2:03 PM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ದ.ಕ. ಜಿಲ್ಲೆ: ಸೆಪ್ಟೆಂಬರ್ 30ರಂದು ಲೋಕ್ ಅದಾಲತ್: ರಾಜಿ ಸಂಧಾನದ ಮೂಲಕ ಪ್ರಕರಣ ಇತ್ಯರ್ಥ

13/09/2021, 10:10

ಮಂಗಳೂರು (reporterkarnataka.com):
ಇದೇ ಸೆಪ್ಟೆಂಬರ್ 30ರಂದು ಜಿಲ್ಲೆಯಾದ್ಯಂತ ಲೋಕ್ ಅದಾಲತ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಲೋಕ್ ಅದಾಲತ್‍ನಲ್ಲಿ ರಾಜಿ ಸಂಧಾನದ ಮೂಲಕ ಪ್ರಕರಣಗಳ ಇತ್ಯರ್ಥಪಡಿಸಲಾಗುತ್ತಿದೆ. 


ಕಳೆದ ಆಗಸ್ಟ್ 14ರಂದು ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಮೆಗಾ ಲೋಕ್ ಅದಾಲತ್‍ನಲ್ಲಿ 11,192 ಅರ್ಹ ಪ್ರಕರಣಗಳ ಪೈಕಿ 5,310 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ. ಎನ್‍ಐ ಕಾಯ್ದೆಯಡಿ 211 ಪ್ರಕರಣಗಳನ್ನು ಇತ್ಯರ್ಥಪಡಿಸಿ 3,57,06,682 ರೂ.ಗಳ ಪರಿಹಾರ ಮೊತ್ತವನ್ನು ವಿತರಿಸಲಾಗಿದೆ.  ಅದೇ ರೀತಿ ಮೋಟಾರು ವಾಹನ ಅಪಘಾತ ಪ್ರಕರಣಗಳಲ್ಲಿ 329 ಪ್ರಕರಣಗಳನ್ನು ಇತ್ಯರ್ಥಪಡಿಸಿ 8,96,57,166 ರೂ. ಮೊತ್ತಗಳ ಪರಿಹಾರವನ್ನು ಸಂಬಂಧಿಸಿದವರಿಗೆ ವಿತರಿಸಲಾಗಿದೆ. 138 ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಇತ್ಯರ್ಥಪಡಿಸಿ 94,37,090 ರೂ. ಗಳ ದಂಡವನ್ನು ಬ್ಯಾಂಕ್‍ಗಳಿಗೆ ಸಂಬಂಧಿಸಿದವರಿಂದ ಪಾವತಿಸಲಾಗಿದೆ. 
ಜಿಲ್ಲೆಯಲ್ಲಿ ಪರಸ್ಪರ ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಲು ಅರ್ಹವಿರುವ ಪ್ರಕರಣಗಳಲ್ಲಿ ಇದೇ ಸೆಪ್ಟೆಂಬರ್ 30 ರಂದು ಹಮ್ಮಿಕೊಳ್ಳಲಾಗಿರುವ ಲೋಕ್ ಅದಾಲತ್‍ನಲ್ಲಿ ಭಾಗವಹಿಸಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳುವಂತೆ ಜಿಲ್ಲಾ ನ್ಯಾಯಾಲಯದ ಹಿರಿಯ ಶ್ರೇಣಿ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಪೃಥ್ವಿರಾಜ್ ವರ್ಣೇಕರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು