9:35 PM Friday19 - June 2026
ಬ್ರೇಕಿಂಗ್ ನ್ಯೂಸ್
ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.…

ಇತ್ತೀಚಿನ ಸುದ್ದಿ

ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ ತುಂಬಿ ಹಾರೈಕೆ

24/03/2026, 22:33

ದಾವಣಗೆರೆ(reporterkarnataka.com): ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ರಾಜಕೀಯ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸಕರಿಯಪ್ಪ ಅವರ ಪರವಾಗಿ ಇಂದು ಅವರ ಪತ್ನಿ ಸಂಧ್ಯಾ ಶ್ರೀನಿವಾಸ್ ಅವರು ಇಮಾಂ ನಗರದಲ್ಲಿ ನಡೆಸಿದ ಮನೆ ಮನೆ ಪ್ರಚಾರವು ಗಮನ ಸೆಳೆಯಿತು. ಇಮಾಂ ನಗರದ ಮುಸ್ಲಿಂ ಮಹಿಳೆಯರು ಸಂಧ್ಯಾ ಶ್ರೀನಿವಾಸ್ ಅವರಿಗೆ ಅತ್ಯಂತ ಆತ್ಮೀಯವಾಗಿ ಸ್ವಾಗತ ಕೋರಿದರು. ಕೇವಲ ಪ್ರಚಾರಕ್ಕೆ ಸೀಮಿತವಾಗದ ಈ ಭೇಟಿಯಲ್ಲಿ, ಸ್ಥಳೀಯ ಮಹಿಳೆಯರು ಅವರನ್ನು ಮನೆಗೆ ಆಹ್ವಾನಿಸಿ, ಕುಡಿಯಲು ನೀರು ನೀಡಿ ಸತ್ಕರಿಸಿದ್ದಲ್ಲದೆ, ಹಿಂದೂ ಸಂಪ್ರದಾಯದಂತೆ ಉಡಿ ತುಂಬಿ ಆಶೀರ್ವದಿಸುವ ಮೂಲಕ ತಮ್ಮ ಬೆಂಬಲವನ್ನು ಘೋಷಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅಲ್ಪಸಂಖ್ಯಾತ ಮಹಿಳೆಯರು, ‘ಕಾಂಗ್ರೆಸ್ ಪಕ್ಷವು ಇಷ್ಟು ವರ್ಷ ನಮ್ಮ ಮತಗಳನ್ನು ಪಡೆದು ನಮಗೆ ದ್ರೋಹ ಮಾಡಿದೆ. ಈ ಬಾರಿ ಅವರಿಗೆ ತಕ್ಕ ಪಾಠ ಕಲಿಸುತ್ತೇವೆ. ನಮಗೆ ಬಿಜೆಪಿ ವಿರೋಧಿಯಲ್ಲ, ಉತ್ತಮ ವ್ಯಕ್ತಿತ್ವದ ಶ್ರೀನಿವಾಸ್ ಅವರಿಗೆ ನಾವು 100% ಬೆಂಬಲ ನೀಡುತ್ತೇವೆ’ ಎಂದು ಘೋಷಿಸಿದರು.
ಅಭ್ಯರ್ಥಿ ಶ್ರೀನಿವಾಸ್ ಅವರ ತಂದೆ ಹಮಾಲಿ ಕೆಲಸ ಮಾಡುವ ಮೂಲಕ ಜೀವನ ಸಾಗಿಸುತ್ತಿದ್ದವರು. ಅಂತಹ ಕಡು ಬಡತನದ ಹಿನ್ನೆಲೆಯಿಂದ ಬಂದ ಮಗ ಇಂದು ಜನರ ಪರವಾಗಿ ಕೆಲಸ ಮಾಡುತ್ತಿರುವುದು ನಮಗೆ ಹೆಮ್ಮೆಯ ವಿಷಯ ಎಂದು ಮತದಾರರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.
ಪ್ರಚಾರದ ಈ ಸಂದರ್ಭದಲ್ಲಿ ಸಂಧ್ಯಾ ಶ್ರೀನಿವಾಸ್ ಅವರೊಂದಿಗೆ ಪದ್ಮಾವತಿ, ಲಲಿತಾ, ತೃಪ್ತಿ, ನಮಿತಾ ಸಿರಿ, ಅಂಬಿಕಾ ಹಾಗೂ ವಿಜಯ್ ಸಾವಂತ್ ಸೇರಿದಂತೆ ಅನೇಕ ಮುಖಂಡರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು