8:56 PM Wednesday25 - March 2026
ಬ್ರೇಕಿಂಗ್ ನ್ಯೂಸ್
ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ

ಇತ್ತೀಚಿನ ಸುದ್ದಿ

ದಕ್ಷಿಣ ಕಾಶಿ ನಂಜನಗೂಡಿನ ದೊಡ್ಡ ಜಾತ್ರೆ: ಸಕಲ ಸಿದ್ಧತೆಗಳನ್ನು ಪರಿಶೀಲಿಸಿದ ಜಿಲ್ಲಾಧಿಕಾರಿ

25/03/2026, 20:00

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಮಾರ್ಚ್ 30ರಂದು ನಡೆಯಲಿರುವ ಪುರಾಣ ಪ್ರಸಿದ್ಧ ಪಂಚ ಮಹಾ ರಥೋತ್ಸವದ ದೊಡ್ಡ ಜಾತ್ರೆಗೆ ಸಕಲ ಸಿದ್ಧತೆಗಳು ನಡೆದು ಅದರಲ್ಲೂ ಮುಖ್ಯವಾಗಿ ಪಂಚ ಮಹಾರಥಗಳನ್ನು ಕಟ್ಟುವ ಹಾಗೂ ಶೃಂಗರಿಸುವ ಕಾರ್ಯ ಭರದಿಂದ ಸಾಗುತ್ತಿದೆ.


ಸುಮಾರು 97 ಅಡಿ ಎತ್ತರದ 250 ಟನ್ ತೂಕವಿರುವ ಶ್ರೀ ನಂಜುಂಡೇಶ್ವರನ ದೊಡ್ಡ ರಥಕ್ಕೆ ಈಗಾಗಲೇ ಭಾಗಶಃ ಕೆಲಸ ಮುಗಿದಿದ್ದು ಉಳಿಕೆ ಕೆಲಸವನ್ನು ಸಾಂಪ್ರದಾಯಕವಾಗಿ ರಥ ಕಟ್ಟುವ ಕಾರ್ಮಿಕರಿಂದ ನಡೆಯುತ್ತಿದೆ. ಉಳಿದಂತೆ ಶ್ರೀ ಅಮ್ಮನವರ ರಥ ಗಣೇಶ, ಸುಬ್ರಹ್ಮಣ್ಯ, ಚಂಡಿಕೇಶ್ವರ ಪಂಚ ರಥಗಳು ಜಾತ್ರೆಗೆ ಶೃಂಗಾರಗೊಳ್ಳುತ್ತಿವೆ.
ಅಲ್ಲದೆ ಪಂಚ ರಥಗಳು ಚಲಿಸುವಾಗ ಮುಖ್ಯವಾಗಿ ಬೇಕಾಗಿರುವ ಮರದ ಗೊದಮಗಳು, ಹೊಸ ಹೊಸ ಹಗ್ಗಗಳು ಸೇರಿದಂತೆ ಕಳಶಗಳು ಪೀಠಿಕೆಗಳು, ಛತ್ರಿಗಳನ್ನು ಶುದ್ಧಗೊಳಿಸಿ ಕುದುರೆ ವಾಹನಗಳಿಗೆ ಬಣ್ಣ ಹಚ್ಚುವ ಮೂಲಕ ರಥಗಳಿಗೆ ಬೇಕಾಗುವ ಪರಿಕರಗಳನ್ನು ಅಣಿಗೊಳಿಸಲಾಗುತ್ತಿದೆ. ದೇವಾಲಯದ ಸುತ್ತಮುತ್ತ ಬಣ್ಣ ಹೊಡೆಯುವುದು, ಶಾಮಿಯಾನ, ವಿದ್ಯುತ್ ದೀಪ ಅಳವಡಿಸುವುದು ತಾತ್ಕಾಲಿಕ ಶೌಚಾಲಯಗಳ ನಿರ್ಮಾಣ ಸಿಸಿ ಕ್ಯಾಮರಾ ಗಳು, ಬ್ಯಾರೆಕೇಡ್ ಗಳು, ಕುಡಿಯುವ ನೀರಿನ ವ್ಯವಸ್ಥೆ, ರಥದ ಚಕ್ರಗಳು ಸಾರಾಗವಾಗಿ ಉರುಳಲು ರಸ್ತೆಗೆ ಮರಳು ಹಾಕಲು ಮರಳು ಸಂಗ್ರಹಣೆ ಸೇರಿದಂತೆ ಜಾತ್ರೆಗೆ ಬೇಕಾದ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ.
ಇದೇ ಸಂದರ್ಭ ಇಂದು ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ ಅವರು ದೇವಾಲಯಕ್ಕೆ ಭೇಟಿ ನೀಡಿ ರಥಗಳು ಸೇರಿದಂತೆ ವಿವಿಧ ಸಿದ್ಧತಾ ಬಗ್ಗೆ ಪರಿಶೀಲನೆ ನಡೆಸಿದರು.
ಈ ವೇಳೆ ತಹಸಿಲ್ದಾರ್ ಸ್ಮಿತಾ, ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ, ನಗರಸಭಾ ಆಯುಕ್ತ ಬಸವರಾಜ್ ಲೋಕೋಪಯೋಗಿ ಇಲಾಖೆ ಇಂಜಿನಿಯರ್ ಬಸವರಾಜು ವೃತ್ತ ನಿರೀಕ್ಷಕ ರವೀಂದ್ರ ತಾಲೂಕು ಆರೋಗ್ಯ ಅಧಿಕಾರಿ ಈಶ್ವರ್ ತಾಲೂಕು ಪಂಚಾಯಿತಿ ಅಧಿಕಾರಿ ರಾಜೇಶ್ ಜರಾಲ್ಡ್ ಸೇರಿದಂತೆ ಮತ್ತಿತರ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಸಿದ್ಧತೆಗಳ ಪರಿಶೀಲನೆ ನಡೆಸಿ ಅಧಿಕಾರಿಗಳಿಂದ ಮಾಹಿತಿ ಪಡೆದ ಜಿಲ್ಲಾಧಿಕಾರಿಗಳು ಜಾತ್ರೆಯಲ್ಲಿ ಭಕ್ತರಿಗೆ ಬೇಕಾದ ಮೂಲಭೂತ ಸೌಕರ್ಯಗಳು, ಬಿಗಿ ಭದ್ರತೆ, ಸ್ವಚ್ಛತೆ ಸೇರಿದಂತೆ ಯಾವುದಕ್ಕೂ ಕೊರತೆಯಾಗದಂತೆ ಹಾಗೂ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಜಾತ್ರೆಯನ್ನು ಯಶಸ್ವಿಗೊಳಿಸುವಂತೆ ತಾಕೀತು ಮಾಡಿದರು. ಇದೇ ಸಂದರ್ಭ ರಥಗಳನ್ನು ದುರಸ್ಥಿ ಗೊಳಿಸಿ ತೇರು ಕಟ್ಟುವ ಕಾಯಕದಲ್ಲಿ ತೊಡಗಿರುವ ಕಾರ್ಮಿಕ ಗಿರೀಶ್ ಮಾತನಾಡಿ ತೇರು ಕಟ್ಟಿ ನಡೆಸುವುದರ ಬಗ್ಗೆ ವಿವರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು