11:32 AM Friday21 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ದರ್ಗಾಗಳಿಗೆ ಜಾತಿ, ಧರ್ಮದ ಮಿತಿ ಇಲ್ಲ: ಉಳ್ಳಾಲ ದರ್ಗಾದ 22ನೇ ಪಂಚ ವಾರ್ಷಿಕ ಉರೂಸ್ ಮಹೋತ್ಸವದಲ್ಲಿ ಸಿಎಂ

16/05/2025, 22:30

ಮಂಗಳೂರು(reporterkarnataka.com): ನಾವು ಮೊದಲು ಮನುಷ್ಯರು, ನಂತರ ಭಾರತೀಯರು ಆಮೇಲೆ ಹಿಂದೂಗಳು, ಮುಸ್ಲೀಮರು ಮತ್ತು ಧರ್ಮೀಯರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.
ಉಳ್ಳಾಲದ ಶರೀಫುಲ್ ಮದನಿ ದರ್ಗಾದ 22ನೇ ಪಂಚವಾರ್ಷಿಕ ಉರೂಸ್ ಮಹೋತ್ಸವದಲ್ಲಿ ಮಾತನಾಡಿದರು.
ನಮ್ಮ ಸರ್ಕಾರ ಸಂವಿಧಾನದ ಆಶಯದಂತೆ ಸರ್ವರನ್ನೂ ಸಮಾನವಾಗಿ ಕಾಣುತ್ತದೆ‌ ಎಂದರು.
ದೇಶದಲ್ಲಿ ಅನೇಕ ಸೂಫಿ, ಸಾಧು, ಸಂತರು, ಸಾಮಾಜಿಕ ಹರಿಕಾರರು ಬಂದು ಹೋಗಿದ್ದಾರೆ. ಇವರೆಲ್ಲರೂ ಮನುಷ್ಯ ಧರ್ಮವನ್ನು ಪ್ರತಿಪಾದಿಸಿದವರು. ಆದ್ದರಿಂದ ನಾವು ಮಾನವೀಯ ನೆಲೆಯಲ್ಲಿ ಸಮಾಜವನ್ನು ಬೆಸೆಯಬೇಕು ಎಂದು ಅವರು ನುಡಿದರು.
ಉಳ್ಳಾಲ ದರ್ಗಾಕ್ಕೆ ಜಾತಿ, ಧರ್ಮದ ಮಿತಿ ಇಲ್ಲ. ಎಲ್ಲಾ ಜಾತಿ, ಎಲ್ಲಾ ಧರ್ಮದ ಬಡವರ ದರ್ಗಾ ಎಂದರು.
ನಮ್ಮ ಸರ್ಕಾರದ ಕಾರ್ಯಕ್ರಮಗಳೂ ಸರ್ವ ಧರ್ಮ, ಸರ್ವ ಜಾತಿಯವರಿಗೆ ಸಲ್ಲುವಂಥವು ಎಂದು ಸಿಎಂ ನುಡಿದರು.
ಇದಕ್ಕೂ ಮುನ್ನ ಮುಖ್ಯಮಂತ್ರಿಗಳು ದಗಾ೯ ಭೇಟಿ ನೀಡಿದರು.
ಸ್ಪೀಕರ್ ಯು.ಟಿ. ಖಾದರ್,
ಉಳ್ಳಾಲ ಖಾಝಿ ಕಾಂತಪುರಂ ಎ.ಪಿ. ಅಬೂಬಕ್ಕರ್ ಮುಸ್ಲಿಯಾರ್ ಮಾತನಾಡಿದರು.
ಕಂದಾಯ ಸಚಿವ ಕೃಷ್ಣ ಭೈರೇಗೌಡ, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ನಗರಾಭಿವೃದ್ಧಿ ಸಚಿವ ಬಿ. ಸುರೇಶ್, ಪೌರಾಡಳಿತ ಸಚಿವ ರಹೀಂ ಖಾನ್, ಮಂಜೇಶ್ವರ ಶಾಸಕ ಎಕೆಎಂ ಅಶ್ರಫ್, ಮಾಜಿ ಕೇಂದ್ರ ಸಚಿವ ಸಿ.ಎಂ. ಇಬ್ರಾಹಿಂ, ಜಿಲ್ಲಾ ವಕ್ಫ್ ಸಮಿತಿ ಅಧ್ಯಕ್ಷ ನಾಸೀರ್ ಲಕ್ಕಿಸ್ಟಾರ್, ದಗಾ೯ ಅಧ್ಯಕ್ಷ ಹನೀಫ್ ಹಾಜಿ ಮತ್ತಿತರರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು