3:12 AM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ದಸರಾ: ಜನದಟ್ಟನೆ ತಡೆಯಲು ಮಂಗಳೂರು- ಬೆಂಗಳೂರು ಮಧ್ಯೆ ವಿಶೇಷ ರೈಲು ಓಡಾಟ

26/09/2025, 20:09

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ದಸರಾ ಹಿನ್ನೆಲೆಯಲ್ಲಿ ಪ್ರಯಾಣಿಕರ ಸುಗಮ ಸಂಚಾರಕ್ಕಾಗಿ ಬೆಂಗಳೂರಿನಿಂದ ಹೊಸಪೇಟೆ ಮತ್ತು ಮಂಗಳೂರಿಗೆ ಒಂದು ಟ್ರಿಪ್ ವಿಶೇಷ ರೈಲಿನ ವ್ಯವಸ್ಥೆ ಮಾಡಲಾಗಿದೆ.
ಯಶವಂತಪುರ ಮತ್ತು ಮಂಗಳೂರು ನಡುವೆ ವಿಶೇಷ ರೈಲು ಸಂಖ್ಯೆ 06257/ 06258 ಸೆ. 30ರಂದು ಯಶವಂತಪುರದಿಂದ ರಾತ್ರಿ 11.55ಕ್ಕೆ ಹೊರಡಲಿದ್ದು, ಮರುದಿನ ಬೆಳಗ್ಗೆ 11.15ಕ್ಕೆ ಮಂಗಳೂರು ಜಂಕ್ಷನ್ ತಲುಪಲಿದೆ. ಅ. 1ರಂದು 2.35ಕ್ಕೆ ಮಂಗಳೂರಿನಿಂದ ಹೊರಟು ರಾತ್ರಿ 11.30ಕ್ಕೆ ಯಶವಂತಪುರ ತಲುಪಲಿದೆ ಎಂದು ರೈಲ್ವೇ ಪ್ರಕಟನೆ ತಿಳಿಸಿದೆ. ಸೆ. .26ರಂದು ಮತ್ತು ಸೆ.28ರಂದು ಎಸ್‌ಎಂವಿಬಿಯಿಂದ ಸಂಜೆ 7 ಗಂಟೆಗೆ ಹೊರಡಲಿರುವ ರೈಲು ಮರುದಿನ ಬೆಳಗ್ಗೆ 4.15ಕ್ಕೆ ಹೊಸಪೇಟೆ ತಲುಪಲಿದೆ. ಹೊಸಪೇಟಿಯಿಂದ ಸೆ.27 ಮತ್ತು ಸೆ.29ರಂದು ರಾತ್ರಿ 8.45ಕ್ಕೆ ಹೊರಡಲಿರುವ ರೈಲು ಬೆಳಗ್ಗೆ 8.10ಕ್ಕೆ ಎಸ್‌ಎಂವಿಬಿ ತಲುಪಲಿದೆ.
22 ಗಂಟೆಗಳಲ್ಲಿ ಸ್ಲೀಪರ್ ಕೋಚ್ ಬುಕ್!
ಬೆಂಗಳೂರು – ಮಂಗಳೂರು ನಡುವಿನ ದಸರಾ ವಿಶೇಷ ರೈಲಿಗೆ ರೈಲು ಪ್ರಯಾಣಿಕರಿಂದ ಉತ್ತಮ ಸ್ಪಂದನೆ ದೊರಕಿದೆ. 22 ಗಂಟೆಗಳಲ್ಲಿ ಸ್ಲೀಪರ್ ಕೋಚ್‌ನ ಎಲ್ಲಾ ಸೀಟುಗಳು ಬುಕ್ ಆಗಿದೆ. ಹಬ್ಬದ ಸಮಯದಲ್ಲಿ ಬೆಂಗಳೂರು ಮತ್ತು ಮಂಗಳೂರು ವಿಶೇಷ ರೈಲಿನ ಅಗತ್ಯವಿರುವುದು ಸಾಬೀತಾಗಿದೆ ಎಂದು ರೈಲು ಬಳಕೆದಾರರು ಸಂತಸ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು