6:31 AM Tuesday4 - August 2026
ಬ್ರೇಕಿಂಗ್ ನ್ಯೂಸ್
ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ… ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು…

ಇತ್ತೀಚಿನ ಸುದ್ದಿ

ದ.ಕ. ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ: ಮುಖ್ಯಮಂತ್ರಿ ಬೊಮ್ಮಾಯಿ ಬೆಂಗಳೂರಿನಲ್ಲಿ ಹೇಳಿದ್ದೇನು? 

04/09/2021, 21:49

ಮಂಗಳೂರು (reporterkarnataka.com): ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ಸೂಚ್ಯಂಕ ಕಡಿಮೆಯಾಗುವವರೆಗೂ ಹೆಚ್ಚಿನ ತಪಾಸಣೆಗಳನ್ನು ಕೈಗೊಳ್ಳುವಂತೆ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರಿಗೆ ನಿರ್ದೇಶನ ನೀಡಿದ್ದಾರೆ. 
ಅವರು ಶನಿವಾರ ಕೋವಿಡ್-19 ಸೋಂಕಿನ ನಿಯಂತ್ರಣ ಕುರಿತು ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಕೊಡಗು ಹಾಗೂ ಹಾಸನ ಜಿಲ್ಲೆಗಳ ಸಚಿವರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳೊಂದಿಗೆ ಬೆಂಗಳೂರಿನಿಂದ ವಿಡಿಯೋ ಸಂವಾದ ನಡೆಸಿ ಸೂಚನೆ ನೀಡಿದರು. 
ಜಿಲ್ಲೆಯ ಗಡಿ ಭಾಗಗಳು, ನಗರ ಪ್ರದೇಶಗಳಲ್ಲಿ ಹೆಚ್ಚಿನ ಕೋವಿಡ್ ತಪಾಸಣೆ ಮಾಡಬೇಕು, ಹೆಚ್ಚಿನ ಪ್ರಮಾಣದ ಕೋವಿಡ್ ಲಸಿಕೆಗಳನ್ನು ನೀಡಬೇಕು, ಇದರಿಂದ ಕೊರೊನಾ ಸೋಂಕು ಹರಡುವಿಕೆಯನ್ನು ನಿಯಂತ್ರಿಸಬಹುದು. ಕೊರೊನಾ ಸೂಚ್ಯಂಕವನ್ನು ಇಳಿಕೆ ಮಾಡುವಲ್ಲಿ ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಬೇಕು, ವಾರಾಂತ್ಯ ಮತ್ತು ರಾತ್ರಿ ಕಫ್ರ್ಯೂಗಳು ಜಾರಿಯಲ್ಲಿದ್ದು, ಸರ್ಕಾರದ ಮುಂದಿನ ಆದೇಶದವರೆಗೂ ಸಾರ್ವಜನಿಕರು ಕಡ್ಡಾಯವಾಗಿ ಈ ನಿರ್ದೇಶನಗಳನ್ನು ಪಾಲಿಸುವಂತೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವಂತೆ ಪೊಲೀಸ್ ಅಧಿಕಾರಿಗಳಿಗೆ ಅವರು ತಿಳಿಸಿದರು.
ಆಯಾ ದಿನಗಳಂದು ಹಂಚಿಕೆಯಾಗುವ ಲಸಿಕೆಗಳನ್ನು ಅದೇ ದಿನವೇ ನೀಡಬೇಕು,  ಕೋವಿಡ್ ನಿಯಂತ್ರಿಸುವ ನಿಟ್ಟಿನಲ್ಲಿ ಕಂದಾಯ, ರೈಲ್ವೇ, ಆರೋಗ್ಯ ಮತ್ತು ಪೊಲೀಸ್ ಇಲಾಖೆಗಳು ಹೆಚ್ಚಿನ ಗಮನಹರಿಸಿ ಸಹಕರಿಸಬೇಕು. ಜಿಲ್ಲಾಡಳಿತ ಹೊರಡಿಸಿರುವ ಕೋವಿಡ್ ಮಾರ್ಗಸೂಚಿಗಳನ್ನು ಪ್ರತಿಯೊಬ್ಬರೂ ಚಾಚುತಪ್ಪದೇ ಪಾಲಿಸಬೇಕು. ಮಾರ್ಗಸೂಚಿಗಳನ್ನು ಉಲ್ಲಂಘನೆ ಮಾಡುವವರ ವಿರುದ್ಧ ಕಾನೂನು ಕ್ರಮಕೈಗೊಳ್ಳುವಂತೆಯೂ ಅವರು ತಿಳಿಸಿದರು. 
ಜಿಲ್ಲಾಧಿಕಾರಿ ಡಾ.ರಾಜೇಂದ್ರ. ಕೆ.ವಿ ಅವರು ಮಾತನಾಡಿ, ಜಿಲ್ಲೆಯಲ್ಲಿ ಈವರೆಗೆ 2,240 ಕೋವಿಡ್ ಸಕ್ರೀಯ ಪ್ರಕರಣಗಳಿದ್ದೂ, ಶೇ.70 ರಷ್ಟು ಸೋಂಕಿತರು ಹೋಂ ಐಸೋಲೇಷನ್‍ನಲ್ಲಿದ್ದಾರೆ ಹಾಗೂ ಶೇ. 30 ರಷ್ಟು ಆಸ್ಪತೆ ಸೇರಿದಂತೆ ವಿವಿಧ ಕೋವಿಡ್ ಕೇರ್ ಸೆಂಟರ್‍ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದರು.
ಕೋವಿಡ್ ಸೋಂಕಿತರ ಪ್ರಾಥಮಿಕ ಸಂಪರ್ಕಕ್ಕೆ ಬಂದವರನ್ನು ಪತ್ತೆ ಹಚ್ಚಲಾಗುತ್ತಿದೆ, ಜಿಲ್ಲೆಯ ಎಲ್ಲಾ ತಾಲೂಕುಗಳ ವೈದ್ಯಾಧಿಕಾರಿಗಳು, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಸಹಾಯಕರು ಹಾಗೂ ಇತರ ಅಧಿಕಾರಿಗಳು ಕೋವಿಡ್ ನಿಯಂತ್ರಣ ಮಾಡುವಲ್ಲಿ ಮುಂಚೂಣಿಯಲ್ಲಿದ್ದು, ಕೋವಿಡ್ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದವರು ಮಾಹಿತಿ ನೀಡಿದರು. 
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಡಾ. ಕುಮಾರ್, ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್, ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನಾವಣೆ, ಉಪವಿಭಾಗಾಧಿಕಾರಿ ಮದನ್ ಮೋಹನ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ. ಕಿಶೋರ್ ಸೇರಿದಂತೆ ಸಂಬಂಧಿಸಿದ ಅಧಿಕಾರಿಗಳು ವಿಸಿಯಲ್ಲಿ ಭಾಗವಹಿಸಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು