2:00 PM Saturday14 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ದಾವಣಗೆರೆ: ಭಾರೀ ಬ್ಯಾಂಕ್ ಕಳ್ಳತನ ಪ್ರಕರಣ: 6 ಮಂದಿ ಬಂಧನ; 15.30 ಕೋಟಿ ಮೌಲ್ಯದ 17 ಕೆಜಿ ಚಿನ್ನಾಭರಣ ವಶ

31/03/2025, 21:07

ದಾವಣಗೆರೆ(reporterkarnataka.com): ಇಲ್ಲಿನ ನ್ಯಾಮತಿ ಎಸ್‌ಬಿಐ ಬ್ಯಾಂಕಿನ ಶಾಖೆಯಲ್ಲಿ 17.2 ಕೆಜಿ ಚಿನ್ನಾಭರಣ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 6 ಮಂದಿ ಆರೋಪಿಗಳನ್ನು ಬಂಧಿಸಿ 15.30 ಕೋಟಿ ಮೌಲ್ಯದ 17 ಕೆಜಿ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.
ಬ್ಯಾಂಕ್ ಸಿಬ್ಬಂದಿಗಳು ಸುಮಾರು ಬೆಳಿಗ್ಗೆ 9 ಗಂಟೆಗೆ ಎಂದಿನಂತೆ
ಬ್ಯಾಂಕ್ ತೆರೆಯಲು ಬಂದಾಗ ಪ್ರಕರಣ ಬೆಳಕಿಗೆ ಬಂದಿತ್ತು.


ಘಟನಾ ಸ್ಥಳಕ್ಕೆ ಕೂಡಲೇ ಐಜಿಪಿ, ಎಸ್‌ಪಿ, ಎಎಸ್‌ಪಿ ಒಳಗೊಂಡಂತೆ ಎಲ್ಲಾ ಅಧಿಕಾರಿಗಳು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದರು. ಸ್ಥಳಕ್ಕೆ ಎಫ್‌ಎಸ್‌ಎಲ್ ವ್ಯಾನ್, ಸೋಕೊ ಅಧಿಕಾರಿ, ಡಾಗ್ ಸ್ಯ್ಕಾಡ್ ಮತ್ತು ಬೆರಳಚ್ಚು ತಜ್ಞರು ಕೂಡ ಆಗಮಿಸಿ ಪರಿಶೀಲನೆ ನಡೆಸಿದ್ದರು. ಬ್ಯಾಂಕ್‌ನ ಬಲಭಾಗದ ಕಬ್ಬಿಣದ ಕಿಟಿಕಿಯ ಗ್ರೀಲ್‌ನ್ನು ಕಟ್ ಮಾಡಿ ಕಳ್ಳರು ಒಳ ಪ್ರವೇಶಿಸಿದ್ದು ತದನಂತರ ಸಿಸಿ ಟಿವಿ, ಅಲರಾಮ್ ಮತ್ತು ಎಲ್ಲಾ ವೈರಗಳ ಕನೆಕ್ಷನ್ ತೆಗೆದು ನಂತರ ಸ್ಟ್ರಾಂಗ್ ರೂಂಗೆ ಇದ್ದಂತಹ ಗ್ರೀಲ್ ಡೋರನ ಬೀಗವನ್ನು ಮುರಿದು ಒಳಗೆ ಬಂದು ಅಲ್ಲಿ ಇದ್ದಂತಹ ನಾಲ್ಕು ಕರೆನ್ಸಿ ಚೆಸ್ಟ್ಗಳಲ್ಲಿ ಒಂದನ್ನು ಗ್ಯಾಸ್ ಕಟ್ಟರ್‌ನ ಸಹಾಯದಿಂದ ಕೊರೆದು ಲಾಕರ್ ಬಾಗಿಲು
ತೆಗೆದು ಅದರಲ್ಲಿ ಸಾರ್ವಜನಿಕರು ಅಡವಿಟ್ಟಿದ್ದ ಚಿನ್ನಾಭರಣಗಳ ಟ್ರೇನಲ್ಲಿ ಇದ್ದಂತಹ ಸುಮಾರು ೧೭.೭ ಕೆಜಿ ಆಭರಣಗಳನ್ನು ಕದ್ದುಕೊಂಡು ಸಾಕ್ಷಿ ನಾಶ ಮಾಡುವ ಸಲುವಾಗಿ ಸ್ಟ್ರಾಂಗ್ ರೂಂ, ಬ್ಯಾಂಕ್ ಮ್ಯಾನೇಜರ್ ರೂಮ್ ಹಾಗೂ ಕಟ್ ಮಾಡಿರುವ ಕಿಟಿಕಿಯವರೆಗೆ ಖಾರದ ಪುಡಿಯನ್ನು ಚೆಲ್ಲಿ ಪರಾರಿಯಾಗಿದ್ದರು.
ಪ್ರಕರಣದ ತನಿಖಾಧಿಕಾರಿಯನ್ನಾಗಿ ಚನ್ನಗಿರಿ ಉಪ ವಿಭಾಗದ
ಎಎಸ್‌ಪಿ ಶ್ಯಾಮ್ ವರ್ಗೀಸ್ ಅವರನ್ನು ನೇಮಿಸಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು