10:48 AM Tuesday30 - December 2025
ಬ್ರೇಕಿಂಗ್ ನ್ಯೂಸ್
ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Bangalore | ಹೊಸ ವರ್ಷಾಚರಣೆ: ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ತಾಕೀತು ಕನ್ನಡ ಭಾಷೆ, ನೆಲ, ಜಲ, ಗಡಿ, ಕನ್ನಡಿಗರಿಗೆ ಉದ್ಯೋಗ ವಿಚಾರದಲ್ಲಿ ರಾಜಿ ಇಲ್ಲ:… ಮೈಸೂರು ಅರಮನೆ ಬಳಿ ಸ್ಫೋಟ: ಸಾವಿನ ಸಂಖ್ಯೆ 3ಕ್ಕೆ ಏರಿಕೆ; ಹೆಚ್ಚಿದ ಆತಂಕ ಮಂಗಳೂರು ಡೇಟಾ ಸೆಂಟರ್ ಭಾರತದ ಅತ್ಯಂತ ವೆಚ್ಚ-ದಕ್ಷ ಕೇಂದ್ರ: ಫೀಸಿಬಿಲಿಟಿ ವರದಿ ಹೊಸ ವರ್ಷಾಚರಣೆ: ರೆಸಾರ್ಟ್, ಹೋಟೆಲ್, ಹೋಂ ಸ್ಟೇ ಮಾಲೀಕರಿಗೆ ಕಟ್ಟುನಿಟ್ಟಿನ ಸೂಚನೆ ಕೊಡಗಿನಲ್ಲಿ ಅರಣ್ಯ ರಕ್ಷಕರಿಂದಲೇ ಮರಗಳ ಲೂಟಿ: ಲೋಡರ್ ಬಂಧನ; ನಾಲ್ವರು ಪರಾರಿ ಖಾಸಗಿ ವಾಹನಕ್ಕೆ ನಾಮಫಲಕ | ಪೊಲೀಸಪ್ಪನಿಂದೇ ಕಾನೂನು ಉಲ್ಲಂಘನೆ: ದಂಡ ಯಾವತ್ತೇ ವಿಧಾನಸಭೆ ಚುನಾವಣೆ ನಡೆದರೂ ಬಿಜೆಪಿಗೆ ಬಹುಮತ: ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ವಿಶ್ವಾಸ

ಇತ್ತೀಚಿನ ಸುದ್ದಿ

ದತ್ತಪೀಠದಲ್ಲಿ ಮುಜಾವರ್ V/S ಹಿಂದೂ ಅರ್ಚಕರ ನೇಮಕ ವಿವಾದ: ನಾಳೆ ಉಪ ಸಮಿತಿ ಭೇಟಿ

06/02/2022, 10:10

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com

ದತ್ತಪೀಠದಲ್ಲಿ ಮುಜಾವರ್ V/S ಹಿಂದೂ ಅರ್ಚಕರ ನೇಮಕ ವಿವಾದಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರು ಜಿಲ್ಲೆಗೆ ಸಚಿವ ಸಂಪುಟದ ಉಪಸಮಿತಿ ಭೇಟಿ ನೀಡಲಿದೆ.

ಕಾನೂನು ಸಚಿವ ಮಾಧುಸ್ವಾಮಿ, ಮುಜರಾಯಿ ಸಚಿವೆ ಶಶಿಕಲಾ ಜೋಲ್ಲೆ,  ಸಚಿವ ಅಂಗಾರ ನೇತೃತ್ವದ ಉಪಸಮಿತಿಯನ್ನು ರಚಿಸಲಾಗಿದೆ.
ಸ್ಥಳೀಯರು ಮತ್ತು ಸಾರ್ವಜನಿಕರಿಂದ‌ ಲಿಖಿತ ಅಹವಾಲನ್ನು ಉಪ ಸಮಿತಿಯಿ ಸ್ವೀಕರಿಸಲಿದೆ.
ಅರ್ಚಕರ ನೇಮಕ ಸಂಬಂಧ ಅಗತ್ಯ ಕ್ರಮ‌ ಕೈಗೊಳ್ಳಲು ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಫೆಬ್ರವರಿ 7 ರಂದು ಚಿಕ್ಕಮಗಳೂರಿಗೆ ಆಗಮಿಸಲಿರುವ ಉಪ ಸಮಿತಿ ಆಗಮಿಸಲಿದೆ. ವಿಶ್ರಾಂತ ಜಡ್ಜ್ ನಾಗಮೋಹನದಾಸ್ ಕಮಿಟಿಯನ್ನು ಹಿಂದಿನ ಕಾಂಗ್ರೆಸ್ ಸರ್ಕಾರ ನೇಮಕ ಮಾಡಿತ್ತು.

ಕಮಿಟಿ ಮುಜಾವರ್ ನೇಮಕ ಸಂಬಂಧಿಸಿದಂತೆ ವರದಿಯನ್ನು ಸರ್ಕಾರಕ್ಕೆ‌ ನೀಡಿತು. ಇದನ್ನ ಪ್ರಶ್ನಿಸಿ ಹಿಂದೂಪರ ಸಂಘಟನೆಗಳಿಂದ ಹೈಕೋರ್ಟ್ ಮೊರೆ ಹೋಗಿವೆ. ಈ ಹಿನ್ನೆಲೆಯಲ್ಲಿ ಎರಡು ಸಮುದಾಯದ ಅವಾಹಲು ಸ್ವೀಕರಿಸಲು ಹೈಕೋರ್ಟ್ ಆದೇಶ ನೀಡಿತ್ತು.

ಚಿಕ್ಕಮಗಳೂರು ತಾಲೂಕಿನ ವಿವಾದಿತ ಇನಾಂ ದತ್ತಾತ್ರೇಯ ಬಾಬಾಬುಡನ್ ಗಿರಿ ದರ್ಗಾ ಆಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು