12:54 PM Thursday31 - July 2025
ಬ್ರೇಕಿಂಗ್ ನ್ಯೂಸ್
ಮೈಸೂರಿನಲ್ಲಿ ನಿಷೇಧಿತ ಎಂಡಿಎಂಎ ಡ್ರಗ್ಸ್ ತಯಾರಿಕಾ ಘಟಕ ಪತ್ತೆ: ಸಂಸತ್ ನಲ್ಲಿ ಯದುವೀರ್… 3 ವರ್ಷ ಬಳಿಕ ಯಾವ ಪಕ್ಷದಿಂದ ಸ್ಪರ್ಧಿಸುತ್ತೇನೋ ಗೊತ್ತಿಲ್ಲ: ಶಾಸಕಿ ನಯನಾ ಮೋಟಮ್ಮ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಏನಿಲ್ಲ ಏನಿಲ್ಲ ಎನ್ನುವುದರ ನಡುವೆ ಸಿಕ್ಕೇ ಬಿಡ್ತು… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಸ್ಪಾಟ್ ನಂಬರ್ 4ರ ಉತ್ಖನನ ಪ್ರಕ್ರಿಯೆ ಆರಂಭ ಬಾಲಮಂದಿರ, ಮಹಿಳಾ ನಿಲಯಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ದಿಢೀರ್ ಭೇಟಿ: ಚಿಣ್ಣರನ್ನು ಮುದ್ದಾಡಿದ… USA | ಡ್ರೈವರ್ ಇಲ್ಲದ ಕಾರಿನಲ್ಲಿ ಪ್ರಯಾಣಿಸಿದ ಸ್ಪೀಕರ್ ಯು.ಟಿ. ಖಾದರ್!: ಇದು… Bangaluru | ಪತ್ರಿಕಾ ಸಂಪಾದಕರ ಕೈಕಟ್ಟಿ ಹಾಕಲಾಗುತ್ತಿದೆ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ… Mandya | ಒಂದೇ ದಿನ 1146 ಕೋಟಿ ವೆಚ್ಚದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ… ಬಾಳೆಬೈಲು – ಕುರುವಳ್ಳಿ ಬೈಪಾಸ್ ರಸ್ತೆಯಲ್ಲಿ ಕುಸಿಯುತ್ತಿರುವ ಗುಡ್ಡ: ಬ್ಯಾರಿಕೆಡ್ ಹಾಕಿರುವ ಪೊಲೀಸರು Shivamogga | ತೀರ್ಥಹಳ್ಳಿ: ಬೆಜ್ಜವಳ್ಳಿ ಸಮೀಪ ಸ್ಕೂಟಿಗೆ ಹಿಂಭಾಗದಿಂದ ಬಸ್ ಡಿಕ್ಕಿ; ಸವಾರ…

ಇತ್ತೀಚಿನ ಸುದ್ದಿ

ಡಿ. 28: ಅಖಿಲ ಕರ್ನಾಟಕ ರಾಜ್ಯ ಕೇಸರಿ ಟ್ರಸ್ಟ್ ವತಿಯಿಂದ ಕುದ್ರೋಳಿ ಕೊರಗಪ್ಪ ಕಲ್ಯಾಣ ಮಂಟಪದಲ್ಲಿ ಉಚಿತ ಸಾಮೂಹಿಕ ವಿವಾಹ

13/11/2023, 19:50

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporter Karnataka@gmail.com

ಅಖಿಲ ಕರ್ನಾಟಕ ರಾಜ್ಯ ಕೇಸರಿ ಟ್ರಸ್ಟ್ ವತಿಯಿಂದ ಮಂಗಳೂರಿನ ಕುದ್ರೋಳಿ ಗೋಕರ್ಣನಾಥ ದೇವಸ್ಥಾನದ ಕೊರಗಪ್ಪ ಕಲ್ಯಾಣ ಮಂಟಪದಲ್ಲಿ ಡಿ.28ರಂದು ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಯಲಿದೆ ಎಂದು ಟ್ರಸ್ಟ್ ನ ಸಂಸ್ಥಾಪಕ ದೀಪಕ್ ಜಿ. ಬೆಳ್ತಂಗಡಿ ಹೇಳಿದರು.
ಅವರು ಕೊಟ್ಟಿಗೆಹಾರದ ನಿಸರ್ಗ ಗ್ರ್ಯಾಂಡ್ ನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮಲೆನಾಡಿನ ಭಾಗದಲ್ಲಿ ಹಿಂದು ಬಡ ಕುಟುಂಬದ ವಧುವರರಿಗೆ ವಿವಾಹ ಮಾಡಲು ಟ್ರಸ್ಟ್ ಮುಂದೆ ಬಂದಿದ್ದು, 12 ಜೋಡಿಗಳ ಉಚಿತ ಸಾಮೂಹಿಕ ವಿವಾಹ ನಡೆಸಲು ತೀರ್ಮಾನಿಸಿದ್ದೇವೆ. ಈಗಾಲೇ 5 ಜೋಡಿಗಳು ಸಾಮೂಹಿಕವಾಗಿ ವಿವಾಹವಾಗಲು ಮುಂದೆ ಬಂದಿವೆ. ಇನ್ನೂ 7 ಜೋಡಿಗಳ ಅವಶ್ಯಕತೆಯಿದೆ. ಅದಲ್ಲದೇ ಮೂರು ಆಸಕ್ತ ಬಡ ಕುಟುಂಬಗಳಿಗೆ ಮನೆ ಹಸ್ತಾಂತರ ಕಾರ್ಯಕ್ರಮವನ್ನು ಇಟ್ಟುಕೊಂಡಿದ್ದೇವೆ. ಸಂಘಟನೆ ವತಿಯಿಂದ ನೂತನ ವಧುವರರಿಗೆ ಒಂದು ಪವನ್ ಚಿನ್ನದ ಕರಿಮಣಿ ಮತ್ತು ಉಡುಪುಗಳನ್ನು ನೀಡಲಾಗುವುದು’ಎಂದರು. ಅಖಿಲ ಕರ್ನಾಟಕ ರಾಜ ಕೇಸರಿ ಸಂಸ್ಥೆಯ ಗೌರವ ಸಲಹೆಗಾರ ಪ್ರೇಮ್ ರಾಜ್ ರೋಷನ್ ಸಿಕ್ವೇರಾ ಮಾತನಾಡಿ ‘ ನಮ್ಮ ಟ್ರಸ್ಟ್ ನಿಂದ ಕೊರೋನಾ ಸಮಯದಲ್ಲಿ 85 ಶವ ಸಂಸ್ಕಾರ, ಒಂದೇ ದಿನದಲ್ಲಿ 500 ನೇತ್ರ ನೋಂದಾವಣೆ, ಸೂರು ಇಲ್ಲದವರಿಗೆ 34 ಮನೆಗಳಿಗೆ ಆಸರೆ ನೀಡಿದ್ದೇವೆ. ಅನಾರೋಗ್ಯ ಪೀಡಿತರಿಗೆ ಸಹಾಯಾಸ್ತ ಮಾಡಿದ್ದೇವೆ. ವಿವಿಧ ಕ್ಷೇತ್ರದಲ್ಲಿ ನಮ್ಮ ಸಂಸ್ಥೆಯಿಂದ ಸಾಮಾಜಿಕ ಸೇವೆ ನೀಡಿದ್ದೇವೆ’ ಎಂದರು. ಸ್ಥಳೀಯ ಸಾಮಾಜಿಕ ಕಾರ್ಯಕರ್ತ ಸಂಜಯ್ ಗೌಡ ಮಾತನಾಡಿ ‘ಮಲೆನಾಡಿನ ಬಡ ಹಿಂದು ಯುವಕರಿಗೆ ನೆರವಾಗಲು ಈ ಸಂಸ್ಥೆ ಮುಂದೆ ಬಂದಿದೆ.ನಮ್ಮ ಮಲೆನಾಡಿನ ಯುವಕರು ಸಾಮೂಹಿಕವಾಗಿ ವಿವಾಹವಾಗಲು ಯೋಚಿಸಿದ್ದರೆ ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 9686714110/9901947498 ಕರೆ ಮಾಡಿ ಮಾಹಿತಿ ಪಡೆಯಬಹುದು ಎಂದು
ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು