2:02 PM Friday15 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ದಶಕಗಳ ಬೇಡಿಕೆಗೆ ಕೊನೆಗೂ ಅಸ್ತು: ಮಂಗಳೂರು- ಕಾರ್ಕಳ ನಡುವೆ ಕೆಎಸ್ಸಾರ್ಟಿಸಿ ಬಸ್ ಸೇವೆ ಆರಂಭ

12/12/2024, 18:40

ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ನಾಗರಿಕರ ದಶಕಗಳ ಬೇಡಿಕೆ ಕೊನೆಗೂ ಈಡೇರಿದೆ. ಮಂಗಳೂರು- ಕಾರ್ಕಳ ಮಧ್ಯೆ ಮೂಡುಬಿದರೆ ಮಾರ್ಗವಾಗಿ ಕೆಎಸ್ಸಾರ್ಟಿಸಿ ಬಸ್ ಸೇವೆ ಆರಂಭಗೊಂಡಿದೆ.
ಮಂಗಳೂರು-ಕಾರ್ಕಳ ನಡುವೆ ಸದ್ಯ ನಾಲ್ಕು ಬಸ್‌ಗಳು ಮಾತ್ರ ಸಂಚರಿಸಲಿವೆ. ಪ್ರತಿದಿನ ಮಂಗಳೂರು ಕಡೆಯಿಂದ ಎರಡು ಬಸ್‌ಗಳು ಮತ್ತು ಕಾರ್ಕಳ ಕಡೆಯಿಂದ ಎರಡು ಬಸ್‌ಗಳು ಸೇವೆ ನೀಡಲಿವೆ. ಒಂದು ಬಸ್‌ ದಿನಕ್ಕೆ 7 ಟ್ರಿಪ್‌ನಂತೆ ನಾಲ್ಕು ಬಸ್‌ಗಳು ಒಟ್ಟು 28 ಟ್ರಿಪ್‌ ಈ ಮಾರ್ಗದಲ್ಲಿ ನಡೆಸಲಿವೆ. ಮಂಗಳೂರಿನ ಬಿಜೈನಲ್ಲಿರುವ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಿಂದ ಯಾನ ಆರಂಭಿಸಲಿದೆ. ಕಾರ್ಕಳ ಕಡೆಯಿಂದ ಬರುವ ಬಸ್ ಕೂಡ ಬಿಜೈ ಬಸ್ ನಿಲ್ದಾಣಕ್ಕೆ ಬರಲಿದೆ.


ಮಂಗಳೂರು- ಕಾರ್ಕಳ ನಡುವೆ ಕೆಎಸ್ಸಾರ್ಟಿಸಿ ಬಸ್ ಪ್ರಯಾಣ ಈ ಭಾಗದ ಜನರ ಹಲವು ದಶಕಗಳ ಬೇಡಿಕೆಯಾಗಿದೆ. ಆದರೆ ಕರಾವಳಿ ಜಿಲ್ಲೆಗಳ ಖಾಸಗಿ ಬಸ್ ನವರ ಲಾಬಿ ಮತ್ತು ಇಲ್ಲಿನ ಕೆಲವು ರಾಜಕಾರಣಿಗಳೇ ಬಸ್ ಮಾಲೀಕರಾಗಿರುವ ಹಿನ್ನೆಲೆಯಲ್ಲಿ ಜನರ ಬೇಡಿಕೆಗೆ ರಾಜ್ಯ ಸರಕಾರ ಇದುವರೆಗೆ ಸ್ಪಂದಿಸಿರಲಿಲ್ಲ. ಇದೀಗ
ಖಾಸಗಿ ಬಸ್‌ ಮಾಲೀಕರ ಭಾರಿ ಲಾಬಿಯ ಮಧ್ಯೆಯೂ ರಾಜ್ಯ ಕಾಂಗ್ರೆಸ್ ಸರಕಾರ ತಾತ್ಕಾಲಿಕ 2 ಪರ್ಮಿಟ್‌ನಡಿ 4 ಬಸ್‌ಗಳ ಓಡಾಟ ಡಿ.11ರಿಂದ ಆರಂಭಿಸಿದೆ. ಇದರಿಂದ ರಾಜ್ಯ ಸರಕಾರದ ಮಹಿಳೆಯರಿಗೆ ಉಚಿತ ಬಸ್ ಸೇವೆಯಾದ ಶಕ್ತಿ ಯೋಜನೆಯ ಪ್ರಯೋಜನವನ್ನು ಮಂಗಳೂರು, ಕೈಕಂಬ, ಎಡಪದವು, ಮೂಡುಬಿದಿರೆ, ಬೆಳುವಾಯಿ ಪ್ರದೇಶದ ಮಹಿಳೆಯರೂ ಪಡೆಯುವಂತಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು