8:53 PM Friday18 - September 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ

ಇತ್ತೀಚಿನ ಸುದ್ದಿ

ರಾಷ್ಟ್ರೀಯ ಹೆದ್ದಾರಿಯಲ್ಲಿ ಮರಣ ಗುಂಡಿಗಳು: ಆಡಳಿತದ ವೈಫಲ್ಯತೆ; ಮಾನವೀಯತೆ ಮೆರೆದ ಟ್ರಾಫಿಕ್ ಪೊಲೀಸರು

18/06/2025, 08:18

ವಿಶೇಷ ವರದಿ ಮಂಗಳೂರು

info.reporterkarnataka@gmail.com

ನಗರದ ನಂತೂರು ರಸ್ತೆಯಲ್ಲಿ ಮೂರು ದಿನಗಳ ಹಿಂದೆ ಒಂದು ಅಪಘಾತ ಸಂಭವಿಸಿತು. ಒಬ್ಬರು ಜೀವ ಕಳೆದುಕೊಂಡರು. ಆ ಘಟನೆಯ ಬಳಿಕ, ರಸ್ತೆಯನ್ನು ದುರಸ್ತಿ ಮಾಡುವ ಭರವಸೆ ನೀಡಲಾಯಿತು. ಆದರೆ ಇವತ್ತು, ಅದೇ ರಸ್ತೆಯಲ್ಲಿ ದೊಡ್ಡ ದೊಡ್ಡ ಗುಂಡಿಗಳು ಮತ್ತೆ ಕಾಣಿಸಿಕೊಂಡಿವೆ. ಇದು ನಮ್ಮ ಆಡಳಿತದ ವೈಫಲ್ಯವಾದರೆ, ಇನ್ನೊಂದು ಕಡೆ ಈ ಗುಂಡಿಗಳು ಕೇವಲ ಮಣ್ಣಿನ ಹೊಂಡಗಳಲ್ಲ, ಇದು ಭ್ರಷ್ಟಾಚಾರದ ಕಾಮಗಾರಿಯ ಫಲಿತಾಂಶವಾಗಿದೆ.
ದಕ್ಷಿಣ ಕನ್ನಡದ ರಸ್ತೆಗಳ ಕಳಪೆ ಕಾಮಗಾರಿಯನ್ನು ನೋಡಿದರೆ, ಪ್ರಪಂಚದ ಯಾವುದೇ ಮೂಲೆಯಲ್ಲಿ ಇಂತಹ ದಯನೀಯ ಸ್ಥಿತಿಯಿರಲಿಕ್ಕಿಲ್ಲ ಎಂಬಂತೆ ಭಾಸವಾಗುತ್ತದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಕೇವಲ ಟೋಲ್ ಸಂಗ್ರಹಕ್ಕೆ ಸೀಮಿತವಾಗಿದೆಯೇ? ರಸ್ತೆ ಸುರಕ್ಷತೆಯ ಜವಾಬ್ದಾರಿಯನ್ನು ಯಾರು ಹೊರಬೇಕು? ಈ ಪ್ರಶ್ನೆಗಳಿಗೆ ಉತ್ತರವಿಲ್ಲದಂತೆ ಕಾಣುತ್ತದೆ. ಎಲ್ಲಿದೆ ದ.ಕ. ಜಿಲ್ಲಾಧಿಕಾರಿ ನೇತೃತ್ವದ ರಸ್ತೆ ಸುರಕ್ಷತಾ ಪ್ರಾಧಿಕಾರ ?
ಈ ಸಂದರ್ಭದಲ್ಲಿ, ನಮ್ಮ ಟ್ರಾಫಿಕ್ ಪೊಲೀಸರ ಕಾರ್ಯವೈಖರಿಯನ್ನು ಮೆಚ್ಚಲೇಬೇಕು. ಬಿಸಿಲಿನಲ್ಲಿ, ಮಳೆಗಾಲದ ತೊಂದರೆಯಲ್ಲಿ, ಅರ್ಧ ಜೀವ ಕಳೆದುಕೊಂಡರೂ, ರಸ್ತೆಯ ಗುಂಡಿಗಳನ್ನು ಕಲ್ಲುಗಳಿಂದ ಮುಚ್ಚುವ ಕೆಲಸವನ್ನು ಅವರು ಮಾಡುತ್ತಿದ್ದಾರೆ. ಇದು ಅವರ ಮಾನವೀಯತೆ ಮತ್ತು ಕರ್ತವ್ಯನಿಷ್ಠೆಯ ಸಂಕೇತವಾಗಿದೆ. ಆದರೆ, ಇದು ಅವರ ಕೆಲಸವೇ? ರಸ್ತೆ ದುರಸ್ತಿಯ ಜವಾಬ್ದಾರಿಯನ್ನು ಟ್ರಾಫಿಕ್ ಪೊಲೀಸರ ಮೇಲೆ ಹೊರಿಸುವುದು ಎಷ್ಟು ಸರಿ?
ನಮ್ಮ ಆಡಳಿತ ಮತ್ತು NHAI ಕಂಬಳಿ ಹಾಕಿ ಮಲಗಿದ್ದರೂ, ಟ್ರಾಫಿಕ್ ಪೊಲೀಸರು ದಿನದ 24 ಗಂಟೆಯೂ ಎಚ್ಚರದಿಂದ ಜನರ ಸುರಕ್ಷತೆಗಾಗಿ ಶ್ರಮಿಸುತ್ತಿದ್ದಾರೆ. ಆದರೆ, ಇದಕ್ಕೆ ಶಾಶ್ವತ ಪರಿಹಾರ ಬೇಕು. ಜನಪ್ರತಿನಿಧಿಗಳು ತಮ್ಮ ಎಸಿ ಕೊಠಡಿಗಳಿಂದ ಹೊರಬಂದು, ಜನಸಾಮಾನ್ಯರ ಕಷ್ಟವನ್ನು ಅರಿಯಬೇಕು. ಭ್ರಷ್ಟಾಚಾರದ ಕಾಮಗಾರಿಯನ್ನು ತಡೆಗಟ್ಟಿ, ಗುಣಮಟ್ಟದ ರಸ್ತೆಗಳನ್ನು ನಿರ್ಮಿಸುವ ಜವಾಬ್ದಾರಿಯನ್ನು ಯಾರಾದರೂ ತೆಗೆದುಕೊಳ್ಳಬೇಕು.
ಇನ್ನು ಯಾರೂ ರಸ್ತೆ ಗುಂಡಿಗಳಿಗೆ ಬಲಿಯಾಗಬಾರದು. ಸರಕಾರವೇ, ಎಚ್ಚರಿಕೆ! ಇದು ಜನರ ಅಗ್ರಹ

ಇತ್ತೀಚಿನ ಸುದ್ದಿ

ಜಾಹೀರಾತು