6:35 PM Monday6 - July 2026
ಬ್ರೇಕಿಂಗ್ ನ್ಯೂಸ್
ಮರದ ದಿಮ್ಮಿ ಸಾಗಾಟ | ದಸರಾ ಅಂಬಾರಿ ಆನೆ ಕ್ಯಾಪ್ಟನ್ ಅಭಿಮನ್ಯು ದಂತ… ಬೇಲೂರು | SIR ಕರ್ತವ್ಯದ ಒತ್ತಡಕ್ಕೆ ಕುಸಿದು ಬಿದ್ದ ನಿವೃತ್ತಿಯಂಚಿನಲ್ಲಿರುವ 60ರ ಹರೆಯದ… ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿ ಎದುರಿಸಲು ಸಜ್ಜಾಗಿ: ಮೇಲುಸ್ತುವಾರಿ ಸಚಿವ ಯು.ಟಿ.… ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.…

ಇತ್ತೀಚಿನ ಸುದ್ದಿ

ಡಿ. 28: ಅಖಿಲ ಕರ್ನಾಟಕ ರಾಜ್ಯ ಕೇಸರಿ ಟ್ರಸ್ಟ್ ವತಿಯಿಂದ ಕುದ್ರೋಳಿ ಕೊರಗಪ್ಪ ಕಲ್ಯಾಣ ಮಂಟಪದಲ್ಲಿ ಉಚಿತ ಸಾಮೂಹಿಕ ವಿವಾಹ

13/11/2023, 19:50

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporter Karnataka@gmail.com

ಅಖಿಲ ಕರ್ನಾಟಕ ರಾಜ್ಯ ಕೇಸರಿ ಟ್ರಸ್ಟ್ ವತಿಯಿಂದ ಮಂಗಳೂರಿನ ಕುದ್ರೋಳಿ ಗೋಕರ್ಣನಾಥ ದೇವಸ್ಥಾನದ ಕೊರಗಪ್ಪ ಕಲ್ಯಾಣ ಮಂಟಪದಲ್ಲಿ ಡಿ.28ರಂದು ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಯಲಿದೆ ಎಂದು ಟ್ರಸ್ಟ್ ನ ಸಂಸ್ಥಾಪಕ ದೀಪಕ್ ಜಿ. ಬೆಳ್ತಂಗಡಿ ಹೇಳಿದರು.
ಅವರು ಕೊಟ್ಟಿಗೆಹಾರದ ನಿಸರ್ಗ ಗ್ರ್ಯಾಂಡ್ ನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮಲೆನಾಡಿನ ಭಾಗದಲ್ಲಿ ಹಿಂದು ಬಡ ಕುಟುಂಬದ ವಧುವರರಿಗೆ ವಿವಾಹ ಮಾಡಲು ಟ್ರಸ್ಟ್ ಮುಂದೆ ಬಂದಿದ್ದು, 12 ಜೋಡಿಗಳ ಉಚಿತ ಸಾಮೂಹಿಕ ವಿವಾಹ ನಡೆಸಲು ತೀರ್ಮಾನಿಸಿದ್ದೇವೆ. ಈಗಾಲೇ 5 ಜೋಡಿಗಳು ಸಾಮೂಹಿಕವಾಗಿ ವಿವಾಹವಾಗಲು ಮುಂದೆ ಬಂದಿವೆ. ಇನ್ನೂ 7 ಜೋಡಿಗಳ ಅವಶ್ಯಕತೆಯಿದೆ. ಅದಲ್ಲದೇ ಮೂರು ಆಸಕ್ತ ಬಡ ಕುಟುಂಬಗಳಿಗೆ ಮನೆ ಹಸ್ತಾಂತರ ಕಾರ್ಯಕ್ರಮವನ್ನು ಇಟ್ಟುಕೊಂಡಿದ್ದೇವೆ. ಸಂಘಟನೆ ವತಿಯಿಂದ ನೂತನ ವಧುವರರಿಗೆ ಒಂದು ಪವನ್ ಚಿನ್ನದ ಕರಿಮಣಿ ಮತ್ತು ಉಡುಪುಗಳನ್ನು ನೀಡಲಾಗುವುದು’ಎಂದರು. ಅಖಿಲ ಕರ್ನಾಟಕ ರಾಜ ಕೇಸರಿ ಸಂಸ್ಥೆಯ ಗೌರವ ಸಲಹೆಗಾರ ಪ್ರೇಮ್ ರಾಜ್ ರೋಷನ್ ಸಿಕ್ವೇರಾ ಮಾತನಾಡಿ ‘ ನಮ್ಮ ಟ್ರಸ್ಟ್ ನಿಂದ ಕೊರೋನಾ ಸಮಯದಲ್ಲಿ 85 ಶವ ಸಂಸ್ಕಾರ, ಒಂದೇ ದಿನದಲ್ಲಿ 500 ನೇತ್ರ ನೋಂದಾವಣೆ, ಸೂರು ಇಲ್ಲದವರಿಗೆ 34 ಮನೆಗಳಿಗೆ ಆಸರೆ ನೀಡಿದ್ದೇವೆ. ಅನಾರೋಗ್ಯ ಪೀಡಿತರಿಗೆ ಸಹಾಯಾಸ್ತ ಮಾಡಿದ್ದೇವೆ. ವಿವಿಧ ಕ್ಷೇತ್ರದಲ್ಲಿ ನಮ್ಮ ಸಂಸ್ಥೆಯಿಂದ ಸಾಮಾಜಿಕ ಸೇವೆ ನೀಡಿದ್ದೇವೆ’ ಎಂದರು. ಸ್ಥಳೀಯ ಸಾಮಾಜಿಕ ಕಾರ್ಯಕರ್ತ ಸಂಜಯ್ ಗೌಡ ಮಾತನಾಡಿ ‘ಮಲೆನಾಡಿನ ಬಡ ಹಿಂದು ಯುವಕರಿಗೆ ನೆರವಾಗಲು ಈ ಸಂಸ್ಥೆ ಮುಂದೆ ಬಂದಿದೆ.ನಮ್ಮ ಮಲೆನಾಡಿನ ಯುವಕರು ಸಾಮೂಹಿಕವಾಗಿ ವಿವಾಹವಾಗಲು ಯೋಚಿಸಿದ್ದರೆ ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 9686714110/9901947498 ಕರೆ ಮಾಡಿ ಮಾಹಿತಿ ಪಡೆಯಬಹುದು ಎಂದು
ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು