4:43 AM Thursday30 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ದ.ಕ. ಜಿಲ್ಲೆ: ಸೆಪ್ಟೆಂಬರ್ 30ರಂದು ಲೋಕ್ ಅದಾಲತ್: ರಾಜಿ ಸಂಧಾನದ ಮೂಲಕ ಪ್ರಕರಣ ಇತ್ಯರ್ಥ

13/09/2021, 10:10

ಮಂಗಳೂರು (reporterkarnataka.com):
ಇದೇ ಸೆಪ್ಟೆಂಬರ್ 30ರಂದು ಜಿಲ್ಲೆಯಾದ್ಯಂತ ಲೋಕ್ ಅದಾಲತ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಲೋಕ್ ಅದಾಲತ್‍ನಲ್ಲಿ ರಾಜಿ ಸಂಧಾನದ ಮೂಲಕ ಪ್ರಕರಣಗಳ ಇತ್ಯರ್ಥಪಡಿಸಲಾಗುತ್ತಿದೆ. 


ಕಳೆದ ಆಗಸ್ಟ್ 14ರಂದು ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಮೆಗಾ ಲೋಕ್ ಅದಾಲತ್‍ನಲ್ಲಿ 11,192 ಅರ್ಹ ಪ್ರಕರಣಗಳ ಪೈಕಿ 5,310 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ. ಎನ್‍ಐ ಕಾಯ್ದೆಯಡಿ 211 ಪ್ರಕರಣಗಳನ್ನು ಇತ್ಯರ್ಥಪಡಿಸಿ 3,57,06,682 ರೂ.ಗಳ ಪರಿಹಾರ ಮೊತ್ತವನ್ನು ವಿತರಿಸಲಾಗಿದೆ.  ಅದೇ ರೀತಿ ಮೋಟಾರು ವಾಹನ ಅಪಘಾತ ಪ್ರಕರಣಗಳಲ್ಲಿ 329 ಪ್ರಕರಣಗಳನ್ನು ಇತ್ಯರ್ಥಪಡಿಸಿ 8,96,57,166 ರೂ. ಮೊತ್ತಗಳ ಪರಿಹಾರವನ್ನು ಸಂಬಂಧಿಸಿದವರಿಗೆ ವಿತರಿಸಲಾಗಿದೆ. 138 ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಇತ್ಯರ್ಥಪಡಿಸಿ 94,37,090 ರೂ. ಗಳ ದಂಡವನ್ನು ಬ್ಯಾಂಕ್‍ಗಳಿಗೆ ಸಂಬಂಧಿಸಿದವರಿಂದ ಪಾವತಿಸಲಾಗಿದೆ. 
ಜಿಲ್ಲೆಯಲ್ಲಿ ಪರಸ್ಪರ ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಲು ಅರ್ಹವಿರುವ ಪ್ರಕರಣಗಳಲ್ಲಿ ಇದೇ ಸೆಪ್ಟೆಂಬರ್ 30 ರಂದು ಹಮ್ಮಿಕೊಳ್ಳಲಾಗಿರುವ ಲೋಕ್ ಅದಾಲತ್‍ನಲ್ಲಿ ಭಾಗವಹಿಸಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳುವಂತೆ ಜಿಲ್ಲಾ ನ್ಯಾಯಾಲಯದ ಹಿರಿಯ ಶ್ರೇಣಿ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಪೃಥ್ವಿರಾಜ್ ವರ್ಣೇಕರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು