9:45 AM Wednesday8 - July 2026
ಬ್ರೇಕಿಂಗ್ ನ್ಯೂಸ್
ಮೂಗ್ರಹಳ್ಳಿ ಸೇತುವೆ ಕಾಮಗಾರಿಯಲ್ಲಿ ಸುರಕ್ಷತೆ ನಿರ್ಲಕ್ಷ್ಯ ಆರೋಪ; ಕಾಮಗಾರಿ ತಾತ್ಕಾಲಿಕ ಸ್ಥಗಿತಕ್ಕೆ ಗ್ರಾಮಸ್ಥರ… ಮರದ ದಿಮ್ಮಿ ಸಾಗಾಟ | ದಸರಾ ಅಂಬಾರಿ ಆನೆ ಕ್ಯಾಪ್ಟನ್ ಅಭಿಮನ್ಯು ದಂತ… ಬೇಲೂರು | SIR ಕರ್ತವ್ಯದ ಒತ್ತಡಕ್ಕೆ ಕುಸಿದು ಬಿದ್ದ ನಿವೃತ್ತಿಯಂಚಿನಲ್ಲಿರುವ 60ರ ಹರೆಯದ… ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿ ಎದುರಿಸಲು ಸಜ್ಜಾಗಿ: ಮೇಲುಸ್ತುವಾರಿ ಸಚಿವ ಯು.ಟಿ.… ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.…

ಇತ್ತೀಚಿನ ಸುದ್ದಿ

ಭದ್ರಾವತಿಯ ಯುವಕ ಹಾಗೂ ಬೆಂಗಳೂರಿನ ಯುವತಿಯ ಶವ ಕಾಫಿನಾಡಲ್ಲಿ ಪತ್ತೆ: ಕೊಲೆಗೈದು ಆತ್ಮಹತ್ಯೆ ಶಂಕೆ

20/02/2025, 15:50

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ತಾಲೂಕಿನ ದಾಸರಹಳ್ಳಿ ಗ್ರಾಮದಲ್ಲಿ ನಿಂತಿದ್ದ ಕಾರಲ್ಲಿ ಯುವತಿಯ ಶವ ಹಾಗೂ ಪಕ್ಕದ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾಗಿದೆ.
ರಾಮನಗರ ಜಿಲ್ಲೆಯ ಮಾಗಡಿ ಪಟ್ಟಣದ ಖಾಸಗಿ ಹೈಸ್ಕೂಲ್‌ನಲ್ಲಿ ಶಿಕ್ಷಕಿಯಾಗಿ ಪೂರ್ಣಿಮಾ(25) ಹಾಗೂ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಮೂಲದ ಮಧು ಮೃತಪಟ್ಟವರು ಎಂದು ಗುರುತಿಸಲಾಗಿದೆ.


ಯುವತಿಯನ್ನು ಕೊಂದು, ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.ಬೆಂಗಳೂರು ನೋಂದಣಿಯ yellow board ಕಾರಿನಲ್ಲಿ ಯುವಕ-ಯುವತಿ ಬಂದಿದ್ದರು.
ಯುವತಿಯ ಕುತ್ತಿಗೆಯಲ್ಲಿ ಕತ್ತು ಹಿಸುಕಿರುವ ಗುರುತು ಕಂಡು ಬಂದಿದೆ ಎನ್ನಲಾಗಿದೆ. ಯುವಕನ ಶವ ಪಕ್ಕದ ಮರದಲ್ಲಿ ವೇಲ್ ನಿಂದ ನೇಣು ಬಿಗಿದ ಸ್ಥಿತಿಯಲ್ಲಿ ಇದೆ.
ಪೂರ್ಣಿಮಾ ಮಾಗಡಿ ಪಟ್ಟಣದ ಖಾಸಗಿ ಹೈಸ್ಕೂಲ್‌ನಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಳು.ಬೇರೆಯವರೊಂದಿಗೆ ಎಂಗೇಜ್ಮೆಂಟ್ ಆಗಿದ್ದ ಇವಳನ್ನು ಮಧು ಡ್ರಾಪ್ ನೆಪದಲ್ಲಿ ಕಾರಿನಲ್ಲಿ ಕರೆತಂದು ‘ಟ್ರಿಪ್ ಹೋಗೋಣ’ ಎಂದು ಹೇಳಿ ಚಿಕ್ಕಮಗಳೂರಿನ ದಾಸರಹಳ್ಳಿಗೆ ಕರೆದುಕೊಂಡು ಹೋಗಿದ್ದ. ಮಧು ಶಿವಮೊಗ್ಗ ಜಿಲ್ಲೆ ಭದ್ರಾವತಿ ಮೂಲದವನಾಗಿದ್ದು,ಮಾಗಡಿಯಲ್ಲಿ ಡ್ರೈವರ್ ವೃತ್ತಿ ಮಾಡಿಕೊಂಡಿದ್ದ.
ಮಧು ಪೂರ್ಣಿಮಾ ಕುಟುಂಬಕ್ಕೆ ಚಿರಪರಿಚಿತನಾಗಿದ್ದು,ಕಳೆದ ಮೂರು ವರ್ಷಗಳಿಂದ ಅವರ ಮನೆಗೆ ಬಂದು ಹೋಗುತ್ತಿದ್ದ. ಪೂರ್ಣಿಮಾ ಮತ್ತು ಮಧು ನಡುವಿನ ಸಂಬಂಧ ಪ್ರೀತಿಯ ಆಳತೆಗೆ ತಲುಪಿದ್ದು, ಇದರ ಫಲವಾಗಿ ಮುಜುಗರದ ಕಾರಣದಿಂದ ಮಧು ಈ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ. ಪೂರ್ಣಿಮಾ ಮೇಲೆ ಯಾವುದೇ ಆಭರಣಗಳಿಲ್ಲದ ಸ್ಥಿತಿಯಲ್ಲಿ ಅವಳ ದೇಹ ಪತ್ತೆಯಾಗಿದ್ದು, ಘಟನೆ ಇನ್ನಷ್ಟು ಸಸ್ಪೆನ್ಸ್ ಹೆಚ್ಚಿಸಿದೆ.
ಈ ಇಬ್ಬರ ಮೃತ ದೇಹಗಳು ಚಿಕ್ಕಮಗಳೂರು ಜಿಲ್ಲಾ ಶವಾಗಾರದಲ್ಲಿ ಇರಿಸಲಾಗಿದ್ದು,ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಯ ಹಿಂದಿನ ನಿಜವಾದ ಕಾರಣವನ್ನ ತಿಳಿದುಕೊಳ್ಳಲು ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು