8:50 PM Wednesday18 - March 2026
ಬ್ರೇಕಿಂಗ್ ನ್ಯೂಸ್
ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ ಸ್ಪೀಕರ್‌ ಸಭಾತ್ಯಾಗ ಪ್ರಕರಣ: ಖಾದರ್ ಸಿಟ್ಟಿಗೆ 8 ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಶೋಕಾಸ್… Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ… ಉತ್ತರಿಸದ ಸಚಿವರು: ಇದೇ ಮೊದಲ ಬಾರಿಗೆ ಸ್ಪೀಕರ್ ಸಭಾತ್ಯಾಗ; ಮೂವರು ಅಧಿಕಾರಿಗಳಿಗೆ ತಲೆದಂಡ ರಾಜ್ಯ ಉಪ ಚುನಾವಣೆ: ಬಾಗಲಕೋಟೆ, ದಾವಣಗೆರೆ ದಕ್ಷಿಣದಲ್ಲಿ ಏಪ್ರಿಲ್ 9ರಂದು ಮತದಾನ, ಮೇ…

ಇತ್ತೀಚಿನ ಸುದ್ದಿ

ದ.ಕ. ಜಿಲ್ಲೆ: ಸೆಪ್ಟೆಂಬರ್ 30ರಂದು ಲೋಕ್ ಅದಾಲತ್: ರಾಜಿ ಸಂಧಾನದ ಮೂಲಕ ಪ್ರಕರಣ ಇತ್ಯರ್ಥ

13/09/2021, 10:10

ಮಂಗಳೂರು (reporterkarnataka.com):
ಇದೇ ಸೆಪ್ಟೆಂಬರ್ 30ರಂದು ಜಿಲ್ಲೆಯಾದ್ಯಂತ ಲೋಕ್ ಅದಾಲತ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಲೋಕ್ ಅದಾಲತ್‍ನಲ್ಲಿ ರಾಜಿ ಸಂಧಾನದ ಮೂಲಕ ಪ್ರಕರಣಗಳ ಇತ್ಯರ್ಥಪಡಿಸಲಾಗುತ್ತಿದೆ. 


ಕಳೆದ ಆಗಸ್ಟ್ 14ರಂದು ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಮೆಗಾ ಲೋಕ್ ಅದಾಲತ್‍ನಲ್ಲಿ 11,192 ಅರ್ಹ ಪ್ರಕರಣಗಳ ಪೈಕಿ 5,310 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ. ಎನ್‍ಐ ಕಾಯ್ದೆಯಡಿ 211 ಪ್ರಕರಣಗಳನ್ನು ಇತ್ಯರ್ಥಪಡಿಸಿ 3,57,06,682 ರೂ.ಗಳ ಪರಿಹಾರ ಮೊತ್ತವನ್ನು ವಿತರಿಸಲಾಗಿದೆ.  ಅದೇ ರೀತಿ ಮೋಟಾರು ವಾಹನ ಅಪಘಾತ ಪ್ರಕರಣಗಳಲ್ಲಿ 329 ಪ್ರಕರಣಗಳನ್ನು ಇತ್ಯರ್ಥಪಡಿಸಿ 8,96,57,166 ರೂ. ಮೊತ್ತಗಳ ಪರಿಹಾರವನ್ನು ಸಂಬಂಧಿಸಿದವರಿಗೆ ವಿತರಿಸಲಾಗಿದೆ. 138 ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಇತ್ಯರ್ಥಪಡಿಸಿ 94,37,090 ರೂ. ಗಳ ದಂಡವನ್ನು ಬ್ಯಾಂಕ್‍ಗಳಿಗೆ ಸಂಬಂಧಿಸಿದವರಿಂದ ಪಾವತಿಸಲಾಗಿದೆ. 
ಜಿಲ್ಲೆಯಲ್ಲಿ ಪರಸ್ಪರ ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಲು ಅರ್ಹವಿರುವ ಪ್ರಕರಣಗಳಲ್ಲಿ ಇದೇ ಸೆಪ್ಟೆಂಬರ್ 30 ರಂದು ಹಮ್ಮಿಕೊಳ್ಳಲಾಗಿರುವ ಲೋಕ್ ಅದಾಲತ್‍ನಲ್ಲಿ ಭಾಗವಹಿಸಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳುವಂತೆ ಜಿಲ್ಲಾ ನ್ಯಾಯಾಲಯದ ಹಿರಿಯ ಶ್ರೇಣಿ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಪೃಥ್ವಿರಾಜ್ ವರ್ಣೇಕರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು