7:52 AM Saturday7 - February 2026
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,…

ಇತ್ತೀಚಿನ ಸುದ್ದಿ

ದಶಕಗಳ ಬೇಡಿಕೆಗೆ ಕೊನೆಗೂ ಅಸ್ತು: ಮಂಗಳೂರು- ಕಾರ್ಕಳ ನಡುವೆ ಕೆಎಸ್ಸಾರ್ಟಿಸಿ ಬಸ್ ಸೇವೆ ಆರಂಭ

12/12/2024, 18:40

ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ನಾಗರಿಕರ ದಶಕಗಳ ಬೇಡಿಕೆ ಕೊನೆಗೂ ಈಡೇರಿದೆ. ಮಂಗಳೂರು- ಕಾರ್ಕಳ ಮಧ್ಯೆ ಮೂಡುಬಿದರೆ ಮಾರ್ಗವಾಗಿ ಕೆಎಸ್ಸಾರ್ಟಿಸಿ ಬಸ್ ಸೇವೆ ಆರಂಭಗೊಂಡಿದೆ.
ಮಂಗಳೂರು-ಕಾರ್ಕಳ ನಡುವೆ ಸದ್ಯ ನಾಲ್ಕು ಬಸ್‌ಗಳು ಮಾತ್ರ ಸಂಚರಿಸಲಿವೆ. ಪ್ರತಿದಿನ ಮಂಗಳೂರು ಕಡೆಯಿಂದ ಎರಡು ಬಸ್‌ಗಳು ಮತ್ತು ಕಾರ್ಕಳ ಕಡೆಯಿಂದ ಎರಡು ಬಸ್‌ಗಳು ಸೇವೆ ನೀಡಲಿವೆ. ಒಂದು ಬಸ್‌ ದಿನಕ್ಕೆ 7 ಟ್ರಿಪ್‌ನಂತೆ ನಾಲ್ಕು ಬಸ್‌ಗಳು ಒಟ್ಟು 28 ಟ್ರಿಪ್‌ ಈ ಮಾರ್ಗದಲ್ಲಿ ನಡೆಸಲಿವೆ. ಮಂಗಳೂರಿನ ಬಿಜೈನಲ್ಲಿರುವ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಿಂದ ಯಾನ ಆರಂಭಿಸಲಿದೆ. ಕಾರ್ಕಳ ಕಡೆಯಿಂದ ಬರುವ ಬಸ್ ಕೂಡ ಬಿಜೈ ಬಸ್ ನಿಲ್ದಾಣಕ್ಕೆ ಬರಲಿದೆ.


ಮಂಗಳೂರು- ಕಾರ್ಕಳ ನಡುವೆ ಕೆಎಸ್ಸಾರ್ಟಿಸಿ ಬಸ್ ಪ್ರಯಾಣ ಈ ಭಾಗದ ಜನರ ಹಲವು ದಶಕಗಳ ಬೇಡಿಕೆಯಾಗಿದೆ. ಆದರೆ ಕರಾವಳಿ ಜಿಲ್ಲೆಗಳ ಖಾಸಗಿ ಬಸ್ ನವರ ಲಾಬಿ ಮತ್ತು ಇಲ್ಲಿನ ಕೆಲವು ರಾಜಕಾರಣಿಗಳೇ ಬಸ್ ಮಾಲೀಕರಾಗಿರುವ ಹಿನ್ನೆಲೆಯಲ್ಲಿ ಜನರ ಬೇಡಿಕೆಗೆ ರಾಜ್ಯ ಸರಕಾರ ಇದುವರೆಗೆ ಸ್ಪಂದಿಸಿರಲಿಲ್ಲ. ಇದೀಗ
ಖಾಸಗಿ ಬಸ್‌ ಮಾಲೀಕರ ಭಾರಿ ಲಾಬಿಯ ಮಧ್ಯೆಯೂ ರಾಜ್ಯ ಕಾಂಗ್ರೆಸ್ ಸರಕಾರ ತಾತ್ಕಾಲಿಕ 2 ಪರ್ಮಿಟ್‌ನಡಿ 4 ಬಸ್‌ಗಳ ಓಡಾಟ ಡಿ.11ರಿಂದ ಆರಂಭಿಸಿದೆ. ಇದರಿಂದ ರಾಜ್ಯ ಸರಕಾರದ ಮಹಿಳೆಯರಿಗೆ ಉಚಿತ ಬಸ್ ಸೇವೆಯಾದ ಶಕ್ತಿ ಯೋಜನೆಯ ಪ್ರಯೋಜನವನ್ನು ಮಂಗಳೂರು, ಕೈಕಂಬ, ಎಡಪದವು, ಮೂಡುಬಿದಿರೆ, ಬೆಳುವಾಯಿ ಪ್ರದೇಶದ ಮಹಿಳೆಯರೂ ಪಡೆಯುವಂತಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು