11:06 AM Wednesday18 - February 2026
ಬ್ರೇಕಿಂಗ್ ನ್ಯೂಸ್
ಆಗುಂಬೆ ಬಸ್ ನಿಲ್ದಾಣ ಬಳಿ ಎರಡು ಪ್ರತ್ಯೇಕ ಅಪಘಾತ: ಇಬ್ಬರಿಗೆ ಗಾಯ ಪ್ರೇಮಿಗಳ ದಿನಾಚರಣೆಯ ಎಫೆಕ್ಟ್ ?: ಪ್ರೇಮ ನಿವೇದನೆ ಒಪ್ಪಿಕೊಳ್ಳದ ಯುವತಿಗೆ ಬಿಯರ್ ಬಾಟ್ಲಿಯಿಂದ… ಕೊಪ್ಪಳದಲ್ಲಿ ವಿದೇಶಿ ಮಹಿಳೆಯ ಅತ್ಯಾಚಾರ, ಕೊಲೆ ಪ್ರಕರಣ: 3 ಮಂದಿ ಆರೋಪಿಗಳಿಗೆ ಗಲ್ಲು ಸಿದ್ದರಾಮಯ್ಯನವರ ಸರ್ಕಾರ ಜೀರೋ ಅಭಿವೃದ್ಧಿಯ ಸರ್ಕಾರ: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಹಾಶಿವರಾತ್ರಿ | ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾದಪ್ಪನಿಗೆ ಎಣ್ಣೆ ಮಜ್ಜನ: ವಿಶೇಷ ಪೂಜೆ ಟಿ20 ವಿಶ್ವಕಪ್: ಪಾಕಿಸ್ತಾನ ವಿರುದ್ದ ಭಾರತಕ್ಕೆ 61 ರನ್ ಜಯ; ಸೂಪರ್ 8… ರಾಜ್ಯದಲ್ಲಿ 2030ರ ವರೆಗೆ ಹಂತ ಹಂತವಾಗಿ ಪೊಲೀಸ್ ವಸತಿಗೃಹ ನಿರ್ಮಾಣ: ಗೃಹ ಸಚಿವ… ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ… ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್ ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ

ಇತ್ತೀಚಿನ ಸುದ್ದಿ

ಕೊನೆಗೂ ಬಂದ್ರು ಡಿಸಿಎಂ ಸಾಹೇಬ್ರು: ನದಿಯಲ್ಲಿ ಮುಳುಗಿ ಸಾವನ್ನಪ್ಪಿದ 4 ಮಂದಿ ಸಹೋದರರ ಮನೆಗೆ ಸವದಿ ಭೇಟಿ: 2 ಲಕ್ಷ ಪರಿಹಾರ

03/07/2021, 14:28

ರಾಹುಲ್ ಅಥಣಿ ಬೆಳಗಾವಿ
info.reporterkarnataka@gmail.com

ಅಥಣಿ ತಾಲೂಕಿನ ಹಲ್ಯಾಳ ಗ್ರಾಮದಲ್ಲಿ ಒಂದೇ ಕುಟುಂಬದ ನಾಲ್ವರು ಕೃಷ್ಣ ನದಿಯಲ್ಲಿ ಮುಳುಗಿ ಮೃತಪಟ್ಟಿರುವ ಕುಟುಂಬಕ್ಕೆ ಸುಮಾರು 6 ದಿನಗಳ ಬಳಿಕ ಉಪ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಲಕ್ಶ್ಮಣ ಸವದಿ ಅವರು ಶಾಸಕ ಮಹೇಶ್ ಕುಮಟಳ್ಳಿ ಜತೆ ಭೇಟಿ ನೀಡಿ ಸಾಂತ್ವನ ಹೇಳಿದರು.

ದುಃಖತೃಪ್ತ ಕುಟುಂಬಕ್ಕೆ ದೇವರು ದುಃಖ ಭರಿಸುವ ಶಕ್ತಿಯನ್ನು ನೀಡಲಿ ಎಂದು ಸಾಂತ್ವನ ಹೇಳುವುದರ ಜೊತೆಗೆ ಮೃತರ ಮಕ್ಕಳ ಹಾಗೂ ತಂದೆ ತಾಯಿಯ ಉಪ ಜೀವನಕ್ಕೆ  ಸಹಾಯವಾಗಲೆಂದು ವೈಯಕ್ತಿಕ ನೆಲೆಯಲ್ಲಿ 2 ಲಕ್ಷ ರೂ. ಪರಿಹಾರ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಡಿಸಿಎಂ ಲಕ್ಷ್ಮಣ್ ಸವದಿ, ಆದಷ್ಟು ಬೇಗ ಸರ್ಕಾರದಿಂದ ಪರಿಹಾರವನ್ನು ಮುಂಜೂರು ಮಾಡಿಸಿ ಬಡ ಕುಟುಂಬಕ್ಕೆ ನೆರವು ಒದಗಿಸುವುದಾಗಿ ಭರವಸೆ ನೀಡಿದರು.

ದುರ್ಘಟನೆ ನಡೆದು 4 ದಿನಗಳ ಬಳಿಕ ಘಟನಾ ಸ್ಥಳಕ್ಕೆ ಆಗಮಿಸಿದ ಸ್ಥಳೀಯ ಶಾಸಕ ಮಹೇಶ್ ಕುಮಟಳ್ಳಿ ಅವರು ಎರಡನೇ ಬಾರಿ  ಡಿಸಿಎಂ ಜತೆಗೆ ಭೇಟಿ ನೀಡಿ ಕ್ಷೇತ್ರದ ಜನತೆಯ ಮನ ಗೆಲ್ಲಲ್ಲು ಪ್ರಯತ್ನಿಸಿದ್ದಾರೆ. ಶಾಸಕರು ತಡವಾಗಿ ಆಗಮಿಸಿದ ಬಗ್ಗೆ ಈ ಹಿಂದೆ ಸ್ಥಳೀಯ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದರು.

ಈ ಸಂದರ್ಭದಲ್ಲಿ ತಹಸೀಲ್ದಾರ್ ದುಂಡಪ್ಪ ಕೋಮ್ಮರ್, ಆರ್. ಬಂಗಾರೆಪ್ಪ, ಸಮಾಜ ಕಲ್ಯಾಣ ಅಧಿಕಾರಿ ಪ್ರವೀಣ್ ಪಾಟೀಲ, ಹಲ್ಯಾಳ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ

ವೆಂಕಟೇಶ್ ಸಂದ್ರಿಮಣಿ, ಗ್ರಾಮದ ಹಿರಿಯರಾದ ಸುರೇಶ ವಾಡೆದ, ಸಂಗಮೇಶ್ ಇಂಗಳಿ, ರಾವಸಾಬ ಪಾಟೀಲ್, ಗೋಪಾಲ ಮಂಗಸೂಳಿ,ಕುಮಾರ್ ಪಾಟೀಲ್, ಸಿದ್ದಪ್ಪ ಲೋಕುರ್, ಚಂದ್ರಕಾಂತ್ ಕಾಗವಾಡ, ಮಹಾಂತೇಶ್ ಶಿಂಗಿ, ಶಿವಾನಂದ್ ಇಂಗಳಿ ಹಾಗೂ ಗ್ರಾಮ ಪಂಚಾಯತ್ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಉಪಸ್ಥಿತರಿದ್ದರು..

ಇತ್ತೀಚಿನ ಸುದ್ದಿ

ಜಾಹೀರಾತು