎ ದಾಳಿ: ಭಾರಿ ಪ್ರತಿಭಟನೆ

22/09/2022, 10:51

ಮಂಗಳೂರು(reporterkarnataka.com): ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯ ದ.ಕ. ಜಿಲ್ಲಾ ಕಚೇರಿ ಸೇರಿದಂತೆ ಪಿಎಫ್ಐ ನಾಯಕರ ಮನೆ ಮೇಲೆ ಇಂದು ಬೆಳ್ಳಂಬೆಳಗ್ಗೆ ಎನ್ಐಎ ಅಧಿಕಾರಿಗಳು
ದಾಳಿ ನಡೆಸಿದ್ದಾರೆ.
ರಾಜ್ಯ ಪಿಎಫ್ ಐ ನಾಯಕರ ಮನೆ ಮೇಲೆ ಕೆಲವು ದಿನಗಳಿಂದ ದಾಳಿ ನಡೆಸುತ್ತಿರುವ ಎನ್ಐಎ ಗುರುವಾರ ಬೆಳಗ್ಗೆ ಮಂಗಳೂರು ಹೊರವಲಯದ ಕಾವೂರು, ಬಜ್ಪೆ, ಜೋಕಟ್ಟೆ, ಸ್ಟೇಟ್ ಬ್ಯಾಂಕ್, ಕುಳಾಯಿ ಸೇರಿದಂತೆ ಕೆಲವೆಡೆ ರಾಜ್ಯ ಪಿಎಫ್ಐ ನಾಯಕರ ಮನೆ ಮೇಲೆ ದಾಳಿ ನಡೆಸಿದೆ.
ನಾಯಕರ ಮನೆ ಮೇಲೆ ಎನ್ಐಎ ಅಧಿಕಾರಿಗಳು ದಾಳಿ ನಡೆಸುತ್ತಿರುವ ಸುದ್ದಿ ತಿಳಿಯುತ್ತಿದ್ದಂತೆ ಮನೆ ಮುಂಭಾಗ ಪಿಎಫ್ಐ ಕಾರ್ಯಕರ್ತರು ಜಮಾಯಿಸಿದ್ದು, ಗೋ ಬ್ಯಾಕ್ ಎನ್ಐಎ ಘೋಷಣೆ ಕೂಗಿ, ಇದು ಸರಕಾರಿ ದಾಳಿ ಎಂದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಉಪ್ಪಿನಂಗಡಿ, ಬೋಳಂತೂರುನಲ್ಲಿಯೂ ದಾಳಿ ನಡೆದ ಬಗ್ಗೆ ವರದಿಯಾಗಿದ್ದು, ಪಿಎಫ್ಐ ನಾಯಕರ ಮನೆ ಮತ್ತು ಕಚೇರಿ ಮೇಲೆ ದಾಳಿ ನಡೆಸಲಾಗಿದೆ. ಏಕಕಾಲಕ್ಕೆ ವಿವಿಧ ವಾಹನಗಳಲ್ಲಿ ಆಗಮಿಸಿ ಅಧಿಕಾರಿಗಳು ಶೋಧ ಕಾರ್ಯ ನಡೆಸುತ್ತಿದ್ದು, ವಿಷಯ ತಿಳಿಯುತ್ತಿದ್ದಂತೆ ಪಕ್ಷದ ಕಾರ್ಯಕರ್ತರು ಜಮಾಯಿಸಿ ಎನ್ ಐಎ ವಿರುದ್ಧ ಗೋ ಬ್ಯಾಕ್ ಘೋಷಣೆ ಕೂಗುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು