10:56 PM Wednesday18 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ ಸ್ಪೀಕರ್‌ ಸಭಾತ್ಯಾಗ ಪ್ರಕರಣ: ಖಾದರ್ ಸಿಟ್ಟಿಗೆ 8 ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಶೋಕಾಸ್… Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ…

ಇತ್ತೀಚಿನ ಸುದ್ದಿ

ಡಿ.10: ಕಪಿತಾನಿಯೊ ಶಾಲಾ ಮೈದಾನದಲ್ಲಿ ಅಂತರ್ ಧರ್ಮೀಯ ಸೌಹಾರ್ದ ಕ್ರೀಡಾಕೂಟ

26/11/2023, 15:12

ಮಂಗಳೂರು(reporterkarnataka.com): ಅಂತರ್ ಧರ್ಮೀಯ ಸೌಹಾರ್ದ ಕ್ರೀಡಾಕೂಟ
ಕಥೊಲಿಕ್ ಸಭಾ ಮಂಗಳೂರು ಪ್ರದೇಶ (ರಿ), ಆಂಜೆಲೊರ್ ಘಟಕ ಮತ್ತು ಅಂತರ್ ಧರ್ಮೀಯ ಸಂವಾದ ಆಯೋಗ, ಆಂಜೆಲೊರ್ ಚರ್ಚ್, ಪುರುಷರಿಗೆ ವಾಲಿಬಾಲ್ ಹಾಗೂ ಮಹಿಳೆಯರಿಗೆ ತ್ರೋಬಾಲ್ ಪಂದ್ಯಾವಳಿ ಡಿಸೆಂಬರ್ ೧೦ರಂದು ಬೆಳಿಗ್ಗೆ ೮.೪೫ ರಿಂದ ನಗರದ ಕಪಿತಾನಿಯೊ ಶಾಲಾ ಮೈದಾನದಲ್ಲಿ ನಡೆಯಲಿದೆ. ಸರ್ವಧರ್ಮದವರು ಕಟ್ಟಿ ಬೆಳೆಸಿದ ಮಂಗಳೂರು ಸೌಹಾರ್ದತೆಯಿಂದ ಕೂಡಿ ಎಲ್ಲರೊಂದಿಗೆ ಉತ್ತಮ ಬಾಂಧವ್ಯ ಹೊಂದಿದೆ. ಈ ಲಯವನ್ನು ಇನ್ನೂ ಉತ್ತಮ ರೀತಿಯಲ್ಲಿ ಬೆಳೆಸಲು ಈ ಕ್ರೀಡಾ ಪಂದ್ಯಾವಳಿಯನ್ನು ಕಥೊಲಿಕ್ ಸಭಾ(ರಿ) ಆಂಜೆಲೊರ್ ಘಟಕ ಆಯೋಜಿಸಿದೆ ಎಂದು ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ
ಅಂತರ್ ಧರ್ಮೀಯ ಆಯೋಗ ಸಂಚಾಲಕ ಫೆಲಿಕ್ಸ್ ಮೊರಾಸ್ ಹೇಳಿದರು.

ಸ್ಪರ್ಧೆಯ ನಿಯಮಗಳು:
ವಾಲಿಬಾಲ್ ತಂಡದಲ್ಲಿ ೯ ಕ್ರೀಡಾಳುಗಳಿದ್ದು, ೬ ಕ್ರೀಡಾಳುಗಳು ಆಡಬೇಕು. (ಮೂವರು ಬದಲಿಗಾಗಿ)
ತ್ರೋಬಾಲ್ ತಂಡದಲ್ಲಿ ೧೦ ಕ್ರೀಡಾಳುಗಳಿದ್ದು, ೭ ಕ್ರೀಡಾಳುಗಳು ಆಡಬೇಕು. (ಮೂವರು ಬದಲಿಗಾಗಿ)
ವಯಸ್ಸಿನ ಮಿತಿಯಿಲ್ಲ.
ತಂಡದಲ್ಲಿ ೪ ಕ್ರೀಡಾಳುಗಳು ಕ್ರೈಸ್ತೇತರಿರಬೇಕು ಮತ್ತು ಆಟದಲ್ಲಿ ಕಡ್ಡಾಯವಾಗಿ ಕನಿಷ್ಠ ೨ ಕ್ರೀಡಾಳುಗಳಿರಬೇಕು.
ಈ ಪಂದ್ಯಾಟವು ಸಿಟಿ ಮತ್ತು ಎಪಿಸ್ಕೋಪಲ್ ಸಿಟಿ ಕ್ಷೇತ್ರಗಳ ಚರ್ಚುಗಳಿಗೆ ಸೀಮಿತವಾಗಿದ್ದು, ಒಂದು ಚರ್ಚಿನಿಂದ ಒಂದಕ್ಕಿಂತ ಹೆಚ್ಚು ಪಂಗಡಗಳು ಭಾಗವಹಿಸಬಹುದು.
ಪ್ರಥಮ ಮತ್ತು ದ್ವಿತೀಯ ಬಹುಮಾನದೊಂದಿಗೆ ಟ್ರೋಫಿಯನ್ನು ನೀಡಲಾಗುವುದು.
ಭಾಗವಹಿಸುವ ಪ್ರತಿಯೊಂದು ಪಂಗಡಗಳಿಗೆ ಸಂಭಾವನೆ ನೀಡಲಾಗುವುದು.
ಹೆಚ್ಚಿನ ವಿವರಗಳಿಗೆ ಸ್ಪರ್ಧೆಯ ಸಂಚಾಲಕರಾದ ಫೆಲಿಕ್ಸ್ ಮೊರಾಸ್ : ೯೪೪೮೪೭೬೫೪೬ ಅಥವಾ
ಅಂತರ್ ಧರ್ಮೀಯ ಸಂವಾದ ಆಯೋಗದ ಕಾರ್ಯದರ್ಶಿ ರಾಜೇಶ್ ಮಿಸ್ಕಿತ್: ೯೪೪೮೪೨೮೧೧೩ ಇವರನ್ನು ಸಂಪರ್ಕಿಸಬಹುದಾಗಿದೆ.

ಪತ್ರಿಕಾಗೋಷ್ಠಿಯಲ್ಲಿ
ರೋಶನ್ ಪತ್ರಾವೊ, (ಕಥೊಲಿಕ್ ಸಭಾ ಅಧ್ಯಕ್ಷರು, ಆಂಜೆಲೊರ್ ಘಟಕ),
ವಂದನೀಯ ವಿಲ್ಯಮ್ ಮಿನೇಜಸ್, (ಧರ್ಮಗುರುಗಳು, ಆಂಜೆಲೊರ್ ಚರ್ಚ್),
ರೊಯ್ ಕ್ಯಾಸ್ಟಲಿನೊ, (ಸಂಚಾಲಕರು, ಅಂತರ್ ಧರ್ಮೀಯ ಆಯೋಗ, ಮಂಗಳೂರು ಧರ್ಮಪ್ರಾಂತ್ಯ.)
ರಾಜೇಶ್ ಮಿಸ್ಕಿತ್, (ಅಂತರ್ ಧರ್ಮೀಯ ಆಯೋಗ ಕಾರ್ಯದರ್ಶಿ) ಹಾಗೂ
ಲೊಲಿನಾ ಡಿಸೋಜಾ, (ಪಾಲನಾ ಮಂಡಳಿ ಕಾರ್ಯದರ್ಶಿ) ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು