9:02 PM Sunday15 - February 2026
ಬ್ರೇಕಿಂಗ್ ನ್ಯೂಸ್
ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ… ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್ ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,… ನಟ ದರ್ಶನ್ ಬಿಡುಗಡೆಗೆ ಪ್ರಾರ್ಥಿಸಿ ಅಭಿಮಾನಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ: 100 ಕಿಮೀ. ನಡಿಗೆ Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ!

ಇತ್ತೀಚಿನ ಸುದ್ದಿ

ಡಿ. 23ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ರಾಜ್ಯ ಮಟ್ಟದ ಪತ್ರಕರ್ತರ ಸಮಾವೇಶ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ

05/11/2023, 11:56

ರಾಯಚೂರ(reporterkarnataka.com) ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿವತಿಯಿಂದ ರಾಜ್ಯಮಟ್ಟದ ಪತ್ರಕರ್ತರ ಕಾರ್ಯಾಗಾರ, ಪ್ರತಿಭಾ ಪುರಸ್ಕಾರ, ಸಾಂಸ್ಕೃತಿಕ ಉತ್ಸವ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ
ಡಿಸೆಂಬರ್ 23ರಂದು ನಡೆಯಲಿದೆ‌.

ಕಾರ್ಯನಿರತ ಪತ್ರಕರ್ತರ ಧ್ವನಿ ಮಸ್ಕಿ ತಾಲೂಕು ಘಟಕ ಅಧ್ಯಕ್ಷ ಹಾಗೂ ಹಿರಿಯ ಪತ್ರಕರ್ತರಾದ ವಿರೂಪಾಕ್ಷಯ್ಯ ಸ್ವಾಮಿ ಸಾಲೆಮಠ ಅಂತರಗಂಗೆ ಅವರು ಪತ್ರಿಕಾ ಪ್ರಕಟಣೆಯಲ್ಲಿ ಈ ವಿಷಯ ತಿಳಿಸಿದ್ದಾರೆ.
ಪತ್ರಕರ್ತರ ಧ್ವನಿ ಸಂಘಟನೆಯ ಸಂಸ್ಥಾಪಕ ರಾಜ್ಯಾಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ ಅವರ ನೇತೃತ್ವದಲ್ಲಿ ಎಲ್ಲ ಕಾರ್ಯಕ್ರಮಗಳು ನಡೆಯಲಿದೆ. ರಾಜ್ಯಮಟ್ಟದ ಪತ್ರಕರ್ತರ ಕಾರ್ಯಾಗಾರ, ಪ್ರತಿಭಾ ಪುರಸ್ಕಾರ, ಸಾಂಸ್ಕೃತಿಕ ಉತ್ಸವ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಡಿ. 23ರಂದು ಬೆಂಗಳೂರು ರವೀಂದ್ರ ಕಲಾಕ್ಷೇತ್ರದಲ್ಲಿ ಹಮ್ಮಿಕೊಂಡಿದೆ. ರಾಜ್ಯ ಅಧ್ಯಕ್ಷರ ಆದೇಶದಂತೆ ನಮ್ಮ ಸಂಘಟನೆಯ ಪತ್ರಕರ್ತರ ಮಿತ್ರರ ಮಕ್ಕಳಿಗೆ ಕೂಡ ಪ್ರಶಸ್ತಿ ನೀಡಲಾಗುತ್ತದೆ. ನಮ್ಮ ಸದಸ್ಯರು ತಮ್ಮ ಮಕ್ಕಳು ಅತಿ ಹೆಚ್ಚು ಅಂಕಗಳನ್ನು ಪಡೆದ ಮಾಹಿತಿಯನ್ನು ನೀಡಿ ಪ್ರಶಸ್ತಿ ಪಡೆಯಲು ಅರ್ಹತೆ ಹೊಂದಿದ್ದಾರೆ. 10 ನೇ ತರಗತಿ, ಪಿಯುಸಿ , ಡಿಗ್ರಿ, ಡಿಪ್ಲೊಮಾ ಹೀಗೆ ಇನ್ನಿತರ ವಿಧ್ಯಾರ್ಥಿಗಳು ಇದ್ದ ಪಾಲಕರು ಆಯಾ ತಾಲೂಕಿನ ಅಧ್ಯಕ್ಷರು ಹಾಗೂ ಜಿಲ್ಲಾಧ್ಯಕ್ಷ ಅವರನ್ನು ಸಂಪರ್ಕ ಮಾಡಬೇಕು. ಪ್ರತಿಶತ ಶೇಕಡಾ 80 ಅಂಕಗಳನ್ನು ಪಡೆದ ಮಕ್ಕಳು ಈ ಪ್ರಶಸ್ತಿಯನ್ನು ಪಡೆಯಲು ಅರ್ಹರು. ಆಸಕ್ತಿಯಿಂದ ಹೆಸರು ನೊಂದಾಯಿಸಬಹುದು ಸಂಪರ್ಕಿಸಿ ಆಯಾ ತಾಲೂಕು ಅಧ್ಯಕ್ಷರು ಜಿಲ್ಲಾಧ್ಯಕ್ಷರು ಹೆಸರು ನೋಂದಾಯಿಸಬಹುದು. ಈ ನಂಬರಿಗೆ ಕರೆ ಮಾಡಿ. 98801744902 ಸಂಪರ್ಕಿಸಿ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಕಾರ್ಯಕ್ರಮಕ್ಕೆ ನಾಡಿನ ಸಾಹಿತಿಗಳು, ಚಿಂತಕರು, ಚಲನಚಿತ್ರ ನಟರು ಹಾಗೂ ಜನಪ್ರತಿನಿಧಿಗಳು, ಮಾಧ್ಯಮ ಸಲಹೆಗಾರರು ನಾಡಿನ ಪತ್ರಕರ್ತರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು