3:50 AM Sunday8 - June 2025
ಬ್ರೇಕಿಂಗ್ ನ್ಯೂಸ್
ಪೆಹಲ್ಗಾಮ್ ನಲ್ಲಿ 26 ಜನ ಸತ್ರು, ಕೇಂದ್ರದ ಫೆಯ್ಯ್ಲೂರು, ನಾವು ಪ್ರಧಾನಿ ರಾಜೀನಾಮೆ… ಸಾರ್ವಜನಿಕ ಆರೋಗ್ಯ ಸುರಕ್ಷತೆಗಾಗಿ ಬೀದಿಬದಿ, ಹೋಟೆಲ್ ಆಹಾರದ ಮೇಲೆ ಕಟ್ಟುನಿಟ್ಟಿನ ನಿಗಾ ಅಗತ್ಯ:… ಡಿಸಿಎಂ ಡಿಕೆಶಿ ರಾಜೀನಾಮೆಗೆ ಹೈಕಮಾಂಡ್‌ ಸೂಚಿಸಲಿ: ಮೈಸೂರಿನಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ… Bangalore | ಕಾಲ್ತುಳಿತ ಪ್ರಕರಣ: ಬೆಂಗಳೂರು ನಗರ ಪೊಲೀಸ್ ಕಮೀಷನರ್ ಸೇರಿದಂತೆ ಹಿರಿಯ… RCB | ದುರ್ಘಟನೆ ವಿಷಯದಲ್ಲಿ ರಾಜಕಾರಣ ಸಲ್ಲದು: ವಿಪಕ್ಷಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್… ಹೈಕೋರ್ಟ್‌ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಯಲಿ, ಜಿಲ್ಲಾಧಿಕಾರಿಯಿಂದ ತನಿಖೆ ಬೇಡ: ಪ್ರತಿಪಕ್ಷ ನಾಯಕ… Mysore | ರಾಜ್ಯದಲ್ಲಿ 100 ವಿದ್ಯುತ್ ಉಪ ಸ್ಥಾವರ ಸ್ಥಾಪನೆ: ಇಂಧನ ಸಚಿವ… Bangalore | ಕಾಲ್ತುಳಿತ ಪ್ರಕರಣ ಹಾಲಿ ನ್ಯಾಯಾಧೀಶರಿಂದ ತನಿಖೆಯಾಗಬೇಕು: ಮಾಜಿ ಸಿಎಂ ಬಸವರಾಜ… ಬೆಂಗಳೂರು ಸಂಭ್ರಮಾಚರಣೆಯಲ್ಲಿ ಕಾಲ್ತುಳಿತ ಪ್ರಕರಣ: ಆರ್‌ಸಿಬಿ ತಂಡ ಪರಿಹಾರ ಕೊಡಲು ಆಗ್ರಹ ಕಾಲ್ತುಳಿತ ದುರಂತದ ಸಂಪೂರ್ಣ ತನಿಖೆಯಾಗಬೇಕು: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಗ್ರಹ

ಇತ್ತೀಚಿನ ಸುದ್ದಿ

ದಾವಣಗೆರೆ: ಭಾರೀ ಬ್ಯಾಂಕ್ ಕಳ್ಳತನ ಪ್ರಕರಣ: 6 ಮಂದಿ ಬಂಧನ; 15.30 ಕೋಟಿ ಮೌಲ್ಯದ 17 ಕೆಜಿ ಚಿನ್ನಾಭರಣ ವಶ

31/03/2025, 21:07

ದಾವಣಗೆರೆ(reporterkarnataka.com): ಇಲ್ಲಿನ ನ್ಯಾಮತಿ ಎಸ್‌ಬಿಐ ಬ್ಯಾಂಕಿನ ಶಾಖೆಯಲ್ಲಿ 17.2 ಕೆಜಿ ಚಿನ್ನಾಭರಣ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 6 ಮಂದಿ ಆರೋಪಿಗಳನ್ನು ಬಂಧಿಸಿ 15.30 ಕೋಟಿ ಮೌಲ್ಯದ 17 ಕೆಜಿ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.
ಬ್ಯಾಂಕ್ ಸಿಬ್ಬಂದಿಗಳು ಸುಮಾರು ಬೆಳಿಗ್ಗೆ 9 ಗಂಟೆಗೆ ಎಂದಿನಂತೆ
ಬ್ಯಾಂಕ್ ತೆರೆಯಲು ಬಂದಾಗ ಪ್ರಕರಣ ಬೆಳಕಿಗೆ ಬಂದಿತ್ತು.


ಘಟನಾ ಸ್ಥಳಕ್ಕೆ ಕೂಡಲೇ ಐಜಿಪಿ, ಎಸ್‌ಪಿ, ಎಎಸ್‌ಪಿ ಒಳಗೊಂಡಂತೆ ಎಲ್ಲಾ ಅಧಿಕಾರಿಗಳು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದರು. ಸ್ಥಳಕ್ಕೆ ಎಫ್‌ಎಸ್‌ಎಲ್ ವ್ಯಾನ್, ಸೋಕೊ ಅಧಿಕಾರಿ, ಡಾಗ್ ಸ್ಯ್ಕಾಡ್ ಮತ್ತು ಬೆರಳಚ್ಚು ತಜ್ಞರು ಕೂಡ ಆಗಮಿಸಿ ಪರಿಶೀಲನೆ ನಡೆಸಿದ್ದರು. ಬ್ಯಾಂಕ್‌ನ ಬಲಭಾಗದ ಕಬ್ಬಿಣದ ಕಿಟಿಕಿಯ ಗ್ರೀಲ್‌ನ್ನು ಕಟ್ ಮಾಡಿ ಕಳ್ಳರು ಒಳ ಪ್ರವೇಶಿಸಿದ್ದು ತದನಂತರ ಸಿಸಿ ಟಿವಿ, ಅಲರಾಮ್ ಮತ್ತು ಎಲ್ಲಾ ವೈರಗಳ ಕನೆಕ್ಷನ್ ತೆಗೆದು ನಂತರ ಸ್ಟ್ರಾಂಗ್ ರೂಂಗೆ ಇದ್ದಂತಹ ಗ್ರೀಲ್ ಡೋರನ ಬೀಗವನ್ನು ಮುರಿದು ಒಳಗೆ ಬಂದು ಅಲ್ಲಿ ಇದ್ದಂತಹ ನಾಲ್ಕು ಕರೆನ್ಸಿ ಚೆಸ್ಟ್ಗಳಲ್ಲಿ ಒಂದನ್ನು ಗ್ಯಾಸ್ ಕಟ್ಟರ್‌ನ ಸಹಾಯದಿಂದ ಕೊರೆದು ಲಾಕರ್ ಬಾಗಿಲು
ತೆಗೆದು ಅದರಲ್ಲಿ ಸಾರ್ವಜನಿಕರು ಅಡವಿಟ್ಟಿದ್ದ ಚಿನ್ನಾಭರಣಗಳ ಟ್ರೇನಲ್ಲಿ ಇದ್ದಂತಹ ಸುಮಾರು ೧೭.೭ ಕೆಜಿ ಆಭರಣಗಳನ್ನು ಕದ್ದುಕೊಂಡು ಸಾಕ್ಷಿ ನಾಶ ಮಾಡುವ ಸಲುವಾಗಿ ಸ್ಟ್ರಾಂಗ್ ರೂಂ, ಬ್ಯಾಂಕ್ ಮ್ಯಾನೇಜರ್ ರೂಮ್ ಹಾಗೂ ಕಟ್ ಮಾಡಿರುವ ಕಿಟಿಕಿಯವರೆಗೆ ಖಾರದ ಪುಡಿಯನ್ನು ಚೆಲ್ಲಿ ಪರಾರಿಯಾಗಿದ್ದರು.
ಪ್ರಕರಣದ ತನಿಖಾಧಿಕಾರಿಯನ್ನಾಗಿ ಚನ್ನಗಿರಿ ಉಪ ವಿಭಾಗದ
ಎಎಸ್‌ಪಿ ಶ್ಯಾಮ್ ವರ್ಗೀಸ್ ಅವರನ್ನು ನೇಮಿಸಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು