8:55 AM Friday28 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ದಾವಣಗೆರೆ: ಇಂದು ಸಿದ್ದರಾಮೋತ್ಸವ; ಸಿದ್ದು ಬರ್ತ್‌ ಡೇಗೆ 8 ಲಕ್ಷ ಜನ ಆಗಮನ ನಿರೀಕ್ಷೆ

03/08/2022, 10:56

ದಾವಣಗೆರೆ(reporterkarnataka.com): ದಾವಣಗೆರೆಯ ಶಾಮನೂರು ಪ್ಯಾಲೇಸ್ ಮೈದಾನದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 75ನೇ ಹುಟ್ಟುಹಬ್ಬದ ಅದ್ದೂರಿ ಅಮೃತ ಮಹೋತ್ಸವ ಕಾರ್ಯಕ್ರಮ ಇಂದು ನಡೆಯಲಿದ್ದು, ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಉದ್ಘಾಟಿಸಲಿದ್ದಾರೆ.

ರಾಜ್ಯ ಕಾಂಗ್ರೆಸ್‌ನ ಎಲ್ಲ ನಾಯಕರು ಇದರಲ್ಲಿ ಭಾಗವಹಿಸಲಿದ್ದು, ಸುಮಾರು 6 ರಿಂದ 8 ಲಕ್ಷ ಜನರು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಅಮೃತ ಮಹೋತ್ಸವದ ಮೂಲಕ ಸಿದ್ದರಾಮಯ್ಯ ಸಿಎಂ ಅಭ್ಯರ್ಥಿ ಎಂದು ಅಧಿಕೃತವಾಗಿ ಬಿಂಬಿಸಿಕೊಳ್ಳುವ ಪ್ರಯತ್ನದಲ್ಲಿದ್ದಾರೆ ಎಂದು ಹೇಳಲಾಗುತ್ತಿದೆ.

ಏನೆಲ್ಲ ಸ್ಪೆಷಲ್‌:

* 08 ಲಕ್ಷ- ರಾಜ್ಯದ ವಿವಿಧ ಜಿಲ್ಲೆಗಳಿಂದ ಕಾರ್ಯಕ್ರಮಕ್ಕೆ ಆಗಮಿಸುವವರು.

*06 ಲಕ್ಷ: ಮೈಸೂರು ಪಾಕ್‌ ತಯಾರಿ.

* 04 ಲಕ್ಷ: ಆಸನಗಳ ವ್ಯವಸ್ಥೆ.

* 35000- ದಾವಣಗೆರೆಗೆ ಆಗಮಿಸಲಿರುವ ಅಂದಾಜು ವಾಹನಗಳು.

*8000- ಅಭಿಮಾನಿಗಳನ್ನು ಕರೆತರುವ ಬಸ್‌ಗಳ ಸಂಖ್ಯೆ.

* 400: ಕೌಂಟರ್‌ಗಳಲ್ಲಿ ಬಫೆ ಊಟಕ್ಕೆ ವ್ಯವಸ್ಥೆ.

* 2500- ಬಾಣಸಿಗರಿಂದ ಮೊಸರನ್ನು-ಪಲಾವ್‌ ತಯಾರಿ.

* 300- ವೇದಿಕೆ ಆವರಣದಲ್ಲಿರುವ ಸ್ವಯಂ ಸೇವಕರು.

ಇಷ್ಟೇ ಅಲ್ಲ, 5 ಲಕ್ಷ ಮಂದಿಗೆ ಪಲಾವ್, ಮೊಸರನ್ನ ಹಾಗೂ ಸಿಹಿ ತಿಂಡಿಯ ಭೋಜನ ವ್ಯವಸ್ಥೆ, 6 ಲಕ್ಷ ಮಂದಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದ್ದು, ಮಳೆ ಬಂದರೆ ಸಮಸ್ಯೆ ಆಗದಂತೆ ಪೆಂಡಾಲ್ ವ್ಯವಸ್ಥೆ ಕೂಡ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು