2:24 PM Wednesday11 - February 2026
ಬ್ರೇಕಿಂಗ್ ನ್ಯೂಸ್
ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಇತ್ತೀಚಿನ ಸುದ್ದಿ

ದಲ್ಲಾಳಿಗಳ ಕಾಟ: ಅಧಿಕಾರಿಗಳು ಮೌನ; ಸಾವಿರಾರು ಬೆಲೆಯ ರಸಗೊಬ್ಬರ ಖರೀದಿಸಿದರೆ ಮಾತ್ರ ಯೂರಿಯಾ!!

26/11/2022, 19:32

ರಾಹುಲ್ ಅಥಣಿ ಬೆಳಗಾವಿ

info.reporterkarnataka@gamil.com

ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ನದಿ ಇಂಗಳಗಾವ
ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ರಸಗೊಬ್ಬರ ಖರೀದಿಸಿದರೆ ಮಾತ್ರ ಯೂರಿಯಾ ನೀಡುತ್ತಿದ್ದಾರೆ ಎಂದು ರೈತರು ಅಳಲು ವ್ಯಕ್ತಪಡಿಸಿದ್ದಾರೆ.


ನಮಗೆ ಯೂರಿಯಾ ತರಲು ದುಡ್ಡು ಇಲ್ಲ ಸ್ವಾಮಿ!ಅದರ ಜೊತೆ ಸಾವಿರಾರು ರೂ ಬೆಲೆ ಬಾಳುವ ಕಳಪೆ ಗೊಬ್ಬರ ಖರೀದಿಸಬೇಕು. ಇಲ್ಲಂದ್ರೆ ಯೂರಿಯಾ ಕೊಡಲ್ಲ ಎಂದು ರೈತರು ತಮ್ಮ ಕಷ್ಟ ಹೇಳಿಕೊಂಡಿದ್ದಾರೆ.

ಯೂರಿಯಾ ಗೊಬ್ಬರ ಜೊತೆ ಕಳಪೆ ಗುಣಮಟ್ಟದ ರಾಸಾಯನಿಕ ಲಿಂಕ್ ಕಡ್ಡಾಯವಾಗಿದೆ. ದಲ್ಲಾಳಿಗಳ ಅಟ್ಟಹಾಸದಿಂದ
ರೈತರಿಗೆ ಪ್ರಾಣ ಸಂಕಟ ಉಂಟಾಗಿದೆ. ಇದರಿಂದ ನದಿ ಇಂಗಳಗಾವ ಗ್ರಾಮದಲ್ಲಿ ರೈತರಿಗೆ ಭಾರಿ ಅನ್ಯಾಯವಾಗಿದೆ.

ಅಥಣಿ ಪಟ್ಟಣ ಸೇರಿ ತಾಲೂಕಿನ ಹಲವು ಗ್ರಾಮಗಳಲ್ಲಿ ಇದೆ ಸಮಸ್ಯೆ ಇದೆ. ಅಧಿಕಾರಿಗಳೇ ಇಂತಹ ಹಣಧಾಹಿ ದಲ್ಲಾಳಿ ಹಾಗೂ ಕಂಪನಿಗಳಿಗೆ ಮುಗುದಾರ ಯಾವಾಗ ಎಂದು ರೈತರು ಪ್ರಶ್ನಿಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು