12:59 AM Thursday19 - March 2026
ಬ್ರೇಕಿಂಗ್ ನ್ಯೂಸ್
Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ… ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು…

ಇತ್ತೀಚಿನ ಸುದ್ದಿ

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ವೈಭವದ ಲಕ್ಷದೀಪೋತ್ಸವ ಸಂಪನ್ನ: ದಾಖಲೆ ಸಂಖ್ಯೆಯಲ್ಲಿ ನೆರೆದ ಭಕ್ತ ಸಾಗರ

02/12/2024, 14:17

ಮಂಗಳೂರು(reporterkarnataka.com): ದಕ್ಷಿಣ ಭಾರತದ ಪವಿತ್ರ ಕ್ಷೇತ್ರಗಳಲ್ಲೊಂದಾದ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥ ಸ್ವಾಮಿ
ಲಕ್ಷದೀಪೋತ್ಸವ ಸಂಪನ್ನಗೊಂಡಿತು. ದಾಖಲೆ ಸಂಖ್ಯೆಯಲ್ಲಿ ಭಕ್ತರು ನೆರೆದಿದ್ದರು.

ಕಾರ್ತಿಕ ಮಾಸದ ಮಂಗಳ ಬಹುಳ ಏಕಾದಶಿಯಿಂದ ಅಮಾವಾಸ್ಯೆಯವರೆಗಿನ ಮಂಗಳಪರ್ವದಲ್ಲಿ ನ.26ರಿಂದ 30ರ ವರೆಗೆ ಸಂಭ್ರಮ- ಸಡಗರದಿಂದ ನಡೆಯಿತು.
ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರ ನೇತೃತ್ವದಲ್ಲಿ ಲಕ್ಷದೀಪೋತ್ಸವ ವೈಭವದಿಂದ ಜರುಗಿತು.
ನ.26ರಂದು ಮಂಗಳವಾರ 3 ಗಂಟೆಗೆ ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದಿಂದ 25 ಸಾವಿರಕ್ಕೂ ಹೆಚ್ಚು ಭಕ್ತರು ಪಾದಯಾತ್ರೆಯಲ್ಲಿ ಶಿವಪಂಚಾಕ್ಷರಿ ಪಠಣ ಮಾಡುತ್ತಾ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿದರು. ನಂತರ ಮಂಜುನಾಥ ಸ್ವಾಮಿಗೆ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಿಸಿದರು.
ಡಿ.1ರಂದು ಭಗವಾನ್ ಶ್ರೀ ಚಂದ್ರನಾಥ ಸ್ವಾಮಿಯ ಸಮವಸರಣ ಪೂಜೆ ನಡೆಯಿತು.
ದಿನಾ ಸಂಜೆ ಅಮೃತವರ್ಷಿಣಿ ಸಭಾಭವನದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.ಸರ್ವಧರ್ಮ ಸಮ್ಮೇಳನದ 92ನೇ ಅಧಿವೇಶನ ಸಂಪನ್ನಗೊಂಡಿತು.

ಇತ್ತೀಚಿನ ಸುದ್ದಿ

ಜಾಹೀರಾತು