2:22 AM Friday3 - October 2025
ಬ್ರೇಕಿಂಗ್ ನ್ಯೂಸ್
Kodagu | ಡಿವೈಎಸ್ಪಿ ಮೇಲೆ ಹಲ್ಲೆ ಪ್ರಕರಣ: ಆರೋಪಿಗೆ ಅ. 16 ರವರೆಗೆ… ಹೆತ್ತಬ್ಬೆಯನ್ನೇ ಕೊಂದ ಪಾಪಿ ಪುತ್ರ: ಅಡುಗೆ ಮಾಡಿಲ್ಲ ಎಂಬ ಕಾರಣಕ್ಕೆ ಹತ್ಯೆ; ಆರೋಪಿಯ… Kodagu | ಮಂಜಿನ ನಗರಿ ಮಡಿಕೇರಿಯಲ್ಲಿ ಜನೋತ್ಸವಕ್ಕೆ ಜನಜoಗುಳಿ: ದಶ ಮಂಟಪಗಳಿಂದ ಶೋಭಾ… Bangaluru | ವೈದ್ಯ ದಂಪತಿಯಿಂದ ಮನೆಯಲ್ಲೇ ನವದುರ್ಗೆಯರ ಆರಾಧನೆ: ಸಾಲು ಸಾಲು ದಸರಾ… ಮಡಿಕೇರಿ ದಸರಾ ಶೋಭಯಾತ್ರೆಗೆ ತೆರೆ: ದಶಮoಟಪಗಳ ತೀರ್ಪುಗಾರರ ವಿರುದ್ದ ಆಕ್ರೋಶ; ಪ್ರತಿಭಟನೆ ಮುಂದಿನ ವರ್ಷವೂ ನಾನೇ ದಸರಾ ಪುಷ್ಪಾರ್ಚನೆ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ ಭರವಸೆಯ ನುಡಿ ಮೈಸೂರು ದಸರಾ: ಅರಮನೆ ಆವರಣದಲ್ಲಿ ಯದುವೀರ್ ಒಡೆಯರ್ ರಿಂದ ಶಮಿ ಪೂಜೆ ವಿಶ್ವ ವಿಖ್ಯಾತ ಮೈಸೂರು ದಸರಾ: ಜಂಬೂ ಸವಾರಿಗೆ ಗಜಪಡೆ ಸಜ್ಜು ಮೈಸೂರು ಅರಮನೆಗೆ ಬೆಳ್ಳಿ ರಥದಲ್ಲಿ ಹೊರಟ ಚಾಮುಂಡಿ ದೇವಿ: ಬಿಗಿ ಬಂದೋಬಸ್ತ್ Bangaluru | ಇತಿಹಾಸಕಾರ, ಲೇಖಕ ಡಾ. ರಾಮಚಂದ್ರ ಗುಹಾಗೆ ಮಹಾತ್ಮ ಗಾಂಧಿ ಸೇವಾ…

ಇತ್ತೀಚಿನ ಸುದ್ದಿ

ದರ್ಗಾಗಳಿಗೆ ಜಾತಿ, ಧರ್ಮದ ಮಿತಿ ಇಲ್ಲ: ಉಳ್ಳಾಲ ದರ್ಗಾದ 22ನೇ ಪಂಚ ವಾರ್ಷಿಕ ಉರೂಸ್ ಮಹೋತ್ಸವದಲ್ಲಿ ಸಿಎಂ

16/05/2025, 22:30

ಮಂಗಳೂರು(reporterkarnataka.com): ನಾವು ಮೊದಲು ಮನುಷ್ಯರು, ನಂತರ ಭಾರತೀಯರು ಆಮೇಲೆ ಹಿಂದೂಗಳು, ಮುಸ್ಲೀಮರು ಮತ್ತು ಧರ್ಮೀಯರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.
ಉಳ್ಳಾಲದ ಶರೀಫುಲ್ ಮದನಿ ದರ್ಗಾದ 22ನೇ ಪಂಚವಾರ್ಷಿಕ ಉರೂಸ್ ಮಹೋತ್ಸವದಲ್ಲಿ ಮಾತನಾಡಿದರು.
ನಮ್ಮ ಸರ್ಕಾರ ಸಂವಿಧಾನದ ಆಶಯದಂತೆ ಸರ್ವರನ್ನೂ ಸಮಾನವಾಗಿ ಕಾಣುತ್ತದೆ‌ ಎಂದರು.
ದೇಶದಲ್ಲಿ ಅನೇಕ ಸೂಫಿ, ಸಾಧು, ಸಂತರು, ಸಾಮಾಜಿಕ ಹರಿಕಾರರು ಬಂದು ಹೋಗಿದ್ದಾರೆ. ಇವರೆಲ್ಲರೂ ಮನುಷ್ಯ ಧರ್ಮವನ್ನು ಪ್ರತಿಪಾದಿಸಿದವರು. ಆದ್ದರಿಂದ ನಾವು ಮಾನವೀಯ ನೆಲೆಯಲ್ಲಿ ಸಮಾಜವನ್ನು ಬೆಸೆಯಬೇಕು ಎಂದು ಅವರು ನುಡಿದರು.
ಉಳ್ಳಾಲ ದರ್ಗಾಕ್ಕೆ ಜಾತಿ, ಧರ್ಮದ ಮಿತಿ ಇಲ್ಲ. ಎಲ್ಲಾ ಜಾತಿ, ಎಲ್ಲಾ ಧರ್ಮದ ಬಡವರ ದರ್ಗಾ ಎಂದರು.
ನಮ್ಮ ಸರ್ಕಾರದ ಕಾರ್ಯಕ್ರಮಗಳೂ ಸರ್ವ ಧರ್ಮ, ಸರ್ವ ಜಾತಿಯವರಿಗೆ ಸಲ್ಲುವಂಥವು ಎಂದು ಸಿಎಂ ನುಡಿದರು.
ಇದಕ್ಕೂ ಮುನ್ನ ಮುಖ್ಯಮಂತ್ರಿಗಳು ದಗಾ೯ ಭೇಟಿ ನೀಡಿದರು.
ಸ್ಪೀಕರ್ ಯು.ಟಿ. ಖಾದರ್,
ಉಳ್ಳಾಲ ಖಾಝಿ ಕಾಂತಪುರಂ ಎ.ಪಿ. ಅಬೂಬಕ್ಕರ್ ಮುಸ್ಲಿಯಾರ್ ಮಾತನಾಡಿದರು.
ಕಂದಾಯ ಸಚಿವ ಕೃಷ್ಣ ಭೈರೇಗೌಡ, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ನಗರಾಭಿವೃದ್ಧಿ ಸಚಿವ ಬಿ. ಸುರೇಶ್, ಪೌರಾಡಳಿತ ಸಚಿವ ರಹೀಂ ಖಾನ್, ಮಂಜೇಶ್ವರ ಶಾಸಕ ಎಕೆಎಂ ಅಶ್ರಫ್, ಮಾಜಿ ಕೇಂದ್ರ ಸಚಿವ ಸಿ.ಎಂ. ಇಬ್ರಾಹಿಂ, ಜಿಲ್ಲಾ ವಕ್ಫ್ ಸಮಿತಿ ಅಧ್ಯಕ್ಷ ನಾಸೀರ್ ಲಕ್ಕಿಸ್ಟಾರ್, ದಗಾ೯ ಅಧ್ಯಕ್ಷ ಹನೀಫ್ ಹಾಜಿ ಮತ್ತಿತರರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು