8:33 PM Monday22 - June 2026
ಬ್ರೇಕಿಂಗ್ ನ್ಯೂಸ್
ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ

ಇತ್ತೀಚಿನ ಸುದ್ದಿ

ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ

21/03/2026, 17:07

ದಾವಣಗೆರೆ(reporterkarnataka.com): ದಾವಣಗೆರೆ ದಕ್ಷಿಣ ಮತಕ್ಷೇತ್ರದ ಉಪಚುನಾವಣಾ ಕಣದಲ್ಲಿ ಕೈ-ಕಮಲ ನಡುವೆ ಜಿದ್ದಾಜಿದ್ದಿ ಏರ್ಪಟ್ಟಿದೆ. ಈಗಾಗಲೇ, ಕಾಂಗ್ರೆಸ್ ಹಾಗೂ ಬಿಜೆಪಿಯಿಂದ ಸ್ಪರ್ಧಾಳುಗಳು ಶುಕ್ರವಾರ ನಾಮಪತ್ರ ಸಲ್ಲಿಕೆ‌ ಮಾಡಿದ್ದು, ತಮ್ಮ ಆಸ್ತಿ ವಿವರ ಘೋಷಿಸಿದ್ದಾರೆ.
ಬಿ ಫಾರಂ ಸಿಗುವ ಮುನ್ನವೇ ನಾಮಪತ್ರ ಸಲ್ಲಿಸಿರುವ ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಗ ಸಮರ್ಥ್ ಶಾಮನೂರು ಅವರು ಚುನಾವಣಾಧಿಕಾರಿಗೆ ತಮ್ಮ ಆಸ್ತಿ ಬಗ್ಗೆ ಅಫಿಡವಿಟ್ ಸಲ್ಲಿಸಿದ್ದಾರೆ.

*ಸಮರ್ಥ್ ಶಾಮನೂರು ಆಸ್ತಿ ವಿವರ*
ಯುವ ಉದ್ಯಮಿಯಾಗಿರುವ ಸಮರ್ಥ್ ರಾಜಕೀಯಕ್ಕೆ ಪದಾರ್ಪಣೆ ಮಾಡುತ್ತಿರುವ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಅವರ ಪುತ್ರ ಸಮರ್ಥ್, ಯುವ ಉದ್ಯಮಿಯಾಗಿದ್ದು ಒಟ್ಟು 4.25 ಕೋಟಿ ರೂ.ಗೂ ಅಧಿಕ ಮೌಲ್ಯದ ಸ್ಥಿರ ಮತ್ತು ಚರ ಆಸ್ತಿ ಹೊಂದಿರುವುದಾಗಿ ಅಫಿಡವಿಟ್​ನಲ್ಲಿ ವಿವರ ನೀಡಿದ್ದಾರೆ. 2.17 ಕೋಟಿ ರೂ. ಮೌಲ್ಯದ ಚರ ಆಸ್ತಿ ಹಾಗೂ 2.08 ಕೋಟಿ ಮೌಲ್ಯದ ಕೃಷಿ ಭೂಮಿ ಸೇರಿದಂತೆ ಸ್ಥಿರ ಆಸ್ತಿಯಿದೆ ಎಂದು ಉಲ್ಲೇಖಿಸಿದ್ದಾರೆ.
ಸಮರ್ಥ್ ಶಾಮನೂರು ದಾವಣಗೆರೆ ತಾಲೂಕಿನ ಆನೆಕೊಂಡ ಹಾಗು ಬೇತೂರು ಗ್ರಾಮಗಳಲ್ಲಿ ಒಟ್ಟು 6 ಎಕರೆ 14 ಗುಂಟೆ ಕೃಷಿ ಭೂಮಿ ಹೊಂದಿದ್ದು, ಅವರ ಹೆಸರಿನಲ್ಲಿ 8.35 ಲಕ್ಷ ರೂ. ನಗದು ಹಣವಿದೆ. ಅಲ್ಲದೆ ವಿವಿಧ ಬ್ಯಾಂಕ್‌ ಖಾತೆಗಳಲ್ಲಿ ಹಣ ಹಾಗೂ 14.45 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳಿವೆ. ‌ಆಸ್ತಿಯ ಜೊತೆಗೆ ಸಮರ್ಥ್ ಅವರ ಹೆಸರಿನಲ್ಲಿ ಒಟ್ಟು 3.52 ಕೋಟಿ ರೂ. ಮೊತ್ತದ ಸಾಲ ಹಾಗೂ ಹೊಣೆಗಾರಿಕೆಗಳಿವೆ. 2024-25ನೇ ಸಾಲಿನ ಆದಾಯ ತೆರಿಗೆ ಮರುಪಾವತಿಯಲ್ಲಿ ಅವರು 96.05 ಲಕ್ಷ ರೂ. ವಾರ್ಷಿಕ ಆದಾಯವನ್ನು ತೋರಿಸಲಾಗಿದೆ. ಸಮರ್ಥ್ ಮೇಲೆ ಯಾವುದೇ ​ಕ್ರಿಮಿನಲ್ ಪ್ರಕರಣಗಳಿಲ್ಲ ಎಂದು ಅಫಿಡವಿಟ್‌ನಲ್ಲಿ ವಿವರಿಸಲಾಗಿದೆ.

*ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ಟಿ‌.ದಾಸಕರಿಯಪ್ಪ ಆಸ್ತಿ ವಿವರ*
ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ಟಿ.ದಾಸಕರಿಯಪ್ಪ ಅವರು ಶುಕ್ರವಾರ ದಾವಣಗೆರೆ ಪಾಲಿಕೆಗೆ ಆಗಮಿಸಿ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಕೆ ಮಾಡಿದ್ದು, 5.76 ಕೋಟಿ ರೂ.ಗೂ ಅಧಿಕ ಮೌಲ್ಯದ ಸ್ಥಿರ ಮತ್ತು ಚರಾಸ್ತಿಗಳನ್ನು ಹೊಂದಿರುವುದಾಗಿ ಘೋಷಿಸಿಕೊಂಡಿದ್ದಾರೆ.
ಶ್ರೀನಿವಾಸ್ ಹೆಸರಿನಲ್ಲಿ 34.79 ಲಕ್ಷ ರೂ. ಮೌಲ್ಯದ ಚರಾಸ್ತಿ ಹಾಗೂ 5.41 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿಗಳಿವೆ. ಸ್ಥಿರಾಸ್ತಿಯಲ್ಲಿ 1.13 ಕೋಟಿ ರೂ. ಬೆಲೆಬಾಳುವ ಪಿತ್ರಾರ್ಜಿತ ಕೃಷಿ ಭೂಮಿ ಹಾಗೂ 4.27 ಕೋಟಿ ರೂ. ಮೌಲ್ಯದ ಸ್ವಯಾರ್ಜಿತ ಆಸ್ತಿಗಳು ಸೇರಿವೆ. 3.60 ಲಕ್ಷ ರೂ. ನಗದು ಇರುವುದಾಗಿ ಅವರು ಅಫಿಡವಿಟ್​ನಲ್ಲಿ ತಿಳಿಸಿದ್ದಾರೆ.
45 ವರ್ಷದ ಶ್ರೀನಿವಾಸ್​ ಕೃಷಿ ಮತ್ತು ವ್ಯವಹಾರವನ್ನು ವೃತ್ತಿಯಾಗಿಸಿಕೊಂಡಿದ್ದಾರೆ. ತುಂಬಿಗೆರೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ 2.96 ಲಕ್ಷ ರೂ. ಸಾಲ ಬಾಕಿ ಇದೆ. ಇವರು 1999-2000ನೇ ಸಾಲಿನಲ್ಲಿ ನಗರದ ಎ.ಆರ್.ಎಂ.ವಿಜ್ಞಾನ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಪೂರ್ಣಗೊಳಿಸಿದ್ದಾರೆ. ತಮ್ಮ ವಿರುದ್ಧ ಯಾವುದೇ ಕ್ರಿಮಿನಲ್ ಪ್ರಕರಣಗಳಿಲ್ಲ ಎಂದು ಅಫಿಡವಿಟ್‌ನಲ್ಲಿ ಉಲ್ಲೇಖಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು