7:39 PM Thursday2 - April 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ…

ಇತ್ತೀಚಿನ ಸುದ್ದಿ

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ವೈಭವದ ಲಕ್ಷದೀಪೋತ್ಸವ ಸಂಪನ್ನ: ದಾಖಲೆ ಸಂಖ್ಯೆಯಲ್ಲಿ ನೆರೆದ ಭಕ್ತ ಸಾಗರ

02/12/2024, 14:17

ಮಂಗಳೂರು(reporterkarnataka.com): ದಕ್ಷಿಣ ಭಾರತದ ಪವಿತ್ರ ಕ್ಷೇತ್ರಗಳಲ್ಲೊಂದಾದ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥ ಸ್ವಾಮಿ
ಲಕ್ಷದೀಪೋತ್ಸವ ಸಂಪನ್ನಗೊಂಡಿತು. ದಾಖಲೆ ಸಂಖ್ಯೆಯಲ್ಲಿ ಭಕ್ತರು ನೆರೆದಿದ್ದರು.

ಕಾರ್ತಿಕ ಮಾಸದ ಮಂಗಳ ಬಹುಳ ಏಕಾದಶಿಯಿಂದ ಅಮಾವಾಸ್ಯೆಯವರೆಗಿನ ಮಂಗಳಪರ್ವದಲ್ಲಿ ನ.26ರಿಂದ 30ರ ವರೆಗೆ ಸಂಭ್ರಮ- ಸಡಗರದಿಂದ ನಡೆಯಿತು.
ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರ ನೇತೃತ್ವದಲ್ಲಿ ಲಕ್ಷದೀಪೋತ್ಸವ ವೈಭವದಿಂದ ಜರುಗಿತು.
ನ.26ರಂದು ಮಂಗಳವಾರ 3 ಗಂಟೆಗೆ ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದಿಂದ 25 ಸಾವಿರಕ್ಕೂ ಹೆಚ್ಚು ಭಕ್ತರು ಪಾದಯಾತ್ರೆಯಲ್ಲಿ ಶಿವಪಂಚಾಕ್ಷರಿ ಪಠಣ ಮಾಡುತ್ತಾ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿದರು. ನಂತರ ಮಂಜುನಾಥ ಸ್ವಾಮಿಗೆ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಿಸಿದರು.
ಡಿ.1ರಂದು ಭಗವಾನ್ ಶ್ರೀ ಚಂದ್ರನಾಥ ಸ್ವಾಮಿಯ ಸಮವಸರಣ ಪೂಜೆ ನಡೆಯಿತು.
ದಿನಾ ಸಂಜೆ ಅಮೃತವರ್ಷಿಣಿ ಸಭಾಭವನದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.ಸರ್ವಧರ್ಮ ಸಮ್ಮೇಳನದ 92ನೇ ಅಧಿವೇಶನ ಸಂಪನ್ನಗೊಂಡಿತು.

ಇತ್ತೀಚಿನ ಸುದ್ದಿ

ಜಾಹೀರಾತು