12:01 PM Tuesday16 - December 2025
ಬ್ರೇಕಿಂಗ್ ನ್ಯೂಸ್
ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್

ಇತ್ತೀಚಿನ ಸುದ್ದಿ

ದಳಪತಿಗಳ ನಾಡಿನಲ್ಲಿ ಜೆಡಿಎಸ್ ಕುರಿತು ಚಕಾರವೆತ್ತದ ಪ್ರಧಾನಿ ಮೋದಿ: ಮಂಡ್ಯ ಜನತೆಗೆ ಶಿರಭಾಗಿಸಿದ ಪಿಎಂ

12/03/2023, 19:29

ಸ್ವಪ್ನಾ ದಿನಕರ್ ಮದ್ದೂರು ಮಂಡ್ಯ

info.reporterkarnataka@gmail.com

ದಳಪತಿಗಳ ಭದ್ರಕೋಟೆ ಎಂದು ಕರೆಸಿಕೊಳ್ಳುವ ಮಂಡ್ಯ ಜಿಲ್ಲೆಯಲ್ಲಿ ಭಾನುವಾರ ಭರ್ಜರಿ ರೋಡ್ ಶೋ ಹಾಗೂ ಸಾರ್ವಜನಿಕ ಸಭೆ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರೂ ಜನತಾ ದಳ ಕುರಿತು ಯಾವುದೇ ಟೀಕೆ ಮಾಡದೆ ಅಚ್ಚರಿ ಉಂಟು ಮಾಡಿದರು.
ಸಾಮಾನ್ಯವಾಗಿ ಕುಟುಂಬ ರಾಜಕಾರಣ ಬಗ್ಗೆ ಜನತಾ ದಳವನ್ನು ಟೀಕೆ ಮಾಡುವ ಮೋದಿ ಅವರು
ಸಕ್ಕರೆ ನಾಡು ಮಂಡ್ಯದಲ್ಲಿ ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ ಅವರ ಬಗ್ಗೆಯಾಗಲಿ, ಕುಮಾರಸ್ವಾಮಿ ಕುರಿತಾಗಲಿ ಯಾವುದೇ ಟೀಕೆ ಮಾಡಿಲ್ಲ. ಕುಟುಂಬ ರಾಜಕಾರಣದ ಸೊಲ್ಲೆತ್ತಲಿಲ್ಲ. ಆದರೆ ಕಾಂಗ್ರೆಸ್ ಪಕ್ಷವನ್ನು ಟಾರ್ಗೆಟ್ ಮಾಡಿದ್ದರು.
ಕಾಂಗ್ರೆಸ್ ವಿರುದ್ಧ ಮಾತನಾಡಿದ ಅವರು,
ಕಾಂಗ್ರೆಸ್, ಮೋದಿಯವರ ಸಮಾಧಿಯನ್ನು ಅಗೆಯುವ ಕನಸು ಕಾಣುತ್ತಿದೆ. ದೇಶದ ಕೋಟ್ಯಂತರ ತಾಯಂದಿರು ಮತ್ತು ಸಹೋದರಿಯರ ಆಶೀರ್ವಾದವೇ ಮೋದಿಯವರ ಬಹುದೊಡ್ಡ ಭದ್ರತಾ ಕವಚ ಎಂಬುದು ಗೊತ್ತಿಲ್ಲ ಎಂದು ಹೇಳಿದರು.
ಕಾಂಗ್ರೆಸ್ ಮೋದಿ ಸಮಾಧಿ ತೋಡುವುದರಲ್ಲಿ ನಿರತವಾಗಿದೆ, ಆದರೆ ಮೋದಿ ಬಡವರ ಕೆಲಸದಲ್ಲಿ ನಿರತರಾಗಿದ್ದಾರೆ. ಆದರೆ, ಕಾಂಗ್ರೆಸ್ ಬಡವರನ್ನೇ ಮರೆತಿದೆ. ದೇಶದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಬಡವರನ್ನು ಮರೆತಿತ್ತು. ಗ್ರಾಮೀಣ ಜನರ ಬದುಕಿನ ಬಗ್ಗೆ ತಲೆಕೆಡಿಸಿಕೊಂಡಿರಲಿಲ್ಲ. ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ಬಡವರ ಪರವಾಗಿ ಕೆಲಸ ಮಾಡುತ್ತಿದೆ. ಹಲವು ಯೋಜನೆಗಳನ್ನು ಘೋಷಿಸಿದ್ದೇವೆ. ರೈತರಿಗೆ ಬಜೆಟ್ ನಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಘೋಷಿಸಲಾಗಿದೆ. ಡಬಲ್ ಇಂಜಿನ್ ಸರ್ಕಾರ ರೈತರು ಹಾಗೂ ಬಡವರ ಪರ ಕೆಲಸ ಮಾಡುವ ಸರ್ಕಾರ ಎಂದು ಬಣ್ಣಿಸಿದರು.
ಪಿಎಂ-ಕಿಸಾನ್ ಸಮ್ಮಾನ್ ನಿಧಿ ಅಡಿಯಲ್ಲಿ ಕೇಂದ್ರ ಸರ್ಕಾರ 6,000 ಮತ್ತು ಕರ್ನಾಟಕ ಸರ್ಕಾರ 4000 ಸೇರಿ ಒಟ್ಟು 10 ಸಾವಿರ ರೂಪಾಯಿ ಸಿಗುತ್ತಿದೆ. ಇದರಿಂದ ರೈತರಿಗೆ ಎರಡು ಬಾರಿ ಅನುಕೂಲವಾಗಿದ್ದು, ಅವರ ಸಮಸ್ಯೆಗಳಿಗೆ ಪರಿಹಾರ ದೊರೆಯಲಿದೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು