6:34 AM Wednesday1 - April 2026
ಬ್ರೇಕಿಂಗ್ ನ್ಯೂಸ್
ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4…

ಇತ್ತೀಚಿನ ಸುದ್ದಿ

ದಳಪತಿಗಳ ನಾಡಿನಲ್ಲಿ ಜೆಡಿಎಸ್ ಕುರಿತು ಚಕಾರವೆತ್ತದ ಪ್ರಧಾನಿ ಮೋದಿ: ಮಂಡ್ಯ ಜನತೆಗೆ ಶಿರಭಾಗಿಸಿದ ಪಿಎಂ

12/03/2023, 19:29

ಸ್ವಪ್ನಾ ದಿನಕರ್ ಮದ್ದೂರು ಮಂಡ್ಯ

info.reporterkarnataka@gmail.com

ದಳಪತಿಗಳ ಭದ್ರಕೋಟೆ ಎಂದು ಕರೆಸಿಕೊಳ್ಳುವ ಮಂಡ್ಯ ಜಿಲ್ಲೆಯಲ್ಲಿ ಭಾನುವಾರ ಭರ್ಜರಿ ರೋಡ್ ಶೋ ಹಾಗೂ ಸಾರ್ವಜನಿಕ ಸಭೆ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರೂ ಜನತಾ ದಳ ಕುರಿತು ಯಾವುದೇ ಟೀಕೆ ಮಾಡದೆ ಅಚ್ಚರಿ ಉಂಟು ಮಾಡಿದರು.
ಸಾಮಾನ್ಯವಾಗಿ ಕುಟುಂಬ ರಾಜಕಾರಣ ಬಗ್ಗೆ ಜನತಾ ದಳವನ್ನು ಟೀಕೆ ಮಾಡುವ ಮೋದಿ ಅವರು
ಸಕ್ಕರೆ ನಾಡು ಮಂಡ್ಯದಲ್ಲಿ ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ ಅವರ ಬಗ್ಗೆಯಾಗಲಿ, ಕುಮಾರಸ್ವಾಮಿ ಕುರಿತಾಗಲಿ ಯಾವುದೇ ಟೀಕೆ ಮಾಡಿಲ್ಲ. ಕುಟುಂಬ ರಾಜಕಾರಣದ ಸೊಲ್ಲೆತ್ತಲಿಲ್ಲ. ಆದರೆ ಕಾಂಗ್ರೆಸ್ ಪಕ್ಷವನ್ನು ಟಾರ್ಗೆಟ್ ಮಾಡಿದ್ದರು.
ಕಾಂಗ್ರೆಸ್ ವಿರುದ್ಧ ಮಾತನಾಡಿದ ಅವರು,
ಕಾಂಗ್ರೆಸ್, ಮೋದಿಯವರ ಸಮಾಧಿಯನ್ನು ಅಗೆಯುವ ಕನಸು ಕಾಣುತ್ತಿದೆ. ದೇಶದ ಕೋಟ್ಯಂತರ ತಾಯಂದಿರು ಮತ್ತು ಸಹೋದರಿಯರ ಆಶೀರ್ವಾದವೇ ಮೋದಿಯವರ ಬಹುದೊಡ್ಡ ಭದ್ರತಾ ಕವಚ ಎಂಬುದು ಗೊತ್ತಿಲ್ಲ ಎಂದು ಹೇಳಿದರು.
ಕಾಂಗ್ರೆಸ್ ಮೋದಿ ಸಮಾಧಿ ತೋಡುವುದರಲ್ಲಿ ನಿರತವಾಗಿದೆ, ಆದರೆ ಮೋದಿ ಬಡವರ ಕೆಲಸದಲ್ಲಿ ನಿರತರಾಗಿದ್ದಾರೆ. ಆದರೆ, ಕಾಂಗ್ರೆಸ್ ಬಡವರನ್ನೇ ಮರೆತಿದೆ. ದೇಶದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಬಡವರನ್ನು ಮರೆತಿತ್ತು. ಗ್ರಾಮೀಣ ಜನರ ಬದುಕಿನ ಬಗ್ಗೆ ತಲೆಕೆಡಿಸಿಕೊಂಡಿರಲಿಲ್ಲ. ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ಬಡವರ ಪರವಾಗಿ ಕೆಲಸ ಮಾಡುತ್ತಿದೆ. ಹಲವು ಯೋಜನೆಗಳನ್ನು ಘೋಷಿಸಿದ್ದೇವೆ. ರೈತರಿಗೆ ಬಜೆಟ್ ನಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಘೋಷಿಸಲಾಗಿದೆ. ಡಬಲ್ ಇಂಜಿನ್ ಸರ್ಕಾರ ರೈತರು ಹಾಗೂ ಬಡವರ ಪರ ಕೆಲಸ ಮಾಡುವ ಸರ್ಕಾರ ಎಂದು ಬಣ್ಣಿಸಿದರು.
ಪಿಎಂ-ಕಿಸಾನ್ ಸಮ್ಮಾನ್ ನಿಧಿ ಅಡಿಯಲ್ಲಿ ಕೇಂದ್ರ ಸರ್ಕಾರ 6,000 ಮತ್ತು ಕರ್ನಾಟಕ ಸರ್ಕಾರ 4000 ಸೇರಿ ಒಟ್ಟು 10 ಸಾವಿರ ರೂಪಾಯಿ ಸಿಗುತ್ತಿದೆ. ಇದರಿಂದ ರೈತರಿಗೆ ಎರಡು ಬಾರಿ ಅನುಕೂಲವಾಗಿದ್ದು, ಅವರ ಸಮಸ್ಯೆಗಳಿಗೆ ಪರಿಹಾರ ದೊರೆಯಲಿದೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು