5:04 AM Monday22 - September 2025
ಬ್ರೇಕಿಂಗ್ ನ್ಯೂಸ್
ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ಸರ್ಕಾರದಿಂದ 6 ಕೋಟಿ ನಗದು ಬಹುಮಾನ: ಮುಖ್ಯಮಂತ್ರಿ… ಜಿಎಸ್ ಟಿ ಜಾರಿ ಮಾಡಿದ್ದೂ ಮೋದಿ, ಜಿಎಸ್ ಟಿ ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ,… ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ: ಸಿಎಂ… ವಿರಾಜಪೇಟೆ ಆರೆಂಜ್ ಸ್ಪಾ -ಬ್ಯೂಟಿ ಪಾರ್ಲರ್ ದಾಳಿ ಪ್ರಕರಣ: ನಾಲ್ವರು ಪ್ರಮುಖ ಆರೋಪಿಗಳ… Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್…

ಇತ್ತೀಚಿನ ಸುದ್ದಿ

ದ.ಕ. ಲೋಕಸಭೆ ಕ್ಷೇತ್ರ: ಕಾಂಗ್ರೆಸ್ ನಿಂದ ಮತ್ತೆ ಹಳೆ ಮುಖವನ್ನೇ ತೋರಿಸಿ ಗೆಲ್ಲುವ ಪ್ರಯತ್ನ: ಆದರೆ, ಕೈಗೆ ಬೇಕಿದೆ ಹೊಸ, ಫ್ರೆಶ್ ಮುಖ

11/12/2023, 12:54

ಅಶೋಕ್ ಕಲ್ಲಡ್ಕ ಮಂಗಳೂರು
ಅನುಷ್ ಪಂಡಿತ್ ಮಂಗಳೂರು
info.reporterkarnataka@gmail.com
ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಮುಗಿದಿದೆ. ಫಲಿತಾಂಶವೂ ಬಂದಿದೆ. ಗೆಲುವಿನ ಪರಾಮರ್ಶೆ, ಸೋಲಿನ ಅತ್ಮಾವಲೋಕನ ನಡೆದಿದೆ. ಇದೀಗ ಲೋಕಸಭೆ ಚುನಾವಣೆಗೆ ಎಲ್ಲ ಪಕ್ಷಗಳು ತಯಾರಿ ನಡೆಸುತ್ತಿವೆ. ಕರಾವಳಿಯ ಪ್ರತಿಷ್ಠಿತ ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರಕ್ಕೆ ಬಿಜೆಪಿಯಿಂದ ಹಾಲಿ ಸಂಸದ ನಳಿನ್ ಕುಮಾರ್ ಕಟೀಲ್ ಹೆಸರು ಅಂತಿಮಗೊಂಡಿದೆ. ಇನ್ನು ಕಾಂಗ್ರೆಸ್ ನಿಂದ ಅಭ್ಯರ್ಥಿ ಹುಡುಕಾಟ ಮುಂದುವರಿದಿದೆ.
ದ.ಕ. ಜಿಲ್ಲೆಯ ಚುನಾವಣಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಈಗಾಗಲೇ ಸಭೆ ನಡೆಸಿದ್ದಾರೆ. ಪಕ್ಷದ ನಾಯಕರ, ಮುಖಂಡರ, ಬ್ಲಾಕ್ ಮಟ್ಟದ ಪದಾಧಿಕಾರಿಗಳ ಅಭಿಪ್ರಾಯ ಸಂಗ್ರಹಿಸಿದ್ದಾರೆ. ಮಾಜಿ ಸಚಿವ ಬಿ. ರಮಾನಾಥ ರೈ, ಇನಾಯತ್ ಆಲಿ, ರಕ್ಷಿತ್ ಶಿವರಾಮ್, ಮಮತಾ ಗಟ್ಟಿ, ಪದ್ಮರಾಜ್ ಆರ್., ಹರೀಶ್ ಕುಮಾರ್, ಮಂಜುನಾಥ ಭಂಡಾರಿ ಮುಂತಾದವರ ಹೆಸರು ತೇಲಿ ಬಂದಿದೆ. ಎಷ್ಟು ಬಾರಿ ಅಭಿಪ್ರಾಯ ಕೇಳಿದರೂ ಕೊನೆಗೆ ಹೈಕಮಾಂಡ್ ಟಿಕೆಟ್ ಕೊಡುವುದು ತನಗೆ ಬೇಕಾದವರಿಗೆ ಮಾತ್ರ ಎಂದು ಅಬಿಪ್ರಾಯ ಮಂಡಿಸಲು ಬಂದ ಕೆಲವು ಪದಾಧಿಕಾರಿಗಳೇ ಹೇಳಿದ್ದಾರೆ.
ಪಕ್ಷ ಹಾಗೂ ಗಾಂಧಿ ಕುಟುಂಬದ ಬಗ್ಗೆ ನಿಷ್ಠೆ, ಜಾತ್ಯತೀತ ನಿಲುವಿಗೆ ಬದ್ದತೆ ಹಾಗೂ ನಂಬಿಕೊಂಡು ಬಂದ ಸಿದ್ಧಾಂತ ಜತೆಗೆ ಎಂದೂ ರಾಜಿ ಮಾಡಿಕೊಳ್ಳದ ರಮಾನಾಥ ರೈ ಅವರ ಬಗ್ಗೆ ಕೆಪಿಸಿಸಿ ಒಲವು ಹೊಂದಿದೆ ಎನ್ನಲಾಗಿದೆ. ಚುನಾವಣಾ ರಾಜಕೀಯದಿಂದ ನಿವೃತ್ತಿಯಾಗುವುದಾಗಿ ಸ್ವತಃ ರೈ ಅವರೇ ಘೋಷಿಸಿದರೂ ಜಿಲ್ಲೆಯಲ್ಲಿ ಬಿಜೆಪಿಗೆ ಟಕ್ಕರ್ ಕೊಡಲು ರಮಾನಾಥ ರೈ ಅವರ ಅಗತ್ಯವಿದೆ ಎಂಬ ಕೂಗೂ ಕೇಳಿ ಬರುತ್ತಿದೆ. ಆದರೆ ಎರಡು ಬಾರಿ ಸತತವಾಗಿ ಬಂಟ್ವಾಳ ವಿಧಾನಸಭೆ ಕ್ಷೇತ್ರದಲ್ಲಿ ಸೋತ ರೈ ಅವರಿಗೆ ಇಡೀ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸುವ ಸಂಸತ್ ಕ್ಷೇತ್ರದಲ್ಲಿ ಗೆಲ್ಲಲ್ಲು ಸಾಧ್ಯವೇ ಎಂಬ ವಾದವೂ ಇದೆ.
ಇನ್ನು ಟಿಕೆಟ್ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಅವರನ್ನು ಕಣಕ್ಕಿಳಿಸುವ ಬಗ್ಗೆ ಒಲವು ಹೊಂದಿದ್ದಾರೆ ಎಂಬ ಮಾಹಿತಿಯೂ ಇದೆ. ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದಲ್ಲಿ ಬಿಲ್ಲವ ಮತದಾರರು ಅತ್ಯಧಿಕ ಸಂಖ್ಯೆಯಲ್ಲಿದ್ದಾರೆ. ಬಿಲ್ಲವರಿಗೆ ಟಿಕೆಟ್ ಕೊಡಬೇಕು ಎನ್ನುವ ಹಕ್ಕೊತ್ತಾಯವೂ ಕೇಳಿ ಬರುತ್ತಿದೆ. ಪಕ್ಷದ ಹಿರಿಯ ನಾಯಕ, ಮಾಜಿ ಸಚಿವ ಬಿ. ಜನಾರ್ಧನ ಪೂಜಾರಿ ಅವರು ಬಿಲ್ಲವ ಸಮುದಾಯಕ್ಕೆ ಸೇರಿದವರಾದರೂ ಶತತ ಸೋಲು ಅನುಭವಿಸಿದ್ದಾರೆ. ಪೂಜಾರಿ ಅವರನ್ನು ಗೆಲ್ಲಿಸುವ ಪ್ರಯತ್ನವನ್ನು ಬಿಲ್ಲವ ಸಮುದಾಯದವರು ಮಾಡಿಲ್ಲ ಎಂಬ ವಾದವೂ ಕಾಂಗ್ರೆಸ್ ಪಕ್ಷದೊಳಗೆ ಕೇಳಿ ಬರುತ್ತಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಮಂಗಳೂರು ದಕ್ಷಿಣ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಯುವ ನ್ಯಾಯವಾದಿ, ಪ್ರಸ್ತುತ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಆಗಿರುವ ಪದ್ಮರಾಜ್ ಆರ್. ಅವರಿಗೆ ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ನೀಡುವ ಭರವಸೆಯನ್ನು ಕೂಡ ಕಾಂಗ್ರೆಸ್ ಹೈಕಮಾಂಡ್ ನೀಡಿತ್ತು ಎಂಬ ಮಾಹಿತಿ ಇದೆ. ಅಂದು ಪದ್ಮರಾಜ್ ಅವರನ್ನು ದೆಹಲಿಗೆ ಕರೆಸಿದ್ದ ಪಕ್ಷದ ವರಿಷ್ಠರು ಅಲ್ಲಿನ ಪ್ರತಿಷ್ಠಿತ ಹೊಟೇಲ್ಲೊಂದರಲ್ಲಿ ಮಾತುಕತೆ ನಡೆಸಿ ಭರವಸೆ ನೀಡಿತ್ತು ಎನ್ನಲಾಗಿದೆ. ಹಾಗಾದರೆ ಪಕ್ಷ ನೀಡಿದ ಮಾತನ್ನು ಉಳಿಸಿಕೊಳ್ಳುತ್ತದೆಯೇ? ಎಂಬ ಪ್ರಶ್ನೆ ಉದ್ಭವಿಸಿದೆ.
ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದಲ್ಲಿ ಸತತ ಸೋಲು ಅನುಭವಿಸುತ್ತಿರುವ ಕಾಂಗ್ರೆಸ್ ಗೆ ನಿಜವಾಗಿಯೂ
ಯಾವುದೇ ವಿವಾದವಿಲ್ಲದ ದಕ್ಷ, ಪ್ರಾಮಾಣಿಕ
ಹೊಸ ಮುಖದ ಅವಶ್ಯಕತೆ ಇದೆ. ಅದೇ ಸೋತ ಹಳೆಯ ಮುಖಗಳನ್ನು ತೋರಿಸಿದರೆ ಇನ್ನೂ ನಾಲ್ಕು ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಕಷ್ಟ ಸಾಧ್ಯ ಎಂದು ಕಾಂಗ್ರೆಸ್ ನ ಕೆಲವು ಮುಖಂಡರೇ ಹೇಳುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು