1:34 PM Saturday2 - May 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್…

ಇತ್ತೀಚಿನ ಸುದ್ದಿ

ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: 6ನೇ ಸ್ಪಾಟ್ ನಲ್ಲಿ ಸಿಕ್ಕಿದ್ದು ಬರೇ ಮೂಳೆ ಚೂರುಗಳಲ್ಲ; ಹಾಗಾದರೆ ಮತ್ತೇನು?

31/07/2025, 17:43

ಧರ್ಮಸ್ಥಳ(reporterkarnataka.com): ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣಕ್ಕೆ ಸಂಬಂಧಿಸಿದ್ದಂತೆ ವಿಶೇಷ ತನಿಖಾ ತಂಡದಿಂದ ಮೂರನೇ ದಿನವಾದ ಇಂದು(ಗುರುವಾರ) ಕೂಡ ಸಮಾಧಿ ಉತ್ಖನನ ಮುಂದುವರಿದಿದ್ದು, 6ನೇ ಸ್ಪಾಟ್ ನಲ್ಲಿ ಮಾನವ ಮೂಳೆ ಚೂರುಗಳು ಮಾತ್ರವಲ್ಲದೆ ತಲೆ ಬುರುಡೆಯ ಅವಶೇಷಗಳೂ ಪತ್ತೆಯಾಗಿವೆ ಎಂದು ವಿಶ್ವಸನೀಯ ಮೂಲಗಳು ದೃಢಪಡಿಸಿವೆ.
ನೇತ್ರಾವತಿ ಸ್ನಾನಘಟ್ಟದ ಬಳಿಯ ಕಾಡಿನಲ್ಲಿ ಗುರುತಿಸಲಾದ 6ನೇ ಸ್ಪಾಟ್ ನಲ್ಲಿ ನಡೆಸಲಾದ
ಸಮಾಧಿ ಅಗೆತ ಸಂದರ್ಭದಲ್ಲಿ ಮಾನವ ಮೂಳೆ ತುಂಡುಗಳು ಮಾತ್ರವಲ್ಲದೆ ತಲೆ ಬುರುಡೆ ಚೂರುಗಳು, ಕೈಕಾಲಿನ ಅವಶೇಷಗಳು ಎಂದು ತಿಳಿದು ಬಂದಿದೆ.
ಈ ನಡುವೆ ಎಸ್ಐಟಿ ದ.ಕ. ಜಿಲ್ಲೆಯಲ್ಲಿ ನಾಪತ್ತೆಯಾದವರ ಬಗ್ಗೆ ವಿವರ ನೀಡುವಂತೆ ಪ್ರತಿ ಪೊಲೀಸ್ ಠಾಣೆಗೆ ಸೂಚಿಸಿದೆ. ಕಳೆದ 20 ವರ್ಷಗಳಲ್ಲಿ ನಾಪತ್ತೆಯಾದವರ ಬಗ್ಗೆ ಮಾಹಿತಿ ನೀಡುವಂತೆ ಸೂಚಿಸಿದೆ ಎಂದು ತಿಳಿದು ಬಂದಿದೆ.
ಸಾಮೂಹಿಕ ಸಮಾಧಿ ಪ್ರಕರಣ ಸಂಬಂಧಿಸಿ ಮೂರು ದಿನಗಳಿಂದ ಸಾಕ್ಷ್ಯ ಪತ್ತೆಗಾಗಿ ಎಸ್‌ಐಟಿ ತಂಡ ಕಾರ್ಮಿಕರ ಮೂಲಕ ಅಗೆಯುವ ಕೆಲಸದಲ್ಲಿ ತೊಡಗಿದೆ. ಮೂರು ದಿನಗಳಲ್ಲಿ ಗುರುತು ಹಾಕಿದ ಐದು ಕಡೆ ಅಗೆತ ನಡೆಸಿದಾಗ, ಯಾವುದೇ ಸಾಕ್ಷ್ಯ ಲಭಿಸಿರಲಿಲ್ಲ.
ಇಂದು ಬೆಳಗ್ಗಿನಿಂದ ಆರನೇ ಸಮಾಧಿ ಜಾಗದಲ್ಲಿ ಅಗೆಯಲಾಗಿದ್ದು ಅಸ್ಥಿಪಂಜರದ ಅವಶೇಷಗಳು ಸಿಕ್ಕಿವೆ. ಈ ಹಿನ್ನೆಲೆಯಲ್ಲಿ ಅತ್ಯಂತ ಜೋಪಾನವಾಗಿ ಅಗೆಯುವ ಕೆಲಸ ನಡೆಯುವ ಸಾಧ್ಯತೆ ಇದೆ. ಸ್ಥಳದಲ್ಲಿ ಡಿಐಜಿ ಅನುಚೇತ್, ಎಸ್ಪಿ ಜಿತೇಂದ್ರ ದಯಾಮ, ಪುತ್ತೂರು ಎಸಿ ಸ್ಟೆಲ್ಲಾ ಮೇರಿಸ್ ಇದ್ದಾರೆ. ದೂರುದಾರ ವ್ಯಕ್ತಿಯ ಸಮ್ಮುಖದಲ್ಲಿ ಅಗೆಯುವ ಕೆಲಸ ಮಾಡಲಾಗುತ್ತಿದ್ದು ಹೆಣ ಹೂತ ಪ್ರಕರಣ ಸಾರ್ವಜನಿಕರ ಗಮನ ಸೆಳೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು