5:54 AM Thursday5 - February 2026
ಬ್ರೇಕಿಂಗ್ ನ್ಯೂಸ್
ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,… ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್… ಯಾವ ಹೈಸ್ಪೀಡ್ ರೈಲೂ ಬರಲ್ಲ: ಕೇಂದ್ರ ಬಜೆಟ್ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್… ಏಪ್ರಿಲ್ 1ರಿಂದ ಹೊಸ ತೆರಿಗೆ ನೀತಿ ಜಾರಿ; ಶಿಕ್ಷಣ, ವೈದ್ಯಕೀಯ ಉದ್ದೇಶಗಳಿಗಾಗಿ ಟಿಸಿಎಸ್…

ಇತ್ತೀಚಿನ ಸುದ್ದಿ

ದಸರಾ: ಜನದಟ್ಟನೆ ತಡೆಯಲು ಮಂಗಳೂರು- ಬೆಂಗಳೂರು ಮಧ್ಯೆ ವಿಶೇಷ ರೈಲು ಓಡಾಟ

26/09/2025, 20:09

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ದಸರಾ ಹಿನ್ನೆಲೆಯಲ್ಲಿ ಪ್ರಯಾಣಿಕರ ಸುಗಮ ಸಂಚಾರಕ್ಕಾಗಿ ಬೆಂಗಳೂರಿನಿಂದ ಹೊಸಪೇಟೆ ಮತ್ತು ಮಂಗಳೂರಿಗೆ ಒಂದು ಟ್ರಿಪ್ ವಿಶೇಷ ರೈಲಿನ ವ್ಯವಸ್ಥೆ ಮಾಡಲಾಗಿದೆ.
ಯಶವಂತಪುರ ಮತ್ತು ಮಂಗಳೂರು ನಡುವೆ ವಿಶೇಷ ರೈಲು ಸಂಖ್ಯೆ 06257/ 06258 ಸೆ. 30ರಂದು ಯಶವಂತಪುರದಿಂದ ರಾತ್ರಿ 11.55ಕ್ಕೆ ಹೊರಡಲಿದ್ದು, ಮರುದಿನ ಬೆಳಗ್ಗೆ 11.15ಕ್ಕೆ ಮಂಗಳೂರು ಜಂಕ್ಷನ್ ತಲುಪಲಿದೆ. ಅ. 1ರಂದು 2.35ಕ್ಕೆ ಮಂಗಳೂರಿನಿಂದ ಹೊರಟು ರಾತ್ರಿ 11.30ಕ್ಕೆ ಯಶವಂತಪುರ ತಲುಪಲಿದೆ ಎಂದು ರೈಲ್ವೇ ಪ್ರಕಟನೆ ತಿಳಿಸಿದೆ. ಸೆ. .26ರಂದು ಮತ್ತು ಸೆ.28ರಂದು ಎಸ್‌ಎಂವಿಬಿಯಿಂದ ಸಂಜೆ 7 ಗಂಟೆಗೆ ಹೊರಡಲಿರುವ ರೈಲು ಮರುದಿನ ಬೆಳಗ್ಗೆ 4.15ಕ್ಕೆ ಹೊಸಪೇಟೆ ತಲುಪಲಿದೆ. ಹೊಸಪೇಟಿಯಿಂದ ಸೆ.27 ಮತ್ತು ಸೆ.29ರಂದು ರಾತ್ರಿ 8.45ಕ್ಕೆ ಹೊರಡಲಿರುವ ರೈಲು ಬೆಳಗ್ಗೆ 8.10ಕ್ಕೆ ಎಸ್‌ಎಂವಿಬಿ ತಲುಪಲಿದೆ.
22 ಗಂಟೆಗಳಲ್ಲಿ ಸ್ಲೀಪರ್ ಕೋಚ್ ಬುಕ್!
ಬೆಂಗಳೂರು – ಮಂಗಳೂರು ನಡುವಿನ ದಸರಾ ವಿಶೇಷ ರೈಲಿಗೆ ರೈಲು ಪ್ರಯಾಣಿಕರಿಂದ ಉತ್ತಮ ಸ್ಪಂದನೆ ದೊರಕಿದೆ. 22 ಗಂಟೆಗಳಲ್ಲಿ ಸ್ಲೀಪರ್ ಕೋಚ್‌ನ ಎಲ್ಲಾ ಸೀಟುಗಳು ಬುಕ್ ಆಗಿದೆ. ಹಬ್ಬದ ಸಮಯದಲ್ಲಿ ಬೆಂಗಳೂರು ಮತ್ತು ಮಂಗಳೂರು ವಿಶೇಷ ರೈಲಿನ ಅಗತ್ಯವಿರುವುದು ಸಾಬೀತಾಗಿದೆ ಎಂದು ರೈಲು ಬಳಕೆದಾರರು ಸಂತಸ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು