10:15 AM Saturday27 - June 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;…

ಇತ್ತೀಚಿನ ಸುದ್ದಿ

ಧರ್ಮಸ್ಥಳದಲ್ಲಿ ತಲೆ ಎತ್ತಲಿದೆ ಮಿನಿ ವಿಮಾನ ನಿಲ್ದಾಣ:  ಜತೆಗೆ 4 ಹೆಲಿಪ್ಯಾಡ್‌; ಶೀಘ್ರವೇ ಡಿಪಿಆರ್ ತಯಾರಿಗೆ ಸಿದ್ಧತೆ

28/08/2022, 22:59

ಬೆಳ್ತಂಗಡಿ(reporterkarnataka.com): ದಕ್ಷಿಣ ಭಾರತದ ಪ್ರಸಿದ್ಧ ಪುಣ್ಯ ಕ್ಷೇತ್ರಗಳಲ್ಲೊಂದಾದ ಧರ್ಮಸ್ಥಳದಲ್ಲಿ ಮಿನಿ ವಿಮಾನ ನಿಲ್ದಾಣ ನಿರ್ಮಿಸಲಾಗುವುದು. ಈ ನಿಟ್ಟಿನಲ್ಲಿ 100 ಎಕರೆ ಜಾಗ ಗುರುತಿಸಲು ಮುಖ್ಯಮಂತ್ರಿ ಹಾಗೂ ಇತರ ಇಲಾಖೆ ಜತೆ ಚರ್ಚಿಸಲಾಗುವುದು ಎಂದು ವಸತಿ ಮತ್ತು ಮೂಲಭೂತ ಸೌಕರ್ಯ ಸಚಿವ ವಿ. ಸೋಮಣ್ಣ ಹೇಳಿದರು.

ಧರ್ಮಸ್ಥಳಕ್ಕೆ ಭೇಟಿ ನೀಡುವ ಯಾತ್ರಾರ್ಥಿಗಳ ಬೇಡಿಕೆಗೆ ಅನುಗುಣವಾಗಿ ವಿಮಾನ ನಿಲ್ದಾಣ ನಿರ್ಮಿಸಲಾಗುವುದು ಎಂದು ಅವರು ಬೆಳ್ತಂಗಡಿಯಲ್ಲಿ  ಬಸವ ವಸತಿ ಮತ್ತು ಅಂಬೇಡ್ಕರ್ ವಸತಿ ಯೋಜನೆಗಳ 1500 ಫಲಾನುಭವಿಗಳಿಗೆ ಕಾಮಗಾರಿ ಆದೇಶ ಪತ್ರ ವಿತರಿಸಿ ಮಾತನಾಡುತ್ತಾ ಹೇಳಿದರು.

ಭವಿಷ್ಯದ ಚಿಂತನೆಗಳೊಂದಿಗೆ ಎಟಿಆರ್ ಮತ್ತು ವಿಮಾನ ನಿಲ್ದಾಣದಲ್ಲಿ 10 ರಿಂದ 12 ಆಸನಗಳ ವಿಮಾನಗಳು ಇಳಿಯಬಹುದು, ಜೊತೆಗೆ ನಾಲ್ಕು ಹೆಲಿಪ್ಯಾಡ್‌ಗಳನ್ನು ಧರ್ಮಸ್ಥಳಕ್ಕೆ ಯೋಜಿಸಲಾಗಿದೆ. ಶೀಘ್ರದಲ್ಲೇ ಡಿಪಿಆರ್ ತಯಾರಿಸಿ ಸಂಪುಟದ ಅನುಮೋದನೆಗೆ ಕಳುಹಿಸಲಾಗುವುದು ಎಂದರು.

ಇನ್ನು ತಾಲೂಕಿನ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಇನ್ನೂ 10 ಕೋಟಿ ರೂ.ಅನುದಾನ ನೀಡಲಾಗುವುದು ಎಂದ ಸಚಿವರು, ಎಲ್ಲ 48 ಪಂಚಾಯಿತಿಗಳಲ್ಲಿ ಫಲಾನುಭವಿಗಳನ್ನು ಗುರುತಿಸಿ ವರದಿ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ  ಸೂಚಿಸಿದರು.

ಶಾಸಕ ಹರೀಶ್ ಪೂಂಜ ಮಾತನಾಡಿ, ‘ಸಚಿವ ಸೋಮಣ್ಣ ಅವರು 1500 ಮನೆಗಳನ್ನು ಮಂಜೂರು ಮಾಡುವ ಮೂಲಕ ಪ್ರತಿಯೊಬ್ಬ ಫಲಾನುಭವಿಗೆ ಉತ್ತಮ ಮನೆ ಮತ್ತು ಉತ್ತಮ ಕುಟುಂಬದ ಕನಸನ್ನು ನನಸಾಗಿಸಿದ್ದಾರೆ. ತಾಲೂಕಿಗೆ ಇನ್ನೂ 5000 ಮನೆಗಳ ಅಗತ್ಯವಿದ್ದು, ಸಚಿವರಲ್ಲಿ ಮನವಿ ಮಾಡಿದ್ದೇನೆ ಎಂದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು