3:56 PM Tuesday20 - January 2026
ಬ್ರೇಕಿಂಗ್ ನ್ಯೂಸ್
ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ

ಇತ್ತೀಚಿನ ಸುದ್ದಿ

ಡಿ. 28: ಅಖಿಲ ಕರ್ನಾಟಕ ರಾಜ್ಯ ಕೇಸರಿ ಟ್ರಸ್ಟ್ ವತಿಯಿಂದ ಕುದ್ರೋಳಿ ಕೊರಗಪ್ಪ ಕಲ್ಯಾಣ ಮಂಟಪದಲ್ಲಿ ಉಚಿತ ಸಾಮೂಹಿಕ ವಿವಾಹ

13/11/2023, 19:50

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporter Karnataka@gmail.com

ಅಖಿಲ ಕರ್ನಾಟಕ ರಾಜ್ಯ ಕೇಸರಿ ಟ್ರಸ್ಟ್ ವತಿಯಿಂದ ಮಂಗಳೂರಿನ ಕುದ್ರೋಳಿ ಗೋಕರ್ಣನಾಥ ದೇವಸ್ಥಾನದ ಕೊರಗಪ್ಪ ಕಲ್ಯಾಣ ಮಂಟಪದಲ್ಲಿ ಡಿ.28ರಂದು ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಯಲಿದೆ ಎಂದು ಟ್ರಸ್ಟ್ ನ ಸಂಸ್ಥಾಪಕ ದೀಪಕ್ ಜಿ. ಬೆಳ್ತಂಗಡಿ ಹೇಳಿದರು.
ಅವರು ಕೊಟ್ಟಿಗೆಹಾರದ ನಿಸರ್ಗ ಗ್ರ್ಯಾಂಡ್ ನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮಲೆನಾಡಿನ ಭಾಗದಲ್ಲಿ ಹಿಂದು ಬಡ ಕುಟುಂಬದ ವಧುವರರಿಗೆ ವಿವಾಹ ಮಾಡಲು ಟ್ರಸ್ಟ್ ಮುಂದೆ ಬಂದಿದ್ದು, 12 ಜೋಡಿಗಳ ಉಚಿತ ಸಾಮೂಹಿಕ ವಿವಾಹ ನಡೆಸಲು ತೀರ್ಮಾನಿಸಿದ್ದೇವೆ. ಈಗಾಲೇ 5 ಜೋಡಿಗಳು ಸಾಮೂಹಿಕವಾಗಿ ವಿವಾಹವಾಗಲು ಮುಂದೆ ಬಂದಿವೆ. ಇನ್ನೂ 7 ಜೋಡಿಗಳ ಅವಶ್ಯಕತೆಯಿದೆ. ಅದಲ್ಲದೇ ಮೂರು ಆಸಕ್ತ ಬಡ ಕುಟುಂಬಗಳಿಗೆ ಮನೆ ಹಸ್ತಾಂತರ ಕಾರ್ಯಕ್ರಮವನ್ನು ಇಟ್ಟುಕೊಂಡಿದ್ದೇವೆ. ಸಂಘಟನೆ ವತಿಯಿಂದ ನೂತನ ವಧುವರರಿಗೆ ಒಂದು ಪವನ್ ಚಿನ್ನದ ಕರಿಮಣಿ ಮತ್ತು ಉಡುಪುಗಳನ್ನು ನೀಡಲಾಗುವುದು’ಎಂದರು. ಅಖಿಲ ಕರ್ನಾಟಕ ರಾಜ ಕೇಸರಿ ಸಂಸ್ಥೆಯ ಗೌರವ ಸಲಹೆಗಾರ ಪ್ರೇಮ್ ರಾಜ್ ರೋಷನ್ ಸಿಕ್ವೇರಾ ಮಾತನಾಡಿ ‘ ನಮ್ಮ ಟ್ರಸ್ಟ್ ನಿಂದ ಕೊರೋನಾ ಸಮಯದಲ್ಲಿ 85 ಶವ ಸಂಸ್ಕಾರ, ಒಂದೇ ದಿನದಲ್ಲಿ 500 ನೇತ್ರ ನೋಂದಾವಣೆ, ಸೂರು ಇಲ್ಲದವರಿಗೆ 34 ಮನೆಗಳಿಗೆ ಆಸರೆ ನೀಡಿದ್ದೇವೆ. ಅನಾರೋಗ್ಯ ಪೀಡಿತರಿಗೆ ಸಹಾಯಾಸ್ತ ಮಾಡಿದ್ದೇವೆ. ವಿವಿಧ ಕ್ಷೇತ್ರದಲ್ಲಿ ನಮ್ಮ ಸಂಸ್ಥೆಯಿಂದ ಸಾಮಾಜಿಕ ಸೇವೆ ನೀಡಿದ್ದೇವೆ’ ಎಂದರು. ಸ್ಥಳೀಯ ಸಾಮಾಜಿಕ ಕಾರ್ಯಕರ್ತ ಸಂಜಯ್ ಗೌಡ ಮಾತನಾಡಿ ‘ಮಲೆನಾಡಿನ ಬಡ ಹಿಂದು ಯುವಕರಿಗೆ ನೆರವಾಗಲು ಈ ಸಂಸ್ಥೆ ಮುಂದೆ ಬಂದಿದೆ.ನಮ್ಮ ಮಲೆನಾಡಿನ ಯುವಕರು ಸಾಮೂಹಿಕವಾಗಿ ವಿವಾಹವಾಗಲು ಯೋಚಿಸಿದ್ದರೆ ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 9686714110/9901947498 ಕರೆ ಮಾಡಿ ಮಾಹಿತಿ ಪಡೆಯಬಹುದು ಎಂದು
ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು