10:53 AM Friday31 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ಕೊನೆಗೂ ಬಂದ್ರು ಡಿಸಿಎಂ ಸಾಹೇಬ್ರು: ನದಿಯಲ್ಲಿ ಮುಳುಗಿ ಸಾವನ್ನಪ್ಪಿದ 4 ಮಂದಿ ಸಹೋದರರ ಮನೆಗೆ ಸವದಿ ಭೇಟಿ: 2 ಲಕ್ಷ ಪರಿಹಾರ

03/07/2021, 14:28

ರಾಹುಲ್ ಅಥಣಿ ಬೆಳಗಾವಿ
info.reporterkarnataka@gmail.com

ಅಥಣಿ ತಾಲೂಕಿನ ಹಲ್ಯಾಳ ಗ್ರಾಮದಲ್ಲಿ ಒಂದೇ ಕುಟುಂಬದ ನಾಲ್ವರು ಕೃಷ್ಣ ನದಿಯಲ್ಲಿ ಮುಳುಗಿ ಮೃತಪಟ್ಟಿರುವ ಕುಟುಂಬಕ್ಕೆ ಸುಮಾರು 6 ದಿನಗಳ ಬಳಿಕ ಉಪ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಲಕ್ಶ್ಮಣ ಸವದಿ ಅವರು ಶಾಸಕ ಮಹೇಶ್ ಕುಮಟಳ್ಳಿ ಜತೆ ಭೇಟಿ ನೀಡಿ ಸಾಂತ್ವನ ಹೇಳಿದರು.

ದುಃಖತೃಪ್ತ ಕುಟುಂಬಕ್ಕೆ ದೇವರು ದುಃಖ ಭರಿಸುವ ಶಕ್ತಿಯನ್ನು ನೀಡಲಿ ಎಂದು ಸಾಂತ್ವನ ಹೇಳುವುದರ ಜೊತೆಗೆ ಮೃತರ ಮಕ್ಕಳ ಹಾಗೂ ತಂದೆ ತಾಯಿಯ ಉಪ ಜೀವನಕ್ಕೆ  ಸಹಾಯವಾಗಲೆಂದು ವೈಯಕ್ತಿಕ ನೆಲೆಯಲ್ಲಿ 2 ಲಕ್ಷ ರೂ. ಪರಿಹಾರ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಡಿಸಿಎಂ ಲಕ್ಷ್ಮಣ್ ಸವದಿ, ಆದಷ್ಟು ಬೇಗ ಸರ್ಕಾರದಿಂದ ಪರಿಹಾರವನ್ನು ಮುಂಜೂರು ಮಾಡಿಸಿ ಬಡ ಕುಟುಂಬಕ್ಕೆ ನೆರವು ಒದಗಿಸುವುದಾಗಿ ಭರವಸೆ ನೀಡಿದರು.

ದುರ್ಘಟನೆ ನಡೆದು 4 ದಿನಗಳ ಬಳಿಕ ಘಟನಾ ಸ್ಥಳಕ್ಕೆ ಆಗಮಿಸಿದ ಸ್ಥಳೀಯ ಶಾಸಕ ಮಹೇಶ್ ಕುಮಟಳ್ಳಿ ಅವರು ಎರಡನೇ ಬಾರಿ  ಡಿಸಿಎಂ ಜತೆಗೆ ಭೇಟಿ ನೀಡಿ ಕ್ಷೇತ್ರದ ಜನತೆಯ ಮನ ಗೆಲ್ಲಲ್ಲು ಪ್ರಯತ್ನಿಸಿದ್ದಾರೆ. ಶಾಸಕರು ತಡವಾಗಿ ಆಗಮಿಸಿದ ಬಗ್ಗೆ ಈ ಹಿಂದೆ ಸ್ಥಳೀಯ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದರು.

ಈ ಸಂದರ್ಭದಲ್ಲಿ ತಹಸೀಲ್ದಾರ್ ದುಂಡಪ್ಪ ಕೋಮ್ಮರ್, ಆರ್. ಬಂಗಾರೆಪ್ಪ, ಸಮಾಜ ಕಲ್ಯಾಣ ಅಧಿಕಾರಿ ಪ್ರವೀಣ್ ಪಾಟೀಲ, ಹಲ್ಯಾಳ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ

ವೆಂಕಟೇಶ್ ಸಂದ್ರಿಮಣಿ, ಗ್ರಾಮದ ಹಿರಿಯರಾದ ಸುರೇಶ ವಾಡೆದ, ಸಂಗಮೇಶ್ ಇಂಗಳಿ, ರಾವಸಾಬ ಪಾಟೀಲ್, ಗೋಪಾಲ ಮಂಗಸೂಳಿ,ಕುಮಾರ್ ಪಾಟೀಲ್, ಸಿದ್ದಪ್ಪ ಲೋಕುರ್, ಚಂದ್ರಕಾಂತ್ ಕಾಗವಾಡ, ಮಹಾಂತೇಶ್ ಶಿಂಗಿ, ಶಿವಾನಂದ್ ಇಂಗಳಿ ಹಾಗೂ ಗ್ರಾಮ ಪಂಚಾಯತ್ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಉಪಸ್ಥಿತರಿದ್ದರು..

ಇತ್ತೀಚಿನ ಸುದ್ದಿ

ಜಾಹೀರಾತು