11:57 PM Monday25 - May 2026
ಬ್ರೇಕಿಂಗ್ ನ್ಯೂಸ್
ಕಾಫಿ ತೋಟದಲ್ಲಿ ಕಾಡಾನೆಗಳ ‘ರೌದ್ರ ನರ್ತನ: ಅರಣ್ಯ ಸಿಬ್ಬಂದಿಯನ್ನೇ ಬೆನ್ನಟ್ಟಿದ ಗಜಪಡೆ ಮೇಕೆದಾಟು ವಿವಾದ: ತಮಿಳುನಾಡು ಸಿಎಂ ವಿಜಯ್ ತುರ್ತು ಸಭೆ, ಕಾನೂನು ಹೋರಾಟ ಚುರುಕುಗೊಳಿಸಲು… ಕೊಲ್ಲೂರು ಆಕ್ಸಿಡೆಂಟ್ | ಮೃತ ಮಹಿಳೆಯ ಮೈ ಮೇಲಿನ ಚಿನ್ನಾಭರಣ ಕದ್ದ ಕೇಸಿಗೆ… ಚಿಕ್ಕಮಗಳೂರು: ಕೈ ಕೈ ಮಿಲಾಯಿಸುವ ಮಟ್ಟಿಗೆ ತಲುಪಿದ ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ… ಮಂಗಳೂರು ವಿಮಾನ ದುರಂತ | ಕಾಕ್‌ಪಿಟ್‌ನಲ್ಲಿ ಹಾರಾಟದ ವೇಳೆ 1 ಗಂಟೆ 40… ಭಾರತೀಯರ ರಕ್ತಕ್ಕೆ ಪಾಕ್​ನಲ್ಲಿ ಪ್ರತೀಕಾರ: ಪುಲ್ವಾಮಾ ದಾಳಿ ಮಾಸ್ಟರ್‌ ಮೈಂಡ್ ಹಮ್ಜಾ ಬುರ್ಹಾನ್… ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ: 80,535 ವಿದ್ಯಾರ್ಥಿಗಳ ಪೈಕಿ 36,764 ಮಂದಿ… ತಜ್ಞರ ಸಮಿತಿ ವರದಿಯನ್ನು ನಿರ್ಲಕ್ಷಿಸಿದ್ದೇ ದುಬಾರೆ ದುರ್ಘಟನೆ ಕಾರಣ? ನಂಜನಗೂಡು | ಯಡಿಯಾಲ ಸುತ್ತಮುತ್ತ ಹುಲಿ ಹೆಜ್ಜೆ ಪತ್ತೆ: ಗ್ರಾಮಸ್ಥರಲ್ಲಿ ಆತಂಕ ದುಬಾರೆ ಆನೆ ಶಿಬಿರದಲ್ಲಿ ಮಾರ್ಗಸೂಚಿ ಪಾಲಿಸಲು ಸೂಚನೆ: ಕೊಡಗು ಉಸ್ತುವಾರಿ ಸಚಿವ ಬೋಸರಾಜು

ಇತ್ತೀಚಿನ ಸುದ್ದಿ

ದಾವಣಗೆರೆ ದಕ್ಷಿಣ: ಮತಗಟ್ಟೆ ಬಳಿ ಟೇಬಲ್ ವಿಚಾರವಾಗಿ ಕಾಂಗ್ರೆಸ್-ಎಸ್ ಡಿಪಿಐ ಕಾರ್ಯಕರ್ತರ ಜಟಾಪಟಿ

09/04/2026, 18:37

ದಾವಣಗೆರೆ(reporterkarnataka.com): ಮತದಾರರ ಚೀಟಿ ನೀಡಲು ಮತಗಟ್ಟೆ ಸಮೀಪ ಹಾಕಿಕೊಂಡಿದ್ದ ಟೇಬಲ್ ವಿಚಾರದಲ್ಲಿ ಕಾಂಗ್ರೆಸ್ ಹಾಗೂ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಕಾರ್ಯಕರ್ತರ ನಡುವೆ ಗುರುವಾರ ಇಲ್ಲಿ ಗಲಾಟೆ ನಡೆಯಿತು.
ನಗರದ ವಾರ್ಡ್ ಸಂಖ್ಯೆ 4 ರ ಮಿಲ್ಲತ್ ಶಿಕ್ಷಣ ಸಂಸ್ಥೆಯಲ್ಲಿ ಆರು ಮತಗಟ್ಟೆ ಇರುವುದರಿಂದ ಮೆಹಬೂಬ್ ನಗರದ ಮುಖ್ಯ ರಸ್ತೆಯ ಆಲಾ ಹಜರತ್‌ ಚೌಕದಲ್ಲಿ ಪೊಲೀಸರು ಬ್ಯಾರಿಕೇಡ್ ಹಾಕಿ ಮತದಾರರ ಪ್ರವೇಶಕ್ಕೆ ಮಾತ್ರ ಅವಕಾಶ ಕಲ್ಪಿಸಿದ್ದರು. ರಸ್ತೆಯ ಎರಡು ಬದಿಯಲ್ಲಿ ಕಾಂಗ್ರೆಸ್ ಹಾಗೂ ಎಸ್‌ಡಿಪಿಐ ಕಾರ್ಯಕರ್ತರು ಟೇಬಲ್ ಹಾಕಿಕೊಂಡಿದ್ದರು. ಇದರಿಂದ ಸ್ಥಳದಲ್ಲಿ ಜನಜಂಗುಳಿ ಉಂಟಾಗಿತ್ತು.

ಕಾಂಗ್ರೆಸ್ ಹಾಗೂ ಎಸ್‌ಡಿಪಿಐ ಕಾರ್ಯಕರ್ತರು ಮತದಾರರ ಮನವೊಲಿಸಲು ಕೊನೆಯ ಗಳಿಗೆಯಲ್ಲಿ ಪ್ರಯತ್ನ ಮಾಡುತ್ತಿದರು. ಕುಕ್ಕರ್ ಚಿಹ್ನೆ ಹಾಗೂ 4ನೇ ಸಂಖ್ಯೆಗೆ ಮತ ಹಾಕುವಂತೆ ಎಸ್‌ಡಿಪಿಐ ಕಾರ್ಯಕರ್ತರು ಮನವಿ ಮಾಡುತ್ತಿದ್ದರು. ಪ್ರತಿಯಾಗಿ ಕಾಂಗ್ರೆಸ್ ಕಾರ್ಯಕರ್ತರು 3ನೇ ಸಂಖ್ಯೆಯ ಹಸ್ತದ ಗುರುತಿಗೆ ಮತ ನೀಡುವಂತೆ ಕೋರಿಕೊಳ್ಳುತ್ತಿದ್ದರು.
ಮುಖ್ಯ ರಸ್ತೆಯಿಂದ ಹಿಂದಕ್ಕೆ ಟೇಬಲ್ ಹಾಕಿಕೊಳ್ಳುವಂತೆ ಕಾಂಗ್ರೆಸ್ ನಾಯಕರು ಎಸ್‌ಡಿಪಿಐ ಮುಖಂಡರಿಗೆ ತಾಕೀತು ಮಾಡಿದರು. ಟೇಬಲ್ ತೆರವುಗೊಳಿಸುವಂತೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಯೂಬ್ ಪೈಲ್ವಾನ್ ಹಾಗೂ ಇತರರು ಒತ್ತಾಯಿಸಿದರು. ಇದಕ್ಕೆ ಒಪ್ಪದೇ ಇದ್ದಾಗ ಕಾಂಗ್ರೆಸ್ ಮುಖಂಡರು ಟೇಬಲ್ ಎತ್ತಿ ಬಿಸಾಡಿದರು. ಆಗ ಎರಡು ಪಕ್ಷಗಳ ಮುಖಂಡರ ನಡುವೆ ವಾಗ್ವಾದ ನಡೆಯಿತು. ಮಧ್ಯ ಪ್ರವೇಶಿಸಿದ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿ ಜನರನ್ನು ಚದುರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು