2:14 PM Sunday1 - February 2026
ಬ್ರೇಕಿಂಗ್ ನ್ಯೂಸ್
ಮೊದಲಿನಂತೆ ಸ್ವತಂತ್ರವಾಗಿ ಸಿನಿಮಾ ಮಾಡಲಾಗುತ್ತಿಲ್ಲ: ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ನಟ-ನಿರ್ದೇಶಕ ಅನುರಾಗ್ ಕಶ್ಯಪ್ ಇಂದ್ರಿಯ ನಿಗ್ರಹಿಸುವುದೇ ನೈಜ ಜ್ಞಾನ; ಇದುವೇ ಜೀವನ ಮಾರ್ಗ : ಶೃಂಗೇರಿ ಶಾರದಾಪೀಠದ… ಗೃಹ ಸಚಿವರ ರಾಜೀನಾಮೆ, ಪೊಲೀಸ್ ಕಮೀಷನರ್ ಅಮಾನತಿಗೆ ಬಿಜೆಪಿ ಆಗ್ರಹ ಕಾನ್ಫಿಡೆಂಟ್‌ ಗ್ರೂಪ್‌ ಚೇರ್‌ಮೆನ್ ಸಿ.ಜೆ. ರಾಯ್‌ ಗುಂಡಿಕ್ಕಿಕೊಂಡು ಆತ್ಮಹತ್ಯೆ: ಐಟಿ ದಾಳಿಗೆ ಹೆದರಿದರೇ… ಕಾಡಾನೆ ದಾಳಿಯಿಂದ ಅದೃಷ್ಟವಶಾತ್ ತಂದೆ- ಮಗಳು ಜಸ್ಟ್ ಮಿಸ್: ಕೊಡಗಿನಲ್ಲಿ ತಪ್ಪಿದ ಭಾರಿ… ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ವಿ ಬಿ ಜಿ ರಾಮ್… 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ

ಇತ್ತೀಚಿನ ಸುದ್ದಿ

ದಾವಣಗೆರೆ ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಕೆಂಗೋ ಹನುಮಂತಪ್ಪ ನಿಧನ: ಹಲವು ಗಣ್ಯರ ಸಂತಾಪ

30/05/2021, 03:35

ವಿಜಯಪುರ(reporterkarnataka news);ದಾವಣಗೆರೆ ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಹಾಗೂ ಬಯಲು ಸೀಮೆಯ ಪ್ರದೇಶ ಅಭಿವೃದ್ಧಿ ಮಂಡಳಿಯ ಮಾಜಿ ಅಧ್ಯಕ್ಷ ಕೆಂಗೋ ಹನುಮಂತಪ್ಪ ಅವರು ನಿಧನರಾದರು.

ದಾವಣಗೆರೆ ಜಿಲ್ಲೆಯ ಚಿಕ್ಕಬೂದಿಹಾಳದವರಾದ ಹನುಮಂತಪ್ಪ ಅವರು ಕುರುಬರ ಸಂಘದ ಅಧ್ಯಕ್ಷರಾಗಿ ಸಮಾಜದ ಏಳಿಗೆಗೆ ಅಪಾರ ಕೊಡುಗೆ ನೀಡಿದ್ದಾರೆ.

ಬಯಲು ಸೀಮೆ ಪ್ರದೇಶ ಮಂಡಳಿಯ ಅಧ್ಯಕ್ಷರಾಗಿದ್ದಾಗ

ತಮ್ಮ ವೀವೆಚನಾ ಕೋಟದಡಿಯಲ್ಲಿ ಬರುವ ಅನುದಾನದಲ್ಲಿ ಅನೇಕ ಅಭಿವೃದ್ಧಿ ಕಾರ್ಯ ನಡೆಸಿದ್ದಾರೆ.

ಶಿರನಾಳ ಗ್ರಾಮದ ಸಂ ನಂ 179 ರಲ್ಲಿ  ಹರಿವೂ ಹಳ್ಳಕ್ಕೆ ಅಡ್ಡಲಾಗಿ ಒಂದು ನಾಲ ಬದುಕೆ  2 ಲಕ್ಷ ರೂ. ಅನುದಾನ ಹಂಚಿಕೆ 

ಮಾಡಿದ್ದಾರೆ.  ಇದರಿಂದ ಇಲ್ಲಿರುವ ಕೋಳವೆ ಬಾವಿಯಲ್ಲಿ ಅಂತರ್ಜಲ ವೃದ್ದಿಯಾಯಿತು. 

ಇವರು ಎರಡು ಬಾರಿ ದಾವಣಗೆರೆ ಜಿಲ್ಲೆಯಲ್ಲಿ ಕಾಂಗ್ರೆಸ್ ನಿಂದ ಎಂ ಎಲ್ ಎ ಹಾಗೂ ಎಂಪಿ ಟಿಕೆಟ್ ಗೆ ಪ್ರಯತ್ನಿಸಿದ್ದರು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಶ್ಯಾಮನೂರು ಶಿವಶಂಕರಪ್ಪ ಅವರ ಆಪ್ತರಾಗಿದ್ದರು.

ಸದಾ ಹಸನ್ಮುಖಿಯಾದ ಅವರ ನಿಧನದಿಂದ ದೊಡ್ಡ ಮುಖಂಡನ ಕಳೆದುಕೊಂಡಂತಾಗಿದೆ. ದಾವಣಗೆರೆ ಜಿಲ್ಲಾ ಕುರುಬರ ಸಂಘ

ಹಾಗೂ ರಾಜ್ಯ ಕುರುಬರ ಸಂಘಕ್ಕೆ ಭಾರೀ ನಷ್ಟ ಉಂಟಾಗಿದೆ. ಇವರು ದಾವಣಗೆರೆ, ಬಳ್ಳಾರಿ ಮತ್ತು ಹಾವೆರಿ ಜಿಲ್ಲೆಯಲ್ಲಿ ಪ್ರಸಿದ್ಧರಾಗಿದ್ದರು.

ಹನುಮಂತಪ್ಪ ಅವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಅನೇಕ ಮಂದಿ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು