8:35 AM Thursday18 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ದಾವಣಗೆರೆ: ಭಾರೀ ಬ್ಯಾಂಕ್ ಕಳ್ಳತನ ಪ್ರಕರಣ: 6 ಮಂದಿ ಬಂಧನ; 15.30 ಕೋಟಿ ಮೌಲ್ಯದ 17 ಕೆಜಿ ಚಿನ್ನಾಭರಣ ವಶ

31/03/2025, 21:07

ದಾವಣಗೆರೆ(reporterkarnataka.com): ಇಲ್ಲಿನ ನ್ಯಾಮತಿ ಎಸ್‌ಬಿಐ ಬ್ಯಾಂಕಿನ ಶಾಖೆಯಲ್ಲಿ 17.2 ಕೆಜಿ ಚಿನ್ನಾಭರಣ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 6 ಮಂದಿ ಆರೋಪಿಗಳನ್ನು ಬಂಧಿಸಿ 15.30 ಕೋಟಿ ಮೌಲ್ಯದ 17 ಕೆಜಿ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.
ಬ್ಯಾಂಕ್ ಸಿಬ್ಬಂದಿಗಳು ಸುಮಾರು ಬೆಳಿಗ್ಗೆ 9 ಗಂಟೆಗೆ ಎಂದಿನಂತೆ
ಬ್ಯಾಂಕ್ ತೆರೆಯಲು ಬಂದಾಗ ಪ್ರಕರಣ ಬೆಳಕಿಗೆ ಬಂದಿತ್ತು.


ಘಟನಾ ಸ್ಥಳಕ್ಕೆ ಕೂಡಲೇ ಐಜಿಪಿ, ಎಸ್‌ಪಿ, ಎಎಸ್‌ಪಿ ಒಳಗೊಂಡಂತೆ ಎಲ್ಲಾ ಅಧಿಕಾರಿಗಳು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದರು. ಸ್ಥಳಕ್ಕೆ ಎಫ್‌ಎಸ್‌ಎಲ್ ವ್ಯಾನ್, ಸೋಕೊ ಅಧಿಕಾರಿ, ಡಾಗ್ ಸ್ಯ್ಕಾಡ್ ಮತ್ತು ಬೆರಳಚ್ಚು ತಜ್ಞರು ಕೂಡ ಆಗಮಿಸಿ ಪರಿಶೀಲನೆ ನಡೆಸಿದ್ದರು. ಬ್ಯಾಂಕ್‌ನ ಬಲಭಾಗದ ಕಬ್ಬಿಣದ ಕಿಟಿಕಿಯ ಗ್ರೀಲ್‌ನ್ನು ಕಟ್ ಮಾಡಿ ಕಳ್ಳರು ಒಳ ಪ್ರವೇಶಿಸಿದ್ದು ತದನಂತರ ಸಿಸಿ ಟಿವಿ, ಅಲರಾಮ್ ಮತ್ತು ಎಲ್ಲಾ ವೈರಗಳ ಕನೆಕ್ಷನ್ ತೆಗೆದು ನಂತರ ಸ್ಟ್ರಾಂಗ್ ರೂಂಗೆ ಇದ್ದಂತಹ ಗ್ರೀಲ್ ಡೋರನ ಬೀಗವನ್ನು ಮುರಿದು ಒಳಗೆ ಬಂದು ಅಲ್ಲಿ ಇದ್ದಂತಹ ನಾಲ್ಕು ಕರೆನ್ಸಿ ಚೆಸ್ಟ್ಗಳಲ್ಲಿ ಒಂದನ್ನು ಗ್ಯಾಸ್ ಕಟ್ಟರ್‌ನ ಸಹಾಯದಿಂದ ಕೊರೆದು ಲಾಕರ್ ಬಾಗಿಲು
ತೆಗೆದು ಅದರಲ್ಲಿ ಸಾರ್ವಜನಿಕರು ಅಡವಿಟ್ಟಿದ್ದ ಚಿನ್ನಾಭರಣಗಳ ಟ್ರೇನಲ್ಲಿ ಇದ್ದಂತಹ ಸುಮಾರು ೧೭.೭ ಕೆಜಿ ಆಭರಣಗಳನ್ನು ಕದ್ದುಕೊಂಡು ಸಾಕ್ಷಿ ನಾಶ ಮಾಡುವ ಸಲುವಾಗಿ ಸ್ಟ್ರಾಂಗ್ ರೂಂ, ಬ್ಯಾಂಕ್ ಮ್ಯಾನೇಜರ್ ರೂಮ್ ಹಾಗೂ ಕಟ್ ಮಾಡಿರುವ ಕಿಟಿಕಿಯವರೆಗೆ ಖಾರದ ಪುಡಿಯನ್ನು ಚೆಲ್ಲಿ ಪರಾರಿಯಾಗಿದ್ದರು.
ಪ್ರಕರಣದ ತನಿಖಾಧಿಕಾರಿಯನ್ನಾಗಿ ಚನ್ನಗಿರಿ ಉಪ ವಿಭಾಗದ
ಎಎಸ್‌ಪಿ ಶ್ಯಾಮ್ ವರ್ಗೀಸ್ ಅವರನ್ನು ನೇಮಿಸಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು