12:27 AM Friday13 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ದನ ಕಟ್ಟುವ ವಿಷಯದಲ್ಲಿ ಪುತ್ರನಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪಿತ: ಮಗ ಆಸ್ಪತ್ರೆಗೆ, ಅಪ್ಪ ಜೈಲಿಗೆ

22/06/2021, 18:15

ಮಂಗಳೂರು(reporterkarnataka news): ಕ್ಷುಲ್ಲಕ ವಿಷಯಕ್ಕೆ ತಂದೆ-ಮಗನ ನಡುವೆ ಉಂಟಾದ ಜಗಳ ತಾರಕಕ್ಕೇರಿ ಸ್ವಂತ ಅಪ್ಪನೇ ಮಗನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಿದ ಭಯಾನಕ ಘಟನೆ ನಗರದ ಹೊರವಲಯದ ಜಪ್ಪಿನಮೊಗರು ಕೊಪ್ಪರಿಗೆ ಗುತ್ತು ಎಂಬಲ್ಲಿ ನಡೆದಿದೆ.

ತಂದೆ ವಿಶ್ವನಾಥ ಶೆಟ್ಟಿ ಹಾಗೂ ಅವರ ಪುತ್ರ ಸಾಮಿತ್ವ ಶೆಟ್ಟಿ ಅವರೊಳಗೆ ದನ ಕಟ್ಟುವ ವಿಷಯದಲ್ಲಿ ಮಾತಿಗೆ ಮಾತು ಬೆಳೆದಿತ್ತು. ಇದರಿಂದ ಕ್ರೋಧಗೊಂಡ ವಿಶ್ವನಾಥ ಶೆಟ್ಟಿ ಅವರು ಮಗನ ಮೇಲೆ ಪೆಟ್ರೋಲ್ ಸುರಿದು ಕೊಲೆಗೆ ಯತ್ನಿಸಿದರು ಎನ್ನಲಾಗಿದೆ. ಸುಟ್ಟಗಾಯದೊಂದಿಗೆ ಪುತ್ರ ಆಸ್ಪತ್ರೆ ಸೇರಿದರೆ, ಅಪ್ಪ ವಿಶ್ವನಾಥ ಶೆಟ್ಟಿ ಜೈಲುಪಾಲಾಗಿದ್ದಾರೆ. ಕಂಕನಾಡಿ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು