7:17 PM Wednesday5 - November 2025
ಬ್ರೇಕಿಂಗ್ ನ್ಯೂಸ್
ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:…

ಇತ್ತೀಚಿನ ಸುದ್ದಿ

ದಲಿತ ನಾಯಕನ ಮುಖ್ಯಮಂತ್ರಿ ಮಾಡಿ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಗೆ ಮಾಜಿ ಸಿಎಂ ಸಿದ್ದರಾಮಯ್ಯ ಸವಾಲು

23/07/2021, 17:52

ಮಂಗಳೂರು(reporterkarnataka news): ದಲಿತರನ್ನು ಮುಖ್ಯಮಂತ್ರಿ ಮಾಡುವಂತೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ನನಗೆ ಸವಾಲು ಹಾಕಿದ್ದರು. ಇದೀಗ ರಾಜ್ಯದಲ್ಲಿ ಮುಖ್ಯಮಂತ್ರಿಯನ್ನು ಬದಲಾಯಿಸುತ್ತಿದ್ದಾರೆ. ಕಟೀಲ್ ಅವರು ದಲಿತ ವ್ಯಕ್ತಿಯನ್ನು ಸಿಎಂ ಮಾಡಲಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲು ಹಾಕಿದರು.

ಕಾಂಗ್ರೆಸ್ ಪಕ್ಷ ನಾಲ್ವರು ದಲಿತರನ್ನು ಮುಖ್ಯಮಂತ್ರಿ ಮಾಡಿದೆ. ನಳಿನ್ ಅವರಿಗೆ ದಲಿತರ ಮೇಲೆ ಪ್ರೀತಿ ಇದ್ದರೆ ಯಡಿಯೂರಪ್ಪ ಅವರನ್ನು ಇಳಿಸುವ ಸಂದರ್ಭದಲ್ಲಿ ದಲಿತ ನಾಯಕನ ಮುಖ್ಯಮಂತ್ರಿ ಮಾಡಲಿ ಎಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನುಡಿದರು.

ಬಿಜೆಪಿ ಭ್ರಷ್ಟ ಪಕ್ಷ. ಯಾರೇ ಮುಖ್ಯಮಂತ್ರಿ ಬಂದರೂ ಅವರು ಭ್ರಷ್ಟರಾಗಿರುತ್ತಾರೆ. ಸಿಎಂ ಬದಲಾಯಿಸುತ್ತಾರೆ ಎಂದು ನಾನು ಮೊದಲೇ ಹೇಳಿದ್ದೆ. ಯಡಿಯೂರಪ್ಪ ಅವರು ಮುಂದಿನ ತಿಂಗಳು, ಎರಡು ತಿಂಗಳು ಬಿಟ್ಟು ಅಂತ ಮುಂದೂಡುತ್ತಾ ಬಂದರು. ಆದರೆ ಇದೀಗ ಗಡು ನೀಡಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು