5:04 PM Wednesday17 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರ: ಕಾಂಗ್ರೆಸ್ ನಿಂದಲೂ ಹೊಸ ಮುಖ?; ಪದ್ಮರಾಜ್ ಆರ್. ಕೈ ಅಭ್ಯರ್ಥಿ?

15/03/2024, 17:19

ಮಂಗಳೂರು(reporterkarnataka.com):ಮುಂಬರುವ ಸಂಸತ್ ಚುನಾವಣೆಗೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಈಗಾಗಲೇ ಬಿಜೆಪಿ ಹೊಸ ಮುಖವನ್ನು ಕಣಕ್ಕಿಳಿಸಿದ್ದು, ಕಾಂಗ್ರೆಸ್ ಕೂಡ ಹೊಸಬರಿಗೆ ಮಣೆ ಹಾಕಲಿದೆ ಎಂದು ತಿಳಿದು ಬಂದಿದೆ.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿರುವ ಮಂಗಳೂರಿನ ಯುವ ವಕೀಲ ಪದ್ಮರಾಜ್ ಆರ್. ಅವರನ್ನು ಕಾಂಗ್ರೆಸ್ ಅಖಾಡಕ್ಕಿಳಿಸಲಿದೆ.
ಪದ್ಮರಾಜ್ ಅವರ ಹೆಸರನ್ನು ಕಾಂಗ್ರೆಸ್ ಕೇಂದ್ರ ಚುನಾವಣಾ ಸಮಿತಿ ಅಂತಿಮಗೊಳಿಸಿದೆ ಎಂದು ವಿಶ್ವಸನೀಯ ಮೂಲಗಳಿಂದ ತಿಳಿದು ಬಂದಿದೆ. ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿಯಲ್ಲಿ ಪದ್ಮರಾಜ್ ರಾಮಯ್ಯ ಹೆಸರು ಘೋಷಣೆಯಾಗುವ ಸಾಧ್ಯತೆ ಇದೆ .
ಕೆಪಿಸಿಸಿಯಿಂದ ಕಾಂಗ್ರೆಸ್ ಹೈಕಮಾಂಡ್ ಗೆ ರವಾನೆಯಾದ ಪಟ್ಟಿಯಲ್ಲಿ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಹಾಗೂ ಪದ್ಮರಾಜ್ ಅವರ ಹೆಸರಿತ್ತು. ಸೊರಕೆ ಪರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬ್ಯಾಟಿಂಗ್ ಮಾಡಿದ್ದರು ಎನ್ನಲಾಗಿದೆ. ಸಿದ್ದರಾಮಯ್ಯ ಅವರ ಮೊದಲ ಸರಕಾರದಲ್ಲಿ ಸಚಿವ ಸಂಪುಟದಿಂದ ಸೊರಕೆ ಅವರನ್ನು ಕೈಬಿಟ್ಟಿರುವುದಕ್ಕೆ ಈ ಬಾರಿ ಲೋಕಸಭೆ ಟಿಕೆಟ್ ಕೊಡಿಸಲು ಸಿಎಂ ಮುಂದಾಗಿದ್ದರು ಎನ್ನಲಾಗಿದೆ. ಆದರೆ ಹೈಕಮಾಂಡ್ ವಿಧಾನಸಭೆ ಚುನಾವಣೆ ವೇಳೆ ಮಾಡಿದ ವಾಗ್ದಾನ ಮತ್ತು ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರವನ್ನು ಈ ಬಾರಿ ಹೇಗಾದರೂ ಗೆಲ್ಲಲ್ಲೇ ಬೇಕೆನ್ನುವ ಹಠದ ಹಿನ್ನೆಲೆಯಲ್ಲಿ ಸಚ್ಚಾರಿತ್ಯದ ಹೊಸ ಮುಖ ಅನಿವಾರ್ಯ ಎಂದು ಮನಗಂಡಿದೆ. ಈ ಹಿನ್ನೆಲೆಯಲ್ಲಿ ಪದ್ಮರಾಜ್ ಅವರಿಗೆ ಟಿಕೆಟ್ ಗ್ಯಾರಂಟಿ ಎನ್ನಲಾಗಿದೆ. ಅದಲ್ಲದೆ ಪದ್ಮರಾಜ್ ಅವರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತ್ಯಧಿಕ ಜನಸಂಖ್ಯೆಯನ್ನು ಹೊಂದಿದ ಬಿಲ್ಲವ ಸಮುದಾಯಕ್ಕೆ ಸೇರಿದವರಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು