12:28 AM Friday19 - September 2025
ಬ್ರೇಕಿಂಗ್ ನ್ಯೂಸ್
Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.…

ಇತ್ತೀಚಿನ ಸುದ್ದಿ

ದಂಪತಿ ಜತೆ ಸುರತ್ಕಲ್ ಟೋಲ್ ಸಿಬ್ಬಂದಿ ಅನುಚಿತ ದುರ್ವರ್ತನೆ: ಪೋಲೀಸ್ ಕಮಿಷನರ್ ಶಶಿಕುಮಾರ್ ಆದೇಶದಂತೆ ಆರೋಪಿ ಬಂಧನ

29/11/2021, 19:14

ಮಂಗಳೂರು(reporterkarnataka.com): ಮಂಗಳೂರಿನಲ್ಲಿ ವೃತ್ತಿಯಲ್ಲಿರುವ ಉಡುಪಿ ಮೂಲದ ದಂಪತಿ ವಾರಾಂತ್ಯದಲ್ಲಿ ತಮ್ಮ ಕಾರಿನಲ್ಲಿ ಉಡುಪಿಗೆ ತೆರಳುತ್ತಿದ್ದಾಗ, ಸುರತ್ಕಲ್ ಮುಕ್ಕದಲ್ಲಿ ಕಾನೂನುಬಾಹಿರವಾಗಿ ಕಾರ್ಯಾಚರಿಸುತ್ತಿರುವ ಅನಧಿಕೃತ ಟೋಲ್ ಗೇಟ್ ನಲ್ಲಿ ಸಿಬ್ಬಂದಿಯೋರ್ವ ತೀರಾ ಅನುಚಿತ ವರ್ತನೆ ತೋರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಟೋಲ್ ಸಿಬ್ಬಂದಿಯನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ. 

ನವೆಂಬರ್ 27ರಂದು ನಡೆದ ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಘಟನೆ ನಡೆದ ವೇಳೆ ಸಹಾಯಕ್ಕಾಗಿ ದಂಪತಿ ಸುರತ್ಕಲ್ ಠಾಣೆಗೆ ಕರೆ ಮಾಡಿದ್ದರು. ಆ ಸಂದರ್ಭದಲ್ಲಿ ‘ಘಟನಾ ಸ್ಥಳಕ್ಕೆ ಕಳುಹಿಸಲು ತಮ್ಮಲ್ಲಿ ವಾಹನವಿಲ್ಲ’ ವೆಂದು ಠಾಣೆಯಿಂದ ಸಬೂಬು ನೀಡಲಾಗಿತ್ತು. ಹೈವೇ ಗಸ್ತು ವಾಹನವನ್ನೂ ಕಳುಹಿಸದೆ ಪೊಲೀಸರು ಕೈಚೆಲ್ಲಿದ್ದರು. ದಾರಿ ಕಾಣದೆ ದಂಪತಿ ತೀವ್ರವಾಗಿ ನೊಂದು ಕೊನೆಗೆ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಅವರಿಗೆ ನೇರ ಕರೆ ಮಾಡಿದ್ದಾರೆ ಕೂಡಲೇ ಕಾರ್ಯಪ್ರವೃತ್ತರಾದ ಪೋಲೀಸ್ ಕಮಿಷನರ್ ಶಶಿಕುಮಾರ್ ಅವರು 
ಆರೋಪಿಯನ್ನು ಬಂಧಿಸಲು ಅದೇ ಸುರತ್ಕಲ್ ಠಾಣೆಯ ಇನ್ಸ್ಪೆಕ್ಟರ್ ಸಹಿತವಾಗಿ ಸಿಬ್ಬಂದಿಗಳನ್ನು 10 ನಿಮಿಷದಲ್ಲಿ ಕಳುಹಿಸಿದ್ದಾರೆ. ದುರ್ವರ್ತನೆ ತೋರಿದ್ದ ಟೋಲ್ ಸಿಬಂದಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ. ಇದೀಗ ಆರೋಪಿ ನ್ಯಾಯಾಂಗ ಬಂಧನದಲ್ಲಿದ್ದಾನೆ.

ಇತ್ತೀಚಿನ ಸುದ್ದಿ

ಜಾಹೀರಾತು