10:38 PM Saturday20 - June 2026
ಬ್ರೇಕಿಂಗ್ ನ್ಯೂಸ್
Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ…

ಇತ್ತೀಚಿನ ಸುದ್ದಿ

ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: 6ನೇ ಸ್ಪಾಟ್ ನಲ್ಲಿ ಸಿಕ್ಕಿದ್ದು ಬರೇ ಮೂಳೆ ಚೂರುಗಳಲ್ಲ; ಹಾಗಾದರೆ ಮತ್ತೇನು?

31/07/2025, 17:43

ಧರ್ಮಸ್ಥಳ(reporterkarnataka.com): ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣಕ್ಕೆ ಸಂಬಂಧಿಸಿದ್ದಂತೆ ವಿಶೇಷ ತನಿಖಾ ತಂಡದಿಂದ ಮೂರನೇ ದಿನವಾದ ಇಂದು(ಗುರುವಾರ) ಕೂಡ ಸಮಾಧಿ ಉತ್ಖನನ ಮುಂದುವರಿದಿದ್ದು, 6ನೇ ಸ್ಪಾಟ್ ನಲ್ಲಿ ಮಾನವ ಮೂಳೆ ಚೂರುಗಳು ಮಾತ್ರವಲ್ಲದೆ ತಲೆ ಬುರುಡೆಯ ಅವಶೇಷಗಳೂ ಪತ್ತೆಯಾಗಿವೆ ಎಂದು ವಿಶ್ವಸನೀಯ ಮೂಲಗಳು ದೃಢಪಡಿಸಿವೆ.
ನೇತ್ರಾವತಿ ಸ್ನಾನಘಟ್ಟದ ಬಳಿಯ ಕಾಡಿನಲ್ಲಿ ಗುರುತಿಸಲಾದ 6ನೇ ಸ್ಪಾಟ್ ನಲ್ಲಿ ನಡೆಸಲಾದ
ಸಮಾಧಿ ಅಗೆತ ಸಂದರ್ಭದಲ್ಲಿ ಮಾನವ ಮೂಳೆ ತುಂಡುಗಳು ಮಾತ್ರವಲ್ಲದೆ ತಲೆ ಬುರುಡೆ ಚೂರುಗಳು, ಕೈಕಾಲಿನ ಅವಶೇಷಗಳು ಎಂದು ತಿಳಿದು ಬಂದಿದೆ.
ಈ ನಡುವೆ ಎಸ್ಐಟಿ ದ.ಕ. ಜಿಲ್ಲೆಯಲ್ಲಿ ನಾಪತ್ತೆಯಾದವರ ಬಗ್ಗೆ ವಿವರ ನೀಡುವಂತೆ ಪ್ರತಿ ಪೊಲೀಸ್ ಠಾಣೆಗೆ ಸೂಚಿಸಿದೆ. ಕಳೆದ 20 ವರ್ಷಗಳಲ್ಲಿ ನಾಪತ್ತೆಯಾದವರ ಬಗ್ಗೆ ಮಾಹಿತಿ ನೀಡುವಂತೆ ಸೂಚಿಸಿದೆ ಎಂದು ತಿಳಿದು ಬಂದಿದೆ.
ಸಾಮೂಹಿಕ ಸಮಾಧಿ ಪ್ರಕರಣ ಸಂಬಂಧಿಸಿ ಮೂರು ದಿನಗಳಿಂದ ಸಾಕ್ಷ್ಯ ಪತ್ತೆಗಾಗಿ ಎಸ್‌ಐಟಿ ತಂಡ ಕಾರ್ಮಿಕರ ಮೂಲಕ ಅಗೆಯುವ ಕೆಲಸದಲ್ಲಿ ತೊಡಗಿದೆ. ಮೂರು ದಿನಗಳಲ್ಲಿ ಗುರುತು ಹಾಕಿದ ಐದು ಕಡೆ ಅಗೆತ ನಡೆಸಿದಾಗ, ಯಾವುದೇ ಸಾಕ್ಷ್ಯ ಲಭಿಸಿರಲಿಲ್ಲ.
ಇಂದು ಬೆಳಗ್ಗಿನಿಂದ ಆರನೇ ಸಮಾಧಿ ಜಾಗದಲ್ಲಿ ಅಗೆಯಲಾಗಿದ್ದು ಅಸ್ಥಿಪಂಜರದ ಅವಶೇಷಗಳು ಸಿಕ್ಕಿವೆ. ಈ ಹಿನ್ನೆಲೆಯಲ್ಲಿ ಅತ್ಯಂತ ಜೋಪಾನವಾಗಿ ಅಗೆಯುವ ಕೆಲಸ ನಡೆಯುವ ಸಾಧ್ಯತೆ ಇದೆ. ಸ್ಥಳದಲ್ಲಿ ಡಿಐಜಿ ಅನುಚೇತ್, ಎಸ್ಪಿ ಜಿತೇಂದ್ರ ದಯಾಮ, ಪುತ್ತೂರು ಎಸಿ ಸ್ಟೆಲ್ಲಾ ಮೇರಿಸ್ ಇದ್ದಾರೆ. ದೂರುದಾರ ವ್ಯಕ್ತಿಯ ಸಮ್ಮುಖದಲ್ಲಿ ಅಗೆಯುವ ಕೆಲಸ ಮಾಡಲಾಗುತ್ತಿದ್ದು ಹೆಣ ಹೂತ ಪ್ರಕರಣ ಸಾರ್ವಜನಿಕರ ಗಮನ ಸೆಳೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು