3:17 AM Saturday22 - November 2025
ಬ್ರೇಕಿಂಗ್ ನ್ಯೂಸ್
Chikkamagaluru | ಎನ್.ಆರ್.ಪುರ: ರಾಜ್ಯ ಹೆದ್ದಾರಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ; ಜನರಲ್ಲಿ ಮತ್ತೆ… ಸಿದ್ದರಾಮಯ್ಯರ ಹಣಕಾಸು ಮಂತ್ರಿ ಮಾಡಿದ್ದೇ ನಾನು: ಸಿಎಂ ವಿರುದ್ದ ಮಾಜಿ ಪಿಎಂ ದೇವೇಗೌಡ… ಮೆಕ್ಕೆಜೋಳ ಖರೀದಿ-ಆಮದು ಬಗ್ಗೆ ಹಸಿ ಹಸಿ ಸುಳ್ಳು ಹೇಳುತ್ತಿದ್ದಾರೆ ಸಿಎಂ: ಕೇಂದ್ರ ಸಚಿವ… ರಾಜ್ಯಕ್ಕೆ ಯಾರು ಮುಖ್ಯಮಂತ್ರಿ ಎಂದು ಕಾಂಗ್ರೆಸ್‌ ಹೈಕಮಾಂಡ್‌ ಸ್ಪಷ್ಟವಾಗಿ ತಿಳಿಸಲಿ: ಪ್ರತಿಪಕ್ಷ ನಾಯಕ… ಕೇರಳದಿಂದ ಮಡಿಕೇರಿಗೆ ಅಕ್ರಮ ಕೆಂಪು ಕಲ್ಲು ಸಾಗಾಟ: ಸುಳ್ಯ ಪೊಲೀಸರಿಂದ ಲಾರಿ ವಶ ಡಿಕೆಶಿ ಮುಖ್ಯಮಂತ್ರಿ ಆಗಲಿ ಎಂದು 91 ಕೆಜಿ ಎಳ್ಳಿನ ತುಲಾಭಾರ: ಪಾವಗಡದಲ್ಲಿ ಅಭಿಮಾನಿಗಳ… ಮೀನುಗಾರಿಕಾ ವಿಶ್ವ ವಿದ್ಯಾಲಯ ಸ್ಥಾಪಿಸಲು ಸರಕಾರ ಸಿದ್ಧವಿದೆ: ಸಿಎಂ ಸಿದ್ದರಾಮಯ್ಯ ಘೋಷಣೆ ಮಂಡ್ಯ ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಸಚಿನ್ ಚಲುವರಾಯಸ್ವಾಮಿ ಆಯ್ಕೆ ಅರಣ್ಯ ಪ್ರದೇಶದಿಂದ ಅಕ್ರಮವಾಗಿ ಮಣ್ಣು ಸಾಗಾಟ: ಸ್ಥಳೀಯರ ತೀವ್ರ ಆಕ್ಷೇಪ; ಮೌನ ವಹಿಸಿದ… ದ್ವಿಚಕ್ರ ವಾಹನದಲ್ಲಿ ಮಕ್ಕಳಿಗೂ ಹೆಲ್ಮೆಟ್‌ ಕಡ್ಡಾಯ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ಆದೇಶ

ಇತ್ತೀಚಿನ ಸುದ್ದಿ

ರಿಲ್ಯಾಕ್ಸ್​ ಮೂಡ್​​ನಲ್ಲಿ ದಸರಾ ಗಜಪಡೆ: ಕ್ಯಾಪ್ಟನ್ ಅಭಿಮನ್ಯು ನೇತೃತ್ವದ 9 ಆನೆಗಳ ತಂಡ ಆಗಸ್ಟ್ 9ಕ್ಕೆ ಮೈಸೂರು ಅರಮನೆ ಎಂಟ್ರಿ

05/08/2025, 20:09

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ವಿಶ್ವವಿಖ್ಯಾತ ದಸರಾ ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳಲು ಮೈಸೂರಿಗೆ ಆಗಮಿಸಿರುವ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ 9 ಆನೆಗಳು ಸೋಮವಾರ ಸಂಜೆ ಅರಣ್ಯ ಭವನದ ಆವರಣದಲ್ಲಿ ವಾಸ್ತವ್ಯ ಹೂಡಿವೆ.
*ರಿಲ್ಯಾಕ್ಸ್​ ಮೂಡ್​​ನಲ್ಲಿ ಗಜಪಡೆ:* ಕಾಡಿನಿಂದ ನಾಡಿಗೆ ಆಗಮಿಸಿರುವ ಗಜಪಡೆ ಸದ್ಯ ರಿಲ್ಯಾಕ್ಸ್ ಮೂಡ್​ನಲ್ಲಿದ್ದು, ದಸರಾ ಆನೆಗಳನ್ನು ನೋಡಲು ಜನರು ತಂಡೋಪ ತಂಡವಾಗಿ ಆಗಮಿಸುತ್ತಿದ್ದಾರೆ. ಇನ್ನು ಆಗಸ್ಟ್​ 10ರ ಸಂಜೆ ಗಜಪಡೆ ಅರಮನೆ ಪ್ರವೇಶ ಮಾಡುವ ಸಾಧ್ಯತೆ ಇದೆ ಎಂದು ಡಿಸಿಎಫ್ ಡಾ.ಪ್ರಭುಗೌಡ ಮಾಹಿತಿ ನೀಡಿದ್ದಾರೆ.
*ಮೊದಲ ಬಾರಿಗೆ ಸಂಜೆ ವೇಳೆ ಗಜಪಡೆಗೆ ಅರಮನೆಗೆ ಸ್ವಾಗತ:* ಸೋಮವಾರ ನಾಗರಹೊಳೆ ಸಮೀಪದ ವೀರನಹೊಸಹಳ್ಳಿಯಿಂದ ಗಜಯಪಣದ ಮೂಲಕ ಅಭಿಮನ್ಯು ನೇತೃತ್ವದ ಒಂಬತ್ತು ಆನೆಗಳ ಮೂದಲ ತಂಡ ಮೈಸೂರಿಗೆ ಆಗಮಿಸಿದ್ದು, ಅಶೋಕಪುರಂನಲ್ಲಿರುವ ಅರಣ್ಯ ಭವನದಲ್ಲಿ ತಂಗಿವೆ. ಈ ಆನೆಗಳಿಗೆ ದಸರಾದಲ್ಲಿ ಭಾಗವಹಿಸಿರುವ ಅನುಭವ ಇರುವ ಕಾರಣ ಇಲ್ಲಿನ ವಾತಾವರಣಕ್ಕೆ ಹೊಂದಿಕೊಂಡಿವೆ.
ಮೊದಲ ಬಾರಿಗೆ ಸಂಜೆ ವೇಳೆ ಅರಮನೆಗೆ ಸ್ವಾಗತ: ಆಗಸ್ಟ್​ 10ರಂದು ಸಂಜೆ 6:40 ರಿಂದ 7:20ರ ಶುಭ ಮಕರ ಗೋಧೋಳಿ ಲಗ್ನದಲ್ಲಿ ಜಯ ಮಾರ್ತಾಂಡ ದ್ವಾರದ ಮೂಲಕ ಗಜಪಡೆಯನ್ನು ಅರಮನೆಗೆ ಸಂಪ್ರದಾಯಿಕವಾಗಿ ಸ್ವಾಗತಿಸಲಾಗುತ್ತದೆ. ಇದೇ ಮೂದಲ ಬಾರಿಗೆ ಸಂಜೆ ವೇಳೆ ಗಜಪಡೆಯನ್ನು ಅರಮನೆಗೆ ಸ್ವಾಗತ ಮಾಡುತ್ತಿರುವುದು ವಿಶೇಷ ಎನ್ನಲಾಗಿದೆ.
*ಗಜಪಡೆಗೆ ಸ್ನಾನ ಮಾಡಿಸಿದ ಮಾವುತರು, ಕಾವಾಡಿಗರು:* ಅರಣ್ಯ ಭವನದ ಆವರಣದಲ್ಲಿ ವಾಸ್ತವ್ಯ ಹೂಡಿರುವ ಗಜಪಡೆಗೆ ಮಾವುತರು ಹಾಗೂ ಕಾವಾಡಿಗರು ಸ್ನಾನ ಮಾಡಿಸಿದರು. ಆನೆಗಳಿಗೆ ಭತ್ತ, ಹಸಿ ಹುಲ್ಲನ್ನು ಮೇವಾಗಿ ನೀಡಲಾಗುತ್ತಿದೆ. ಸದ್ಯ ಗಜಪಡೆ ಹಾಗೂ ಮಾವುತರು, ಕಾವಾಡಿಗರು ಮತ್ತವರ ಕುಟುಂಬಸ್ಥರು ರಿಲ್ಯಾಕ್ಸ್​ ಮೂಡ್​ನಲ್ಲಿದ್ದಾರೆ.
*ದೂರದಿಂದಲೇ ಗಜಪಡೆ ನೋಡಲು ಜನರಿಗೆ ಅವಕಾಶ:* “ಕಾಡಿನಿಂದ ನಾಡಿಗೆ ಆಗಮಿಸಿದ ಗಜಪಡೆಗೆ ಆರೋಗ್ಯ‌ ತಪಾಸಣೆ ಮಾಡಲಾಗಿದ್ದು, ಅವುಗಳ ರಕ್ತ ಪರೀಕ್ಷೆಯನ್ನು ಸಹ ಮಾಡಲಾಗಿದೆ. ಎಲ್ಲ ಆನೆಗಳು ಈ ಹಿಂದೆ ದಸರಾದಲ್ಲಿ ಭಾಗವಹಿಸಿರುವ ಕಾರಣ ಇಲ್ಲಿನ ವಾತಾವರಣಕ್ಕೆ ಹೊಂದಿಕೊಂಡಿದ್ದು, ದೂರದಿಂದಲೇ ಗಜಪಡೆಯನ್ನ ನೋಡಲು ಜನರಿಗೆ ಅವಕಾಶ ಮಾಡಿಕೊಡಲಾಗಿದೆ.
ಗಜಪಡೆಗೆ ಈ ಎಲ್ಲ ಆಹಾರ ನೀಡಲಾಗುತ್ತೆ: ಗಜಪಡೆಗೆ ಭತ್ತ, ಹುಲ್ಲು ಸೇರಿದಂತೆ ಸಾಮಾನ್ಯ ಆಹಾರವನ್ನ ನೀಡಲಾಗುತ್ತಿದೆ. ಆ.10 ರಂದು ಗಜಪಡೆ ಅರಮನೆ ಪ್ರವೇಶ ಮಾಡುವ ಸಾಧ್ಯತೆ ಇದೆ. ನಂತರ ತಾಲೀಮು ಆರಂಭಿಸಲಾಗುವುದು” ಎಂದು ಮೈಸೂರಿನ ವನ್ಯಜೀವಿ ವಿಭಾಗದ ಡಿಸಿಎಫ್ ಪ್ರಭುಗೌಡ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು