5:28 PM Saturday10 - May 2025
ಬ್ರೇಕಿಂಗ್ ನ್ಯೂಸ್
Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌… Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ… ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ತಾಯಿ – ಮಗುವಿಗೆ… Airport | ಕಲಬುರಗಿ ವಿಮಾನ ನಿಲ್ದಾಣ: ಭದ್ರತಾ ತಪಾಸಣೆ; ನಿಗದಿತ ಸಮಯಕ್ಕೆ ಪ್ರಯಾಣಿಕರು… J&K | ಆಪರೇಶನ್ ಸಿಂಧೂರ್: ಕರ್ನಲ್ ಸೋಫಿಯಾ ಖುರೇಷಿ: ಕರ್ನಾಟಕದ ಸೊಸೆ ರೀ..!! Karnataka CM | ಮೈಶುಗರ್ ಕಾರ್ಖಾನೆಗೆ 50 ಕೋಟಿ ಕೊಟ್ಟಿದ್ದಷ್ಟೆ ಅಲ್ಲ, ವಿದ್ಯುತ್… ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಸ್ವಾಗತಿಸಿದ ಮಾಜಿ… ಬೆಂಗಳೂರು ಜ್ಞಾನಭಾರತಿ ವಿಶ್ವವಿದ್ಯಾಲಯದಲ್ಲಿ ರಿಜಿಸ್ಟ್ರಾರ್ ಹುದ್ದೆಗೆ 35 ಲಕ್ಷ ರೂ. ವಂಚನೆ: ಎಫ್… Doddaballapura | ಘಾಟಿ ಸುಬ್ರಹ್ಮಣ್ಯ ಕ್ಷೇತ್ರ: ಸರಳ ಸಾಮೂಹಿಕ ವಿವಾಹದಲ್ಲಿ 66 ಜೋಡಿಗಳಿಗೆ… Ex CM | ಸಿಂಧೂರ ಕಳೆದುಕೊಂಡ ಹೆಣ್ಣು ಮಕ್ಕಳ ಪ್ರತೀಕಾರ: ಮಾಜಿ ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ಧರ್ಮಸ್ಥಳ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಏಕ ಬಳಕೆ ಪ್ಲಾಸ್ಟಿಕ್ ನಿಷೇಧ ಜಾರಿ

03/10/2023, 13:27

ಮಂಗಳೂರು(reporterkarnataka.com): ಧರ್ಮಸ್ಥಳ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಏಕ ಬಳಕೆ ಪ್ಲಾಸ್ಟಿಕ್ ನಿಷೇಧ ಜಾರಿ ತರಲಾಗಿದ್ದು, ಅ.2ರ ಸೋಮವಾರ ಗಾಂಧಿ ಜಯಂತಿ ಅಂಗವಾಗಿ ಮಹಾತ್ಮ ಗಾಂಧಿಜೀ ಪ್ರತಿಮೆಗೆ ಪುಷ್ಪಾರ್ಚಾಣೆ ಮಾಡಿ ರಾಜ್ಯಸಭಾ ಸದಸ್ಯ ಡಾ.ಡಿ. ವೀರೇಂದ್ರ ಹೆಗಡೆ ಅವರು ಈ ಬಗ್ಗೆ ಅಧಿಕೃತ ಘೋಷಣೆ ಮಾಡಿದರು.


ಗಾಂಧಿಯವರ ವಿಚಾರಧಾರೆ ಎಂದಿಗೂ ಸಾರ್ವಕಾಲಿಕ. ಸ್ವಚ್ಛತೆ ಬಗೆಗಿದ್ದ ಕಾಳಜಿ, ಬದ್ಧತೆ ನಮಗೆಲ್ಲ ಮಾದರಿ. ಈ ನಿಟ್ಟಿನಲ್ಲಿ ಈ ದಿವಸ ಏಕ ಬಳಕೆಯ ವಸ್ತುಗಳಾದ ಪ್ಲಾಸ್ಟಿಕ್ ಕೈ ಚೀಲಗಳು, ಪ್ಲಾಸ್ಟಿಕ್ ಕಡ್ಡಿಗಳು, ದಿನ ಬಳಸುವ ಪ್ಲಾಸ್ಟಿಕ್ ವಸ್ತುಗಳಾದ ಲೋಟ, ಚೂರಿಗಳು, ಪ್ಯಾಕಿಂಗ್ ಗೆ ಬಳಸುವ ರ್ಯಾಪರ್, ಪ್ಲಾಸ್ಟಿಕ್ ಆಹ್ವಾನ ಪತ್ರಿಕೆ, ಪ್ಲಾಸ್ಟಿಕ್ ಹಾಗೂ ಪಿವಿಸಿ ಬ್ಯಾನರ್ಗಳು ಮೊದಲಾದವುಗಳನ್ನು ನಿಷೇಧಿಸಲಾಗಿದೆ ಎಂದು ಘೋಷಿಸಿದರು.
ದೇಶದಾದ್ಯಂತ ಏಕ‌ಬಳಕೆಯ ಪ್ಲಾಸ್ಟಿಕ್ ನಿಷೇಧ ಹೇರಲಾಗಿದ್ದು , ಕರ್ನಾಟಕ ಸರ್ಕಾರವು 2016 ರಿಂದಲೇ ಪ್ಲಾಸ್ಟಿಕ್ ಬಳಕೆ ನಿಷೇಧಿಸಿದೆ. ಇವತ್ತಿನ ಪ್ಲಾಸ್ಟಿಕ್ ನಿಷೇಧ ರಾಜ್ಯಕ್ಕೆ ಮೊದಲು ಹಾಗೂ ಮಾದರಿ ಯಾಗಲಿ ಎಂದರು.
ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಲೆಕ್ಕಾಧಿಕಾರಿ ಪ್ರಸಸ್ನ ಭಕ್ತ, ಸ್ಥಳೀಯ ಪಂಚಾಯತ್ ಅಧ್ಯಕ್ಷೆ ವಿಮಲಾ, ಉಪಾಧ್ಯಕ್ಷ ಶ್ರೀನಿವಾಸ, ತಾಲೂಕು ಕಾರ್ಯನಿರ್ವಾಹಕ ಅಧಿಕಾರಿ ಕುಸುಮಾಧರ, ಸ್ವಚ್ಛ ಭಾರತ್ ಮಿಷನ್ (ಗ್ರಾ) ಐಇಸಿ ತಜ್ಞ ಡೊಂಬಯ್ಯ ಇಡ್ಕಿದು, ಎಚ್.ಆರ್.ಡಿ ನವೀನ್ , ಜಲ್ ಜೀವನ್ ಮಿಷನ್ ನ ವಿಘ್ನೇಶ್, ಗ್ರಾಮ ಪಂಚಾಯತ್ ಸಿಬ್ಬಂದಿಗಳು ಹಾಗೂ ಇತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು